AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moonlighting: ಒಂದೇ ಬಾರಿಗೆ ಎರಡು ಕಂಪನಿಗಳಲ್ಲಿ ಕೆಲಸ ಮಾಡುವಂತಿಲ್ಲ, ತನ್ನ ಉದ್ಯೋಗಿಗಳಿಗೆ ಇನ್ಫೋಸಿಸ್ ಎಚ್ಚರಿಕೆ

ಒಂದೇ ಬಾರಿಗೆ ಎರಡು ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಇನ್​ಫೋಸಿಸ್ ಸಂಸ್ಥೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ.

Moonlighting: ಒಂದೇ ಬಾರಿಗೆ ಎರಡು ಕಂಪನಿಗಳಲ್ಲಿ ಕೆಲಸ ಮಾಡುವಂತಿಲ್ಲ, ತನ್ನ ಉದ್ಯೋಗಿಗಳಿಗೆ ಇನ್ಫೋಸಿಸ್ ಎಚ್ಚರಿಕೆ
Infosys
TV9 Web
| Edited By: |

Updated on:Sep 13, 2022 | 12:34 PM

Share

ಒಂದೇ ಬಾರಿಗೆ ಎರಡು ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಇನ್​ಫೋಸಿಸ್ ಸಂಸ್ಥೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ.

ಒಂದು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳು ತಮ್ಮ ಕಂಪನಿಯ ಮಾಲೀಕರ ಗಮನಕ್ಕೆ ತರದೇ, ಮತ್ತೊಂದು ಕಂಪನಿಯಲ್ಲಿ ಉದ್ಯೋಗ ಮಾಡುವುದನ್ನು ಮೂನ್​ಲೈಟಿಂಗ್ ಎನ್ನುತ್ತಾರೆ.

ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಮಂದಿ ತಮ್ಮ ಕೆಲಸ ಕಳೆದುಕೊಂಡು ವರ್ಷಗಟ್ಟಲೆ ನಿರುದ್ಯೋಗದ ಸಮಸ್ಯೆ ಎದುರಿಸಿದ್ದರು. ಇನ್ನೂ ಕೆಲವು ಕಂಪನಿಗಳಲ್ಲಿ ಸಂಬಳದ ಕಡಿತ ಮಾಡಲಾಗಿತ್ತು. ಆಗ ಕೆಲವು ಉದ್ಯೋಗಿಗಳು ಪಾರ್ಟ್​ ಟೈಂ ಉದ್ಯೋಗಕ್ಕಿಳಿದಿದ್ದರು.

ಈ ಕುರಿತು ಇನ್​ಫೋಸಿಸ್ ಕಂಪನಿಯು ಕಠಿಣ ನಿರ್ಧಾರ ತೆಗೆದುಕೊಂಡಿದೆ, ತಮ್ಮ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಬೇರೆ ಕಂಪನಿಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಒಂದೊಮ್ಮೆ ಇಂತಹ ವಿಚಾರ ಬೆಳಕಿಗೆ ಬಂದರೆ ಕೂಡಲೇ ಆ ಉದ್ಯೋಗಿಯನ್ನು ಕೆಲಸದಿಂದ ತೆಗೆದುಹಾಕಲಾಗುವುದು ಎಂದು ಎಚ್ಚರಿಕೆ ನೀಡಿದೆ. ಅಮೆರಿಕದಲ್ಲಿ ಹೆಚ್ಚುವರಿ ಆದಾಯಕ್ಕಾಗಿ ತಮ್ಮ ನಿಯಮಿತವಾದ ಉದ್ಯೋಗದ ಜತೆಗೆ ಹೆಚ್ಚುವರಿಯಾಗಿ ಎರಡನೇ ಉದ್ಯೋಗವನ್ನು ಆಶ್ರಯಿಸಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಉದ್ಯೋಗದ ಒಪ್ಪಂದದಲ್ಲಿ ನೌಕರನು ಒಂದೇ ಉದ್ಯೋಗ ಮಾಡಬೇಕು ಎನ್ನುವ ನಿಯಮಿದ್ದರೆ , ಆಗ ನೌಕರ ಇತರೆ ಕಂಪನಿಗಳಲ್ಲಿ ಕೆಲಸ ಮಾಡುವಂತಿಲ್ಲ. ಒಂದೊಮ್ಮೆ ಆ ನಿಯಮ ಉಲ್ಲಂಘಿಸಿ ಕೆಲಸ ಮಾಡಿದರೆ ಅದನ್ನು ವಂಚನೆ ಎಂದು ಕರೆಯಲಾಗುತ್ತದೆ.

ಮೂನ್​ಲೈಟಿಂಗ್​ನಿಂದ ಉದ್ಯೋಗಿಯು ಒಂದು ಉದ್ಯೋಗದ ಕಡೆಗೆ ಹೆಚ್ಚಿನ ಗಮನಕೊಡಲು ಸಾಧ್ಯವಾಗುವುದಿಲ್ಲ ಇದು ಮೂಲ ಕಂಪನಿಯ ಉತ್ಪಾದಕತೆ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಪ್ರಸ್ತುತ ವಾದವಾಗಿದೆ.

Published On - 12:26 pm, Tue, 13 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ