AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Humanitarian Crisis: ವಿಶ್ವದಾದ್ಯಂತ 10 ಕೋಟಿಗೂ ಹೆಚ್ಚು ಮಂದಿ ಬಲವಂತದಿಂದ ತಮ್ಮ ಮನೆ ತೊರೆದಿದ್ದಾರೆ ಎನ್ನುತ್ತಿದೆ ವಿಶ್ವಸಂಸ್ಥೆಯ ಈ ವರದಿ

ಯುದ್ಧ, ಬಿಕ್ಕಟ್ಟು, ಕಿರುಕುಳ ಸೇರಿದಂತೆ ನಾನಾ ಕಾರಣಗಳಿಗಾಗಿ 10 ಕೋಟಿಗೂ ಹೆಚ್ಚು ಮಂದಿ ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂಬ ವಿಶ್ವಸಂಸ್ಥೆ ತೆರೆದಿಟ್ಟಿದೆ.

Humanitarian Crisis: ವಿಶ್ವದಾದ್ಯಂತ 10 ಕೋಟಿಗೂ ಹೆಚ್ಚು ಮಂದಿ ಬಲವಂತದಿಂದ ತಮ್ಮ ಮನೆ ತೊರೆದಿದ್ದಾರೆ ಎನ್ನುತ್ತಿದೆ ವಿಶ್ವಸಂಸ್ಥೆಯ ಈ ವರದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 23, 2022 | 12:36 PM

Share

ವಿಶ್ವದಾದ್ಯಂತ 10 ಕೋಟಿಗೂ ಹೆಚ್ಚು ಮಂದಿ ತಮ್ಮ ಮನೆಗಳಿಂದ ಚದುರಿ ಹೋಗಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (UNCHR) ಸೋಮವಾರ ಹೇಳಿದೆ. ಹಿಂಸೆ, ಬಿಕ್ಕಟ್ಟು, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕಿರುಕುಳ ಮೊದಲಾದ ಕಾರಣಗಳಿಗೆ ತಮ್ಮ ಸ್ಥಳಗಳನ್ನು ತೊರೆದಿದ್ದಾರೆ ಎಂದು ಡೇಟಾ ತೋರಿಸಿದೆ. ಉಕ್ರೇನ್​ನಲ್ಲಿನ ಯುದ್ಧವು (Russia- Ukraine War) ಹತ್ತಾರು ಲಕ್ಷ ಮಂದಿ ತಮ್ಮ ಮನೆಗಳನ್ನು ಬಿಡುವಂತೆ ಮಾಡಿದೆ. ಇಥಿಯೋಪಿಯಾ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಅಂಶಗಳು ಸಹ ಸೇರಿಕೊಂಡು ಸಂಖ್ಯೆ ಹೆಚ್ಚಾಗಲು ಕಾರಣವಾಗಿವೆ. “ಇದೊಂದು ದಾಖಲೆ, ಹಿಂದೆಂದೂ ಆಗಿರಲಿಲ್ಲ,” ಎಂದು ನಿರಾಶ್ರಿತರ ವಿಭಾಗಕ್ಕೆ ವಿಶ್ವಸಂಸ್ಥೆಯ ಹೈ ಕಮಿಷರ್ ಫಿಲಿಪ್ಪೊ ಗ್ರಾಂಡಿ ಪತ್ರಕರ್ತರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೊಂದು ಎಚ್ಚರಿಕೆಯ ಕರೆ. ವಿನಾಶಕಾರಿ ಬಿಕ್ಕಟ್ಟು ತಡೆದು, ಬಗೆಹರಿಸಿ, ಕಿರುಕುಳವನ್ನು ಕೊನೆಗೊಳಿಸಿ, ಅಮಾಯಕ ಜನರು ತಮ್ಮ ಮನೆಗಳನ್ನು ಬಿಡುವುದಕ್ಕೆ ಕಾರಣವಾಗಿರುವ ಸಮಸ್ಯೆಗಳನ್ನು ನಿವಾರಿಸಬೇಕಿದೆ ಎಂದಿದ್ದಾರೆ.

ಯುಎನ್​ಎಚ್​ಸಿಆರ್​ ಡೇಟಾದಲ್ಲಿ ನಿರಾಶ್ರಿತರು, ಆಶ್ರಯ ಕೋರಿದವರು ಮತ್ತು ತಮ್ಮದೇ ದೇಶದಲ್ಲಿ ನೆಲೆ ಕಳೆದುಕೊಂಡವರು ಒಳಗೊಂಡಿದ್ದಾರೆ. ವಿಶ್ವ ಸಂಸ್ಥೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಈ ಯುಎನ್​ಎಚ್​ಸಿಆರ್​ ಕಳೆದ ವಾರ ಹೇಳಿರುವ ಪ್ರಕಾರ, ಕಳೆದ ವರ್ಷದ ಕೊನೆ ಹೊತ್ತಿಗೆ ತಮ್ಮದೇ ದೇಶದಲ್ಲಿ ನೆಲೆ ಕಳೆದುಕೊಂಡವರ ಪ್ರಮಾಣವು ದಾಖಲೆಯ ಸಂಖ್ಯೆಯಾದ 6 ಕೋಟಿಗೆ ತಲುಪಿದೆ.

ಇದನ್ನೂ ಓದಿ: ಉಕ್ರೇನ್​ ಮೇಲಿನ ರಷ್ಯಾ ದಾಳಿ ಪಕ್ಕಾ ಪ್ಲಾನ್​ನಂತೆ ನಡೀತಿದೆ: ಅಂದು ಸಿರಿಯಾದಲ್ಲಿಯೂ ಇದೆಲ್ಲಾ ಆಗಿತ್ತು

ಈ ರೀತಿ ನೆಲೆ ಕಳೆದುಕೊಳ್ಳುವುದಕ್ಕೆ ಕಾರಣ ಏನು ಎಂಬುದನ್ನು ಕಂಡುಕೊಂಡು, ಅದು ಸರಿಪಡಿಸುವುದಕ್ಕೆ ಪ್ರಯತ್ನಿಸಬೇಕು ಎಂದು ಒತ್ತಾಯಿಸಿರುವ ಅವರು, ಮಾನವೀಯ ಅನುದಾನ ಎಂಬುದು ಈ ಸನ್ನಿವೇಶಕ್ಕೆ ಬಹಳ ಸೂಕ್ತವಾದದ್ದು ಎಂದಿದ್ದಾರೆ. “ಈಗಿನ ಟ್ರೆಂಡ್​ ಅನ್ನು ಉಲ್ಟಾ ಮಾಡಬೇಕಿದ್ದಲ್ಲಿ ಅದಕ್ಕಿರುವ ಉತ್ತರ ಅಂದರೆ ಶಾಂತಿ ಮತ್ತು ಸ್ಥಿರತೆ. ಆಗಷ್ಟೇ ಜನರು ತಮ್ಮ ಮನೆಗಳಲ್ಲಿ ಅಪಾಯಕಾರಿ ಸ್ಥಿತಿಯ ಮಧ್ಯೆ ಸಿಲುಕುವುದಿಲ್ಲ. ಅಥವಾ ಅಪಾಯಕಾರಿ ಹೋರಾಟಗಳಲ್ಲಿ ನಲುಗಿ, ಮನೆ ತೊರೆಯುವಂತಾಗುವುದಿಲ್ಲ,” ಎಂದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Mon, 23 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!