AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moonlighting: ಲೋಕಸಭೆಯಲ್ಲೂ ಪ್ರತಿಧ್ವನಿಸಿದ ಮೂನ್​ಲೈಟಿಂಗ್; ನಿಯಮಾನುಸಾರ ಅವಕಾಶವಿಲ್ಲವೆಂದ ಕೇಂದ್ರ

‘ಕೈಗಾರಿಕಾ ಉದ್ಯೋಗ ಕಾಯ್ದೆ 1946’ರ ಪ್ರಕಾರ ಉದ್ಯೋಗಿಗಳು ತಾವು ಕೆಲಸ ಮಾಡುತ್ತಿರುವ ಕಂಪನಿಯ ಹಿತಾಸಕ್ತಿಗೆ ವಿರುದ್ಧವಾಗಿ ಬೇರೊಂದು ಸಂಸ್ಥೆಯ ಪರವಾಗಿ ಕೆಲಸ ಮಾಡಬಾರದು. ಇದರಿಂದ ಉದ್ಯೋಗದಾತರ ಮೇಲೆ ಪ್ರತಿಕೂಲ ಪರಿಣಾಮವಾಗುತ್ತದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಹೇಳಿದ್ದಾರೆ.

Moonlighting: ಲೋಕಸಭೆಯಲ್ಲೂ ಪ್ರತಿಧ್ವನಿಸಿದ ಮೂನ್​ಲೈಟಿಂಗ್; ನಿಯಮಾನುಸಾರ ಅವಕಾಶವಿಲ್ಲವೆಂದ ಕೇಂದ್ರ
ಸಾಂದರ್ಭಿಕ ಚಿತ್ರImage Credit source: Reuters
TV9 Web
| Updated By: Ganapathi Sharma|

Updated on: Dec 19, 2022 | 5:21 PM

Share

ನವದೆಹಲಿ: ಕೆಲವು ತಿಂಗಳುಗಳ ಹಿಂದೆ ಐಟಿ ಉದ್ಯಮ ವಲಯದಲ್ಲಿ (IT Industry) ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮೂನ್​ಲೈಟಿಂಗ್ (Moonlighting) ವಿಚಾರ ಸಂಸತ್ತಿನಲ್ಲೂ ಪ್ರತಿಧ್ವನಿಸಿದೆ. ನಿಯಮಾನುಸಾರ ಮೂನ್​ಲೈಟಿಂಗ್​ಗೆ ಅವಕಾಶವಿಲ್ಲ. ಆದರೆ ಈ ವಿಚಾರವಾಗಿ ಯಾವುದೇ ಸಮೀಕ್ಷೆ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಸರಳವಾಗಿ ಹೇಳುವುದಾದರೆ ಕಂಪನಿಯೊಂದರ ಪೂರ್ಣಾವಧಿ ಉದ್ಯೋಗಿಯು ಉದ್ಯೋಗದಾತನ ಅರಿವಿಗೆ ಬಾರದೆ ಬೇರೆ ಕಂಪನಿ ಪರ ಕಾರ್ಯನಿರ್ವಹಿಸುವುದನ್ನು ಮೂನ್​ಲೈಟಿಂಗ್ ಎನ್ನಲಾಗುತ್ತದೆ. ಕೋವಿಡೋತ್ತರ ದಿನಗಳಲ್ಲಿ ಮತ್ತು ವರ್ಕ್​ ಫ್ರಂ ಹೋಮ್ ಅನ್ನು ಕೆಲವು ಕಂಪನಿಗಳು ಕೊನೆಗೊಳಿಸಲು ಮುಂದಾದ​ ಸಂದರ್ಭದಲ್ಲಿ ಈ ಕುರಿತು ಐಟಿ ವಲಯದಲ್ಲಿ ಹೆಚ್ಚು ಚರ್ಚೆಯಾಗಿತ್ತು.

‘ಕೈಗಾರಿಕಾ ಉದ್ಯೋಗ ಕಾಯ್ದೆ 1946’ರ ಪ್ರಕಾರ ಉದ್ಯೋಗಿಗಳು ತಾವು ಕೆಲಸ ಮಾಡುತ್ತಿರುವ ಕಂಪನಿಯ ಹಿತಾಸಕ್ತಿಗೆ ವಿರುದ್ಧವಾಗಿ ಬೇರೊಂದು ಸಂಸ್ಥೆಯ ಪರವಾಗಿ ಕೆಲಸ ಮಾಡಬಾರದು. ಇದರಿಂದ ಉದ್ಯೋಗದಾತರ ಮೇಲೆ ಪ್ರತಿಕೂಲ ಪರಿಣಾಮವಾಗುತ್ತದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Moonlighting: 300 ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ

ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸಲು ಮೂನ್​ಲೈಟಿಂಗ್ ಒಂದು ಸೂಕ್ತ ಕಾರಣ ಎಂಬುದನ್ನು ಸರ್ಕಾರ ಒಪ್ಪುತ್ತದೆಯೇ ಎಂಬ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಈ ರೀತಿಯ ಉತ್ತರ ನೀಡಿದ್ದಾರೆ.

ಉದ್ಯೋಗಿಗಳ ವಜಾ ಕುರಿತು ಸಚಿವರು ಹೇಳಿದ್ದೇನು?

ಮೂನ್​ಲೈಟಿಂಗ್ ಪರಿಣಾಮವಾಗಿ ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದನ್ನು ಸರ್ಕಾರ ಗಮನಿಸಿದೆಯೇ ಎಂಬ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉದ್ಯೋಗಕ್ಕೆ ನೇಮಕಾತಿ ಮತ್ತು ವಜಾಗೊಳಿಸುವಿಕೆ ಉದ್ಯಮ ವಲಯದ ಸಾಮಾನ್ಯ ಪ್ರಕ್ರಿಯೆಗಳಾಗಿವೆ. ಮೂನ್​ಲೈಟಿಂಗ್​ ಕಾರಣಕ್ಕಾಗಿಯೇ ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಮೂನ್​ಲೈಟಿಂಗ್ ಬಗ್ಗೆ ಸರ್ಕಾರ ಸಮೀಕ್ಷೆ ಹಾಗೂ ಅಧ್ಯಯನ ನಡೆಸಲಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಅವರು, ಇಲ್ಲವೆಂದು ಉತ್ತರಿಸಿದ್ದಾರೆ.

ಮೂನ್​ಲೈಟಿಂಗ್ ಆರೋಪದಲ್ಲಿ ವಿಪ್ರೋ ಸೇರಿದಂತೆ ಕೆಲವು ಐಟಿ ಕಂಪನಿಗಳು ಇತ್ತೀಚೆಗೆ ಹತ್ತಾರು ಉದ್ಯೋಗಿಗಳನ್ನು ವಜಾಗೊಳಿಸಿದ್ದವು. ಅಪ್ರಾಮಾಣಿಕ ನಡವಳಿಕೆ ತೋರಿದ 20 ಮಂದಿ ಉನ್ನತ ಸಿಬ್ಬಂದಿಯನ್ನು ಕಂಪನಿಯಿಂದ ವಜಾ ಮಾಡುವ ಬಗ್ಗೆ ಕೇವಲ 10 ನಿಮಿಷಗಳಲ್ಲಿ ನಿರ್ಧಾರ ಕೈಗೊಂಡಿದ್ದೆವು ಎಂದು ವಿಪ್ರೋ ಅಧ್ಯಕ್ಷ ರಿಷದ್ ಪ್ರೇಮ್ ಜಿ ಹೇಳಿದ್ದರು. ಮೂನ್​ಲೈಟಿಂಗ್​ ಹಿನ್ನೆಲೆಯಲ್ಲಿ ವಿಪ್ರೋ ತನ್ನ 300 ಉದ್ಯೋಗಿಗಳನ್ನು ಸೆಪ್ಟೆಂಬರ್​ನಲ್ಲಿ ವಜಾಗೊಳಿಸಿತ್ತು. ಕೆಲವು ತಿಂಗಳುಗಳಿಂದ ಈ ಉದ್ಯೋಗಿಗಳು ತಮ್ಮ ಕಂಪನಿ ಜತೆಗೆ ಇತರೆ ಕಂಪನಿಗಳಿಗಾಗಿ ಕೆಲಸ ಮಾಡುತ್ತಿರುವ ವಿಷಯ ಬೆಳಕಿಗೆ ಬಂದ ಕಾರಣ ಕ್ರಮ ಕೈಗೊಂಡಿರುವುದಾಗಿ ವಿಪ್ರೋ ಹೇಳಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ