AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ಮಗನನ್ನು ಬಿಟ್ಟು ಉಳಿದ ಮಕ್ಕಳಿಗೆ ಆಸ್ತಿ ಹಂಚಿಕೆ ಮಾಡಿ ವಿಲ್ ಬರೆದ ತಾಯಿ; ಕೇಸ್ ಹಾಕಿದ ಮಗನಿಗೆ ಸೋಲು; ಕಾರಣ ಏನು?

Can a mother cut a son out of her Will? ತನ್ನನ್ನು ಬಿಟ್ಟು ಉಳಿದ ಸೋದರ ಸೋದರಿಯರಿಗೆ ಆಸ್ತಿ ಹಂಚಿ ತಾಯಿ ವಿಲ್ ಬರೆದಿರುವುದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಗನಿಗೆ ಸೋಲುಂಟಾಗಿದೆ. ಕೇರಳ ಹೈಕೋರ್ಟ್ ಆ ತಾಯಿಯ ಪರವಾಗಿ ತೀರ್ಪು ನೀಡಿದೆ. ಕೆ.ವಿ. ರಾಮಚಂದ್ರರಾವ್ ಅವರ ಪತ್ನಿ ಹಾಗೂ ಅವರ ಮಗನ ಈ ವ್ಯಾಜ್ಯದ ವಿವರ ಇಲ್ಲಿದೆ.

ಒಬ್ಬ ಮಗನನ್ನು ಬಿಟ್ಟು ಉಳಿದ ಮಕ್ಕಳಿಗೆ ಆಸ್ತಿ ಹಂಚಿಕೆ ಮಾಡಿ ವಿಲ್ ಬರೆದ ತಾಯಿ; ಕೇಸ್ ಹಾಕಿದ ಮಗನಿಗೆ ಸೋಲು; ಕಾರಣ ಏನು?
ಕೋರ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 04, 2026 | 1:05 PM

Share

ತಿರುವನಂತಪುರಂ, ಮಾರ್ಚ್ 4: ಗಂಡನಿಂದ ದಾನವಾಗಿ ಬಂದ ಭೂಮಿಯನ್ನು ಮಹಿಳೆಯೊಬ್ಬರು ತನ್ನ ಆರು ಮಕ್ಕಳಲ್ಲಿ ಐವರಿಗೆ ಮಾತ್ರವೇ ಹಂಚಿಕೆ ಮಾಡಿ ವಿಲ್ ಬರೆದಿದ್ದರು. ಈಗ ಆಸ್ತಿ ಸಿಗದ ಆ ಒಬ್ಬ ಮಗ ಕೋರ್ಟ್ ಮೆಟ್ಟಿಲೇರಿದರು. ಆದರೆ, ನ್ಯಾಯಾಲಯದಲ್ಲಿ ತಾಯಿಯ ಪರವಾಗಿ ತೀರ್ಪು ಬಂದಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ತನಗೆ ಹಕ್ಕಿದೆ ಎನ್ನುವ ಮಗನ ವಾದವನ್ನು ಕೋರ್ಟ್ ಒಪ್ಪಿಲ್ಲ.

ಏನಿದು ಪ್ರಕರಣ?

ವೆಂಕಿಟನ್ ಎಂಬ್ರಾಂದಿರಿ ಎಂಬುವವರು 1925ರಲ್ಲಿ ಒಂದು ಎಕರೆ 26 ಸೆಂಟ್ ಜಮೀನನ್ನು ಖರೀದಿ ಮಾಡುತ್ತಾರೆ. ಅವರಿಗೆ ಇಬ್ಬರು ಹೆಣ್ಮಕ್ಕಳು ಸೇರಿ ಆರು ಮಕ್ಕಳಿದ್ದರು. ಅವರಲ್ಲಿ ಟಿ.ವಿ. ರಾಮಚಂದ್ರ ರಾವ್ ಒಬ್ಬರು.

ವೆಂಕಿಟನ್ ಮೃತಪಟ್ಟಾಗ ಮಕ್ಕಳೆಲ್ಲರೂ 1967ರಲ್ಲಿ ಪಾರ್ಟಿಶನ್ ಡೀಡ್ ಮಾಡಿದರು. ಆಗ ರಾಮಚಂದ್ರ ರಾವ್ ಅವರಿಗೆ 37 ಸೆಂಟ್ ಆಸ್ತಿ ಸಿಕ್ಕಿತು. ರಾಧಮ್ಮ ಎನ್ನುವ ಸಹೋದರಿಯೊಬ್ಬರು ತನ್ನ ಪಾಲಿನ 9 ಸೆಂಟ್ ಜಾಗವನ್ನು ಬಿಟ್ಟುಕೊಡುತ್ತಾರೆ. ಟಿ.ವಿ. ರಾಮಚಂದ್ರರಾವ್ ಅವರಿಗೆ ಸಿಕ್ಕ ಜಾಗ 46 ಸೆಂಟ್​ಗೆ ಏರುತ್ತದೆ.

ಇದನ್ನೂ ಓದಿ: ಮಹಿಳೆಯ ಘೋಷಿತ ಆದಾಯ 4.81 ಲಕ್ಷ ರೂ; ಇನ್ಷೂರೆನ್ಸ್ ಕಟ್ಟಿದ್ದು 50 ಲಕ್ಷ ರೂ; ಕೋರ್ಟ್​ಗೆ ಹೋಯ್ತು ಕೇಸ್

1978ರಲ್ಲಿ ರಾಮಚಂದ್ರರಾವ್ ಈ 46 ಸೆಂಟ್ ಜಾಗವನ್ನು ತಮ್ಮ ಧರ್ಮಪತ್ನಿಗೆ ದಾನವಾಗಿ ನೀಡುತ್ತಾರೆ. 1986ರಲ್ಲಿ ರಾವ್ ಮೃತರಾಗುತ್ತಾರೆ. ಇವರಿಗೆ ಆರು ಮಕ್ಕಳಿದ್ದಾರೆ. ರಾಮಚಂದ್ರರಾವ್ ನಿಧನರಾಗಿ ಕೆಲ ವರ್ಷಗಳ ಬಳಿಕ ಅವರ ಪತ್ನಿ ವಿಲ್ ಬರೆಯುತ್ತಾರೆ. ಒಬ್ಬ ಮಗನನ್ನು ಬಿಟ್ಟು ಉಳಿದ ಐವರಿಗೆ ಆಸ್ತಿ ಹಂಚಿಕೆ ಮಾಡಿ ವಿಲ್ ಬರೆಯುತ್ತಾರೆ.

ಇದನ್ನು ಆಕ್ಷೇಪಿಸಿ ಮಗ ಕೋರ್ಟ್ ಮೆಟ್ಟಿಲೇರುತ್ತಾನೆ. ಇದು ಪಿತ್ರಾರ್ಜಿತ ಆಸ್ತಿಯಾಗಿದ್ದು ತನಗೆ ಹಕ್ಕು ಇದೆ ಎಂದು ವಾದಿಸುತ್ತಾನೆ. ಆದರೆ, ರಾಮಚಂದ್ರ ರಾವ್ ಅವರ ಕಾಪರ್ಸನರಿ ಪ್ರಾಪರ್ಟಿಯಲ್ಲವಾದ್ದರಿಂದ ಅವರ ಮಗನಿಗೆ ಆಸ್ತಿ ಹಕ್ಕು ಇಲ್ಲ. ಇದರ ಪೂರ್ಣ ಹಕ್ಕು ತನಗೇ ಸೇರಿದ್ದು ಎಂದು ಆತನ ತಾಯಿ ವಾದ ಮಾಡುತ್ತಾರೆ. ಕೋರ್ಟ್ ಕೂಡ ಈ ವಾದವನ್ನು ಪುರಸ್ಕರಿಸಿ, ತಾಯಿ ಪರವಾಗಿ ತೀರ್ಪು ಕೊಡುತ್ತದೆ.

ಇದನ್ನೂ ಓದಿ: ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್​ಗೂ ಸೈ, ಹೆಲ್ತ್​ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್?

ಪಿತ್ರಾರ್ಜಿತ ಆಸ್ತಿ ಎನಿಸುವುದು ಹೇಗೆ?

ನಾಲ್ಕು ತಲೆಮಾರುಗಳಿಂದ ಯಾವುದೇ ಪಾರ್ಟಿಶನ್ ಇಲ್ಲದೇ ಆಸ್ತಿಯು ಬಳುವಳಿಯಾಗಿ ಬಂದಿರಬೇಕು. ಪಾರ್ಟಿಶನ್ ಆದಾಗ ಅದು ಸ್ವಂತ ಸಂಪಾದನೆ ಎಂದು ಪರಿಗಣಿತವಾಗುತ್ತದೆ. ರಾಮಚಂದ್ರರಾವ್ ಅವರು ತಮ್ಮ ತಂದೆಯಿಂದ ಆಸ್ತಿಯನ್ನು ಪಾರ್ಟಿಶನ್ ಡೀಡ್ ಮೂಲಕ ಪಡೆದಿದ್ದರು. ಹೀಗಾಗಿ, ಅದು ಅವರ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಗೆ ಹಕ್ಕುದಾರರನ್ನಾಗಿ ಮಾಡಿರಲಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Wed, 4 March 26

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ