AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Government Asset Sale: ಸರ್ಕಾರದಿಂದ ಎಂಟಿಎನ್ಎಲ್​, ಬಿಎಸ್​ಎನ್​ಎಲ್ ರಿಯಲ್ ಎಸ್ಟೇಟ್ ಆಸ್ತಿ 1100 ಕೋಟಿಗೆ ಮಾರಾಟ

ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಬಿಎಸ್​ಎನ್​ಎಲ್​, ಎಂಟಿಎನ್​ಎಲ್​ ರಿಯಲ್ ಎಸ್ಟೇಟ್ ಆಸ್ತಿಗಳನ್ನು 1100 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡುವುದಕ್ಕೆ ನಿರ್ಧರಿಸಲಾಗಿದೆ.

Government Asset Sale: ಸರ್ಕಾರದಿಂದ ಎಂಟಿಎನ್ಎಲ್​, ಬಿಎಸ್​ಎನ್​ಎಲ್ ರಿಯಲ್ ಎಸ್ಟೇಟ್ ಆಸ್ತಿ 1100 ಕೋಟಿಗೆ ಮಾರಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 20, 2021 | 8:20 PM

Share

DIPAM ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ದಾಖಲೆಗಳ ಪ್ರಕಾರ, ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆಗಳಾದ ಎಂಟಿಎನ್​ಎಲ್​ ಮತ್ತು ಬಿಎಸ್​ಎನ್​ಎಲ್​ನ ರಿಯಲ್ ಎಸ್ಟೇಟ್ ಆಸ್ತಿಗಳನ್ನು ಸುಮಾರು 1,100 ಕೋಟಿ ರೂಪಾಯಿಗಳ ಮೀಸಲು ಬೆಲೆಗೆ ಮಾರಾಟ ಮಾಡಲು ದಾಖಲೆಗಳನ್ನು ಅಪ್​ಲೋಡ್​ ಮಾಡಿದೆ. ಹೈದರಾಬಾದ್, ಚಂಡೀಗಡ, ಭಾವನಗರ ಮತ್ತು ಕೋಲ್ಕತ್ತಾದಲ್ಲಿರುವ ಬಿಎಸ್‌ಎನ್‌ಎಲ್ ಆಸ್ತಿಗಳನ್ನು ಸುಮಾರು 800 ಕೋಟಿ ರೂಪಾಯಿಗಳ ಮೀಸಲು ಬೆಲೆಗೆ ಮಾರಾಟ ಮಾಡಲು ಪೋಸ್ಟ್ ಮಾಡಲಾಗಿದೆ. ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ (DIPAM) ವೆಬ್‌ಸೈಟ್ ಮುಂಬೈನ ವಸಾರಿ ಹಿಲ್, ಗೋರೆಗಾಂವ್‌ನಲ್ಲಿರುವ MTNL ಆಸ್ತಿಗಳನ್ನು ಸುಮಾರು 270 ಕೋಟಿ ರೂಪಾಯಿಗಳ ಮೀಸಲು ಬೆಲೆಗೆ ಮಾರಾಟ ಮಾಡಲು ಲಿಸ್ಟ್ ಮಾಡಿದೆ.

ಒಶಿವಾರದಲ್ಲಿ ಇರುವ ಎಂಟಿಎನ್​ಎಲ್​ನ 20 ಫ್ಲ್ಯಾಟ್‌ಗಳನ್ನು ಕಂಪೆನಿಯ ಆಸ್ತಿ ಹಣ ಗಳಿಸುವ ಯೋಜನೆಯ ಭಾಗವಾಗಿ ಮಾರಾಟಕ್ಕೆ ಇಡಲಾಗಿದೆ. ಫ್ಲ್ಯಾಟ್‌ಗಳು 1-ಕೋಣೆಯ ಸೆಟ್‌ನ ಎರಡು ಯೂನಿಟ್, 1 ಮಲಗುವ ಕೋಣೆ ಹಾಲ್ ಮತ್ತು ಅಡುಗೆಮನೆಯ 17 ಘಟಕಗಳು (BHK) ಮತ್ತು 2 ಬಿಎಚ್​ಕೆ ಒಂದು ಘಟಕವನ್ನು ಒಳಗೊಂಡಿವೆ. ಅವುಗಳ ಮೀಸಲು ಬೆಲೆ 52.26 ಲಕ್ಷ ರೂಪಾಯಿಯಿಂದ 1.59 ಕೋಟಿ ರೂಪಾಯಿ ಇದೆ.

ಎಂಟಿಎನ್​ಎಲ್​ನ ಆಸ್ತಿಗಳ ಇ-ಹರಾಜು ಡಿಸೆಂಬರ್ 14ರಂದು ನಡೆಯಲಿದೆ. 2019ರ ಅಕ್ಟೋಬರ್​ನಲ್ಲಿ ಸರ್ಕಾರವು ಅನುಮೋದಿಸಿದ ಎಂಟಿಎನ್ಎಲ್​ ಮತ್ತು ಬಿಎಸ್​ಎನ್​ಎಲ್​ಗಾಗಿ 69,000 ಕೋಟಿ ರೂಪಾಯಿಗಳ ಆಸ್ತಿ ಹಣಗಳಿಕೆ ಪುನಶ್ಚೇತನ ಯೋಜನೆಯ ಭಾಗವಾಗಿದೆ. ಎರಡೂ ಸಾರ್ವಜನಿಕ ವಲಯದ ಸಂಸ್ಥೆಗಳು 2022ರ ವೇಳೆಗೆ 37,500 ಕೋಟಿ ಮೌಲ್ಯದ ಆಸ್ತಿಯನ್ನು ಗುರುತಿಸಿ, ಹಣ ಗಳಿಸಬೇಕಿದೆ.

ಇದನ್ನೂ ಓದಿ: 6 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧಾರ; ವಿತ್ತೀಯ ಕೊರತೆ ನೀಗಿಸಲು ಕೇಂದ್ರ ಚಿಂತನೆ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ