AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato: ಟೊಮೆಟೋ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ; ಕರ್ನಾಟಕ, ಮಹಾರಾಷ್ಟ್ರ, ಆಂಧ್ರದಿಂದ ಖರೀದಿಸಿ ಬೇರೆ ರಾಜ್ಯಗಳಿಗೆ ವಿತರಣೆ

Price Control: ಮಿತಿಮೀರಿರುವ ಟೊಮೆಟೋ ಬೆಲೆ ನಿಯಂತ್ರಿಸಲು ಕೇಂದ್ರದ ಕೃಷಿ ಸಹಕಾರ ಸಂಸ್ಥೆಗಳ ಮೂಲಕ ಕರ್ನಾಟಕ, ಮಹಾರಾಷ್ಟ್ರ, ಆಂಧ್ರದಿಂದ ಹೆಚ್ಚುವರಿ ಟೊಮೆಟೋ ಖರೀದಿಸಿ ಇತರ ಕೆಲ ರಾಜ್ಯಗಳಲ್ಲಿ ಕಡಿಮೆ ಬೆಲೆಗೆ ಮಾರಲಾಗುತ್ತಿದೆ.

Tomato: ಟೊಮೆಟೋ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ; ಕರ್ನಾಟಕ, ಮಹಾರಾಷ್ಟ್ರ, ಆಂಧ್ರದಿಂದ ಖರೀದಿಸಿ ಬೇರೆ ರಾಜ್ಯಗಳಿಗೆ ವಿತರಣೆ
ಟೊಮೆಟೋ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 20, 2023 | 1:09 PM

Share

ನವದೆಹಲಿ, ಜುಲೈ 20: ಟೊಮೆಟೋ ಬೆಲೆ (Tomato Price) ಬಹಳ ಕಡೆ ಇನ್ನೂ ಕಡಿಮೆ ಆಗಿಲ್ಲ. ದೆಹಲಿ ಎನ್​ಸಿಆರ್ ಇತ್ಯಾದಿ ಪ್ರದೇಶಗಳಲ್ಲಿ ಸರ್ಕಾರವೇ ಟೊಮೆಟೋವನ್ನು ರಿಯಾಯಿತಿ ಬೆಲೆಗೆ ಮಾರುತ್ತಿದೆ. ಇದಕ್ಕಾಗಿ ಟೊಮೆಟೋ ಹೆಚ್ಚು ಬೆಳೆಯುವ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಮಂಡಿಗಳಿಂದ ಟೊಮೆಟೊಗಳನ್ನು ಖರೀದಿಸಿ, ದುಬಾರಿ ಬೆಲೆ ಇರುವ ಪ್ರದೇಶಗಳಲ್ಲಿ ಮಾರಲಾಗುತ್ತಿದೆ. ಅದಕ್ಕಾಗಿ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟ (NAFED) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಸಂಸ್ಥೆಗಳನ್ನು ಬಳಸಿಕೊಳ್ಳಲಾಗಿದೆ.

ಹಲವು ಕಡೆ ಟೊಮೆಟೋ ಬೆಲೆ ಈಗಲೂ 200 ರೂ ಮೇಲೆಯೇ ಇದೆ. ಟೊಮೆಟೋ ಬೆಲೆ ದುಬಾರಿ ಇರುವ ಪ್ರದೇಶಗಳಲ್ಲಿ ಅಲ್ಲಿನ ಮಾರುಕಟ್ಟೆ ಬೆಲೆಗಿಂತ ಶೇ. 30ರಷ್ಟು ಕಡಿಮೆ ದರದಲ್ಲಿ ಟೊಮೆಟೋವನ್ನು ಸಹಕಾರಿ ಸಂಘಗಳ ಮಳಿಗೆಗಳು ಹಾಗೂ ವಾಹನಗಳ ಮೂಲಕ ಮಾರಾಟವಾಗುತ್ತಿದೆ.

ಇದನ್ನೂ ಓದಿTomato: ಕೋಲಾರದಲ್ಲಿ ಹೆಚ್ಚಿನ ಬೆಲೆ ತೆತ್ತು ಟೊಮೆಟೋ ಸಾಗಿಸುತ್ತಿರುವ ಉತ್ತರಭಾರತೀಯ ವರ್ತಕರು; ಬೆಂಗಳೂರಿಗೆ ಕಡಿಮೆ ಪೂರೈಕೆ

ಭಾರತದ ಎಲ್ಲಾ ರಾಜ್ಯಗಳು ಹಾಗೂ ಜಿಲ್ಲೆಗಳಲ್ಲಿ ಟೊಮೆಟೋ ಬೆಳೆಯಲಾಗುತ್ತದೆ. ಆದರೆ, ಅಧಿಕ ಪ್ರಮಾಣದಲ್ಲಿ ಟೊಮೆಟೋ ಬೆಳೆಯುವುದು ಭಾರತದ ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲಿ. ಅದರಲ್ಲೂ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚು ಟೊಮೆಟೋ ಬೆಳೆಯಲಾಗುತ್ತದೆ. ಇಲ್ಲಿಯ ಹೆಚ್ಚುವರಿ ಟೊಮೆಟೋಗಳು ಬೇರೆ ಬೇರೆ ರಾಜ್ಯಗಳಿಗೆ ವಿತರಣೆ ಆಗುತ್ತವೆ. ಇದರಿಂದ ಟೊಮೆಟೋ ಬೆಳೆಗಾರರಿಗೆ ಬೆಲೆಕುಸಿತದ ಸಂಭವ ಕಡಿಮೆ ಆಗುತ್ತದೆ. ಉತ್ತಮ ಬೆಲೆ ಕೂಡ ಸಿಗುವ ಸಾಧ್ಯತೆ ಇರುತ್ತದೆ. ಈ ಸೀಸನ್​ನಲ್ಲಿ ಒಳ್ಳೆಯ ಟೊಮೆಟೋ ಫಸಲು ಪಡೆದ ರೈತರಿಗೆ ಕೈತುಂಬ ಹಣ ಸಿಕ್ಕಿರುವುದು ಹೌದು.

ಟೊಮೆಟೋ ಹಣ್ಣಿನ ಬೆಲೆ ಒಂದು ವರ್ಷದಲ್ಲಿ ದುಬಾರಿ ಎನಿಸುವುದು ಮೂರ್ನಾಲ್ಕು ತಿಂಗಳು ಮಾತ್ರ. ಜುಲೈ, ಆಗಸ್ಟ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಟೊಮೆಟೋ ಆವಕ ಕಡಿಮೆ ಆಗುವುದರಿಂದ ಆ ಸಂದರ್ಭದಲ್ಲಿ ಟೊಮೆಟೋ ಬೆಲೆ ಹೆಚ್ಚು ಇರುತ್ತದೆ. ಸೆಪ್ಟೆಂಬರ್ ತಿಂಗಳಲ್ಲಿ ಅದರ ಬೆಲೆ ಸಾಕಷ್ಟು ತಗ್ಗುವ ನಿರೀಕ್ಷೆ ಇದೆ.

ಇದನ್ನೂ ಓದಿChikkaballapur News: ಖಾಸಗಿ ಕಂಪನಿಗೆ ಗುಡ್ ಬೈ ಹೇಳಿ ಟೆಮೆಟೊ ಬೆಳೆದ ಬಿ.ಕಾಂ ಪದವೀಧರ, ಒಂದೇ ತಿಂಗಳಲ್ಲಿ ಲಕ್ಷಾಧೀಶನಾದ

ಟೊಮೆಟೋ ಹಣ್ಣನ್ನು ಹೆಚ್ಚು ದಿನ ಶೇಖರಿಸಿಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಂಗ್ರಹದ ಮೂಲಕ ಬೆಲೆ ನಿಯಂತ್ರಣ ಕಷ್ಟಸಾಧ್ಯ. ಟೊಮೆಟೋ ಬೆಳೆಯುವ ರೈತರಿಗೂ ಒಂದು ರೀತಿಯಲ್ಲಿ ಅನಿಶ್ಚಿತತೆ ಕಾಡುತ್ತದೆ. ಈಗ ಟೊಮೆಟೋಗೆ ಒಳ್ಳೆಯ ಬೆಲೆ ಸಿಕ್ಕಿದೆ ಎಂದು ಮುಂದಿನ ತಿಂಗಳೂ ಉತ್ತಮ ಬೆಲೆ ನಿರೀಕ್ಷಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ಅತಿಯಾಗಿ ಟೊಮೆಟೋ ಆವಕವಾಗಿ ಚೀಲಕ್ಕೆ ಹತ್ತಿಪ್ಪತ್ತು ರುಪಾಯಿ ಬೆಲೆಗೆ ಕುಸಿದುಹೋಗುವುದುಂಟು. ಅಂಥ ಸಂದರ್ಭದಲ್ಲಿ ಟೊಮೆಟೋ ಬೆಳೆಗಾರರು ಲಕ್ಷಾಂತರ ರೂ ನಷ್ಟ ಮಾಡಿಕೊಂಡು ಪರದಾಡುವುದುಂಟು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!