AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಟಾನಾ, ಬಿರ್ಲಾನಾ?; ದೇಶದ ಅತಿದೊಡ್ಡ ಸಾಲಗಾರರು ಯಾರು? ಇಲ್ಲಿದೆ ಟಾಪ್-10 ಪಟ್ಟಿ

List of India's Biggest Debtors: ಎಕನಾಮಿಕ್ ಟೈಮ್ಸ್ ಪ್ರಕಟಿಸಿದ ದೇಶದ ಅತಿದೊಡ್ಡ ಸಾಲಗಾರ ಸಂಸ್ಥೆಗಳ ಟಾಪ್10 ಪಟ್ಟಿಯಲ್ಲಿ ಅದಾನಿ ಗ್ರೂಪ್ ಇಲ್ಲ. ಮುಕೇಶ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಇಂಡಸ್ಟ್ರೀಸ್ ಅತಿಹೆಚ್ಚು ಸಾಲ ಹೊಂದಿದೆ. ಟಾಟಾ ಮತ್ತು ಬಿರ್ಲಾ ಒಡೆತನದ ಕಂಪನಿಗಳು ಈ ಪಟ್ಟಿಯಲ್ಲಿವೆ. ಒಟ್ಟು ಆರು ಖಾಸಗಿ ಸಂಸ್ಥೆಗಳು ಅತಿಹೆಚ್ಚು ಸಾಲ ಹೊಂದಿದವುಗಳ ಪಟ್ಟಿಯಲ್ಲಿವೆ.

ಟಾಟಾನಾ, ಬಿರ್ಲಾನಾ?; ದೇಶದ ಅತಿದೊಡ್ಡ ಸಾಲಗಾರರು ಯಾರು? ಇಲ್ಲಿದೆ ಟಾಪ್-10 ಪಟ್ಟಿ
ಉದ್ಯಮಿಗಳು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 25, 2023 | 4:57 PM

Share

ನವದೆಹಲಿ, ನವೆಂಬರ್ 25: ಸಾಲ ಮಾಡದೇ ಮನೆ ಕಟ್ಟುವುದೇ ಕಷ್ಟ, ಇನ್ನು ಉದ್ದಿಮೆಗಳನ್ನು ಸಾಲರಹಿತವಾಗಿ ಬೆಳೆಸಲು ಆಗುವುದೇ? ಇವತ್ತಿನ ದಿನಮಾನದಲ್ಲಿ ಯಾವುದೇ ಉದ್ಯಮವನ್ನು ಸಾಲವಿಲ್ಲದೇ ನಡೆಸಲು ಸಾಧ್ಯವಾಗುವುದಿಲ್ಲ. ಅಂತೆಯೇ, ಇವತ್ತು ಬ್ಯಾಂಕುಗಳಲ್ಲಿ ಅತಿಹೆಚ್ಚು ಸಾಲ ಮಾಡಿರುವುದು ಸಾಮಾನ್ಯ ಜನರಲ್ಲ, ಉದ್ಯಮಿಗಳು. ಎಕನಾಮಿಕ್ ಟೈಮ್ಸ್ ಪತ್ರಿಕೆಯ ವರದಿಯೊಂದರಲ್ಲಿ ಭಾರತದ ಅತಿದೊಡ್ಡ ಸಾಲಗಾರರನ್ನು (biggest debtors) ಹೆಸರಿಸಲಾಗಿದೆ. ಅದರ ಪ್ರಕಾರ ಮುಕೇಶ್ ಅಂಬಾನಿ ಅವರ ರಿಲಾಯನ್ಸ್ ಇಂಡಸ್ಟ್ರೀಸ್ (Reliance Industries) ಅತಿಹೆಚ್ಚು ಸಾಲ ಹೊಂದಿದೆ. ಹಿಂಡನ್ಬರ್ಗ್ ರಿಸರ್ಚ್ ವರದಿ ಪ್ರಕಟಗೊಂಡ ಬಳಿಕ ಲಕ್ಷಾಂತರ ಕೋಟಿ ರೂನಷ್ಟು ಷೇರುಸಂಪತ್ತು ನಷ್ಟ ಮಾಡಿಕೊಂಡ ಗೌತಮ್ ಅದಾನಿ ಅತಿಹೆಚ್ಚು ಸಾಲ ಹೊಂದಿದ್ದಾರೆ ಎಂಬ ಹಲವರ ಊಹೆ ತಪ್ಪಾಗಿರಬಹುದು. ಅವರು ಟಾಪ್10 ಸಾಲಗಾರರ ಪಟ್ಟಿಯಲ್ಲಿ ಇಲ್ಲ.

ಅತಿ ಹೆಚ್ಚು ಸಾಲ ಹೊಂದಿರುವ 10 ಸಂಸ್ಥೆಗಳು

  1. ರಿಲಾಯನ್ಸ್ ಇಂಡಸ್ಟ್ರೀಸ್: 3.13 ಲಕ್ಷ ಕೋಟಿ ರೂ
  2. ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ (ಎನ್​ಟಿಪಿಸಿ): 2.20 ಲಕ್ಷ ಕೋಟಿ ರೂ
  3. ವೊಡಾಫೋನ್ ಐಡಿಯಾ: 2.01 ಲಕ್ಷ ಕೋಟಿ ರೂ
  4. ಭಾರ್ತಿ ಏರ್ಟೆಲ್: 1.65 ಲಕ್ಷ ಕೋಟಿ ರೂ
  5. ಇಂಡಿಯನ್ ಆಯಿಲ್ ಕಾರ್ಪೊರೆಶನ್: 1.40 ಲಕ್ಷ ಕೋಟಿ ರೂ
  6. ಒಎನ್​ಜಿಸಿ: 1.29 ಲಕ್ಷ ಕೋಟಿ ರೂ
  7. ಪವರ್ ಗ್ರಿಡ್ ಕಾರ್ಪೊರೇಶನ್: 1.26 ಲಕ್ಷ ಕೋಟಿ ರೂ
  8. ಟಾಟಾ ಮೋಟಾರ್ಸ್: 1.25 ಲಕ್ಷ ಕೋಟಿ ರೂ
  9. ಎಲ್ ಅಂಡ್ ಟಿ: 1.18 ಲಕ್ಷ ಕೋಟಿ ರೂ
  10. ಗ್ರಾಸಿಮ್ ಇಂಡಸ್ಟ್ರೀಸ್: 1.01 ಲಕ್ಷ ಕೋಟಿ ರೂ

ಇದನ್ನೂ ಓದಿ: ಇಸ್ರೋ ಬಿಟ್ಟು ಹೊಸ ಕಂಪನಿ ಕಟ್ಟಿದ ಐಐಟಿ ಪದವೀಧರರು; ಇಲಾನ್ ಮಸ್ಕ್ ಹಾದಿಯಲ್ಲಿ ಇಬ್ಬರು ಭಾರತೀಯರು

ಭಾರ್ತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಟೆಲಿಕಾಂ ಕಂಪನಿಗಳಾಗಿದ್ದು 5ಜಿ ನೆಟ್ವರ್ಕ್ ಅಳವಡಿಕೆಗೆ ಸಾಕಷ್ಟು ಹೂಡಿಕೆ ಮಾಡಿವೆ. ಈ ಕಾರಣಕ್ಕೆ ಸಾಲ ಹೆಚ್ಚಾಗಿರಬಹುದು. ಇನ್ನು, ರಿಲಾಯನ್ಸ್ ಇಂಡಸ್ಟ್ರೀಸ್​ಗೆ ಸೇರಿದ ರಿಲಾಯನ್ಸ್ ಜಿಯೋ ಕೂಡ 5ಜಿಗೆ ಬಹಳಷ್ಟು ಹೂಡಿಕೆ ಮಾಡಿದೆ.

ಈ ಮೇಲಿನ ಟಾಪ್ 10 ಸಾಲಗಾರ ಸಂಸ್ಥೆಗಳ ಪಟ್ಟಿಯಲ್ಲಿ ಸರ್ಕಾರಿ ಸ್ವಾಮ್ಯದ (public sector companies) ನಾಲ್ಕು ಸಂಸ್ಥೆಗಳಿರುವುದು ವಿಶೇಷ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು