AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mukesh Ambani: ಭಾವಿ ಸೊಸೆ ಜೊತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖೇಶ್ ಅಂಬಾನಿ

ಮುಖೇಶ್ ಅಂಬಾನಿ ಶುಕ್ರವಾರ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದರು . ಅವರು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ಭಾವಿ ಪತ್ನಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ಭೇಟಿ ನೀಡಿದ್ದಾರೆ.

Mukesh Ambani: ಭಾವಿ ಸೊಸೆ ಜೊತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖೇಶ್ ಅಂಬಾನಿ
Mukesh Ambani visited Tirupati Thimmappa
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 16, 2022 | 1:21 PM

ಆಂಧ್ರಪ್ರದೇಶ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಶುಕ್ರವಾರ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದರು . ಅವರು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ಭಾವಿ ಪತ್ನಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ಭೇಟಿ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಕುಟುಂಬ ಸಮೇತ ಅಂಬಾನಿ ನಿಜಪಾದ ದರ್ಶನ ಸೇವೆಯಲ್ಲಿ ಪಾಲ್ಗೊಂಡಿದ್ದರು. ರಿಲಯನ್ಸ್ ಮುಖ್ಯಸ್ಥರು ತಿರುಮಲ ತಿರುಪತಿ ದೇವಸ್ಥಾನಕ್ಕೆ 1.50 ಕೋಟಿ ದೇಣಿಗೆ ನೀಡಿದ್ದಾರೆ ಮತ್ತು ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಅನ್ನು ದೇವಸ್ಥಾನದ ಕಾರ್ಯನಿರ್ವಾಹಕ ನಿರ್ದೇಶಕ ಧರ್ಮಾ ರೆಡ್ಡಿ ಅವರಿಗೆ ನೀಡಲಾಯಿತು ಎಂದು ಟಿವಿ9 ತೆಲುಗು ವರದಿ ಮಾಡಿದೆ.

ದರ್ಶನದ ನಂತರ ರಂಗನಾಯಕ ಮಂಟಪದಲ್ಲಿ ವಿದ್ವಾಂಸರಿಂದ ವೇದಾಶೀರ್ವಾದ ನಡೆಯಿತು. ಈ ಸಂದರ್ಭದಲ್ಲಿ ಮುಕೇಶ್ ಅಂಬಾನಿ ತಿರುಮಲಕ್ಕೆ ಭೇಟಿ ನೀಡುತ್ತಿರುವುದು ಸಂತಸ ತಂದಿದೆ ಎಂದರು. ತಿರುಮಲದಲ್ಲಿರುವ ದೇವಾಲಯವು ಪ್ರತಿವರ್ಷ ಅಭಿವೃದ್ಧಿ ಹೊಂದುತ್ತಿದೆ ಮತ್ತು ಸುಧಾರಿಸುತ್ತಿದೆ ಎಂದು ಅವರು ಹೇಳಿದರು. ಎಲ್ಲರಿಗೂ ಅನುಗ್ರಹಿಸಲಿ ಎಂದು ವೆಂಕಟೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಈ ಹಿಂದೆ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ದೇವಸ್ಥಾನಕ್ಕೆ 1.11 ಕೋಟಿ ದೇಣಿಗೆ ನೀಡಿದ್ದು, ಈ ಮೊತ್ತವನ್ನು ಉಚಿತ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಬಳಸಲಾಗಿತ್ತು.

ವಾರ್ಷಿಕ ಶ್ರೀವಾರಿ ಬ್ರಹ್ಮೋತ್ಸವಗಳು ಸೆಪ್ಟೆಂಬರ್ 27 ರಿಂದ ಪ್ರಾರಂಭವಾಗಿದ್ದು, ಅಕ್ಟೋಬರ್ 5 ರವರೆಗೆ ನಡೆಯಲಿದ್ದು, ಅದ್ಧೂರಿಯಾಗಿ ನಡೆಸಲು ದೇವಸ್ಥಾನವು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತಿದೆ. ಕೊರನಾದಿಂದ 2 ವರ್ಷಗಳ ನಂತರ ಬ್ರಹ್ಮೋತ್ಸವಗಳನ್ನು ನಡೆಸಲಾಗುತ್ತಿದೆ. ವರದಿಗಳ ಪ್ರಕಾರ, ದೇವಾಲಯದ ಆಡಳಿತವು ಒಂಬತ್ತು ದಿನಗಳ ಉತ್ಸವಗಳಿಗೆ ಭಕ್ತರನ್ನು ಆಕರ್ಷಿಸಲು ಎಂಟು ರಾಜ್ಯಗಳ ವಾಹನ ಸೇವೆಗಳು ಮತ್ತು 88 ಇತರ ಸಾಂಸ್ಕೃತಿಕ ತಂಡಗಳ ಕಾರ್ಯಕ್ರಮ ನೀಡಲು ಆಹ್ವಾನಿಸಲಾಗಿದೆ ಎಂದು.

Published On - 1:21 pm, Fri, 16 September 22

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್