Mukesh Ambani: ಭಾರತದ ಇತಿಹಾಸದಲ್ಲೇ ನರೇಂದ್ರ ಮೋದಿ ಅತ್ಯಂತ ಯಶಸ್ವಿ ಪ್ರಧಾನಿ: ಮುಕೇಶ್ ಅಂಬಾನಿ ಬಣ್ಣನೆ

Vibrant Gujarat Global Summit 2024: ಭಾರತದ ಇತಿಹಾಸದಲ್ಲೇ ನರೇಂದ್ರ ಮೋದಿ ಅತ್ಯಂತ ಯಶಸ್ವಿ ಪ್ರಧಾನಿಯಾಗಿದ್ದಾರೆ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಛೇರ್ಮನ್ ಮುಕೇಶ್ ಅಂಬಾನಿ ಹೇಳಿದ್ದಾರೆ. ಭಾರತದ ಬೆಳವಣಿಗೆಗೆ ಮೋದಿ ಭದ್ರ ಬುನಾದಿ ಹಾಕಿದ್ದಾರೆ. 2047ರೊಳಗೆ ಭಾರತದ ಆರ್ಥಿಕತೆ 35 ಟ್ರಿಲಿಯನ್ ಡಾಲರ್ ಆಗುತ್ತದೆ ಎಂದಿದ್ದಾರೆ. ಗುಜರಾತ್​ನ ಗಾಂಧಿನಗರ್​ನಲ್ಲಿ ಜ. 10ರಂದು ಆರಂಭವಾದ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಸಮಿಟ್ 2024ನಲ್ಲಿ ಅಂಬಾನಿ ಮಾತನಾಡುತ್ತಿದ್ದರು.

Mukesh Ambani: ಭಾರತದ ಇತಿಹಾಸದಲ್ಲೇ ನರೇಂದ್ರ ಮೋದಿ ಅತ್ಯಂತ ಯಶಸ್ವಿ ಪ್ರಧಾನಿ: ಮುಕೇಶ್ ಅಂಬಾನಿ ಬಣ್ಣನೆ
ಮುಕೇಶ್ ಅಂಬಾನಿ
Follow us
|

Updated on: Jan 10, 2024 | 12:58 PM

ಗಾಂಧಿನಗರ್, ಜನವರಿ 10: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾರತದ ಅತ್ಯುತ್ತಮ ಪ್ರಧಾನಿ ಎಂದು ಉದ್ಯಮಿ ಮುಕೇಶ್ ಅಂಬಾನಿ ಬಣ್ಣಿಸಿದ್ದಾರೆ. ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯಲ್ಲಿ (Vibrant Gujarat Global Summit 2024) ಪಾಲ್ಗೊಂಡು ಮಾತನಾಡುತ್ತಿದ್ದ ಅಂಬಾನಿ, ಈ ಕಾಲದ ಶ್ರೇಷ್ಠ ಜಾಗತಿಕ ನಾಯಕರಾಗಿ ನರೇಂದ್ರ ಮೋದಿ ಅವರು ಹೊರಹೊಮ್ಮಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ. ವೈಬ್ರೆಂಟ್ ಗುಜರಾತ್ ಸಮಿಟ್ 20 ವರ್ಷ ಕಾಲ ಮುಂದುವರಿಯುತ್ತಿರುವುದಕ್ಕೆ ನರೇಂದ್ರ ಮೋದಿ ಅವರೇ ಕಾರಣ. ಗುಜರಾತ್ ಪರಿವರ್ತೆನೆಯಲ್ಲಿ ಅವರ ಪಾತ್ರ ಬಹಳ ಇದೆ ಎಂದು ಅಂಬಾನಿ ಹೇಳಿದ್ದಾರೆ.

‘ಈ ರೀತಿಯ ಬೇರೆ ಯಾವುದೇ ಸಮಿಟ್ ಕೂಡ ಸುದೀರ್ಘ 20 ವರ್ಷ ಕಾಲ ಬಲವೃದ್ಧಿ ಕಾಣುತ್ತಾ ಮುಂದುವರಿಯುತ್ತಿರುವ ಉದಾಹರಣೆಯೇ ಇಲ್ಲ. ನಮ್ಮ ಪ್ರಧಾನಿ ಶ್ರೀ ನರೇಂದ್ರಭಾಯ್ ಮೋದಿ ಅವರ ದೃಷ್ಟಿ ಮತ್ತು ಸ್ಥಿರತೆಗೆ ಇದು ನಿದರ್ಶನವಾಗಿದೆ’ ಎಂದು ಮುಕೇಶ್ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Gautam adani: ವೈಬ್ರಂಟ್ ಗುಜರಾತ್ ಗ್ಲೋಬಲ್ ಸಮಿಟ್: ಮುಂದಿನ 3 ವರ್ಷದಲ್ಲಿ ಗುಜರಾತ್​ನಲ್ಲಿ 2 ಲಕ್ಷ ಕೋಟಿ ರೂ ಹೂಡಿಕೆ: ಗೌತಮ್ ಅದಾನಿ

ಭಾರತದ ಮುನ್ನಡೆ ತಡೆಯಲು ಯಾರಿಂದಲೂ ಆಗಲ್ಲ: ಅಂಬಾನಿ

ಭಾರತ 2047ರೊಳಗೆ 35 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗುವ ಹಾದಿಯಲ್ಲಿದೆ. ಜಗತ್ತಿನ ಯಾವ ಶಕ್ತಿಯೂ ಇದನ್ನು ನಿಲ್ಲಿಸಲು ಆಗುವುದಿಲ್ಲ. ಗುಜರಾತ್ ರಾಜ್ಯವೊಂದರ ಆರ್ಥಿಕತೆಯೇ 3 ಟ್ರಿಲಿಯನ್ ಡಾಲರ್​ನಷ್ಟು ಆಗುತ್ತದೆ’ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ.

‘ಇವತ್ತು ಭಾರತದಲ್ಲಿ ಯುವಪೀಳಿಗೆಯು ಆರ್ಥಿಕತೆ ಪ್ರವೇಶಿಸಿ ನಾವೀನ್ಯತೆ ತೋರಲು ಇದು ಸುಸಮಯ. ಕೋಟ್ಯಂತರ ಜನರ ಬದುಕನ್ನು ಹಸನಾಗಿಸುವ ರೀತಿಯಲ್ಲಿ ಯುವ ಪೀಳಿಗೆ ಆರ್ಥಿಕತೆಯ ನೊಗ ಹೊರಬೇಕು. ಮುಂಬರುವ ಪೀಳಿಗೆಗಳು ಪ್ರಧಾನಿ ನರೇಂದ್ರ ಮೋದಿ ಅವರ ರಾಷ್ಟ್ರೀಯತೆ ಮತ್ತು ಅಂತಾರಾಷ್ಟ್ರೀಯತೆಯ ಧೋರಣೆಗೆ ಧನ್ಯವಾದ ಹೇಳುತ್ತಾರೆ,’ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಛೇರ್ಮನ್ ತಿಳಿಸಿದ್ದಾರೆ.

ಅಮೃತ ಕಾಲದಲ್ಲಿ ಪೂರ್ಣ ಅಭಿವೃದ್ಧಿ ಹೊಂದಿದ ವಿಕಸಿತ ಭಾರತ ನಿರ್ಮಾಣಕ್ಕೆ ನೀವು ಗಟ್ಟಿ ಅಡಿಪಾಯ ಹಾಕಿದ್ದೀರಿ. 2047ರೊಳಗೆ ಭಾರತ 35 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗುವುದನ್ನು ಈ ಭೂಮಿಯ ಯಾವ ಶಕ್ತಿಯೂ ತಡೆಯಲಾಗದು,’ ಎಂದಿದ್ದಾರೆ.

ಇದನ್ನೂ ಓದಿ: Ayodhya: ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಅಯೋಧ್ಯೆ ನಗರಿ ಮಾರ್ಪಾಡು; ಇದರ ಹಿಂದಿದ್ದಾರೆ ಮಾಸ್ಟರ್ ಪ್ಲಾನರ್ ದೀಕ್ಷು ಕುಕ್ರೇಜಾ

ನವ ಭಾರತ ಎಂದರೆ ನವ ಗುಜರಾತ್…

ಗುಜರಾತ್ ರಾಜ್ಯವನ್ನು ಪರಿವರ್ತಿಸಿದ ರೀತಿಗೆ ಅಂಬಾನಿ ಅವರು ಮೋದಿಗೆ ಕ್ರೆಡಿಟ್ ಕೊಟ್ಟಿದ್ದಾರೆ.

‘ನಾವು ಗೇಟ್​ವೇ ಆಫ್ ಇಂಡಿಯಾ ಸಿಟಿಯಿಂದ (ಮುಂಬೈ) ಆಧುನಿಕ ಭಾರತದ ಪ್ರಗತಿಯ ಗೇಟ್​ವೇ ಆದ ಗುಜರಾತ್​ಗೆ ಬಂದಿದ್ದೇನೆ. ನಾನೊಬ್ಬ ಹೆಮ್ಮೆಯ ಗುಜರಾತಿ. ವಿದೇಶಿಗರಿಗೆ ನವ ಭಾರತ ಎಂದರೆ ಮೊದಲು ಕಣ್ಮುಂದೆ ಬರುವುದು ನವ ಗುಜರಾತ್. ಈ ಪರಿವರ್ತನೆ ಹೇಗಾಯಿತು? ನಮ್ಮ ಕಾಲದಲ್ಲಿ ಒಬ್ಬ ನಾಯಕ ಜಾಗತಿಕ ನಾಯಕರಾಗಿದ್ದಾರೆ. ಭಾರತದ ಇತಿಹಾಸದಲ್ಲೇ ಪಿಎಂ ಮೋದಿ ಅತ್ಯಂತ ಯಶಸ್ವಿ ಪ್ರಧಾನಿ ಆಗಿದ್ದಾರೆ’ ಎಂದು ಅಂಬಾನಿ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ