AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Online Gambling: ಆನ್​ಲೈನ್ ಜೂಜು: ಉದ್ಯಮಿಗೆ ಬಂದಿದ್ದು 5 ಕೋಟಿ ರೂ., ಕಳೆದುಕೊಂಡಿದ್ದು ಬರೋಬ್ಬರಿ 58 ಕೋಟಿ ರೂ.

ನಾಗ್ಪುರದ ಉದ್ಯಮಿಯೊಬ್ಬರು ಆನ್​ಲೈನ್ ಜೂಜಿ(Online Gambling)ನಲ್ಲಿ 58 ಕೋಟಿ ರೂ ಕಳೆದುಕೊಂಡಿರುವ ಘಟನೆ ನಡೆದಿದೆ.

Online Gambling: ಆನ್​ಲೈನ್ ಜೂಜು: ಉದ್ಯಮಿಗೆ ಬಂದಿದ್ದು 5 ಕೋಟಿ ರೂ., ಕಳೆದುಕೊಂಡಿದ್ದು ಬರೋಬ್ಬರಿ 58 ಕೋಟಿ ರೂ.
ಹಣ
ನಯನಾ ರಾಜೀವ್
|

Updated on: Jul 23, 2023 | 9:32 AM

Share

ನಾಗ್ಪುರದ ಉದ್ಯಮಿಯೊಬ್ಬರು ಆನ್​ಲೈನ್ ಜೂಜಿ(Online Gambling)ನಲ್ಲಿ 58 ಕೋಟಿ ರೂ ಕಳೆದುಕೊಂಡಿರುವ ಘಟನೆ ನಡೆದಿದೆ. ಮೊದಲು 5 ಕೋಟಿ ರೂ. ಬಂದಿತ್ತು, ಹೆಚ್ಚು ಹಣ ಗಳಿಸಬಹುದೆನ್ನುವ ಆಸೆಯಲ್ಲಿ ಜೂಜಾಡಿ 58 ಲಕ್ಷ ರೂ. ಕಳೆದುಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು 14 ಕೋಟಿ ರೂ. ನಗದು, 4 ಕೆಜಿ ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಉದ್ಯಮಿಯನ್ನು ಅನಂತ್ ಅಲಿಯಾಸ್ ಸೊಂತು ನವರತನ್ ಜೈನ್ ಎಂದು ಗುರುತಿಸಲಾಗಿದ್ದು, ನಾಗ್ಪುರದಿಂದ 160 ಕಿಮೀ ದೂರದಲ್ಲಿರುವ ಗೊಂಡಿಯಾ ಸಿಟಿಯಲ್ಲಿರುವ ಅವರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸುವ ಮುನ್ನವೇ ಪರಾರಿಯಾಗಿದ್ದಾರೆ. ದುಬೈಗೆ ತೆರಳಿರಬಹುದು ಎಂದು ಅಂದಾಜಿಸಲಾಗಿದೆ. ಈ ಉದ್ಯಮಿ ಹಲವು ಉದ್ಯಮಿಗಳಿಗೆ ಆನ್​ಲೈನ್ ಜೂಜಾಡುವಂತೆ ಪ್ರೇರೇಪಿಸುತ್ತಿದ್ದ ಬಳಿಕ ಕೋಟಿಗಟ್ಟಲೆ ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ನಗರಸಭೆ ಸದಸ್ಯ, ಹೆಡ್ ಕಾನ್ಸ್​​ಟೇಬಲ್ ಬಂಧನ

ಹೆಚ್ಚು ಲಾಭ ಗಳಿಸಲು ಆನ್​ಲೈನ್​ನಲ್ಲಿ ಜೂಜಾಡುವಂತೆ ಉದ್ಯಮಿಯೊಬ್ಬರಿಗೆ ಜೈನ್ ಮನವರಿಕೆ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉದ್ಯಮಿ ಖಾತೆಗೆ 8 ಲಕ್ಷ ಹಣ ಜಮಾ ಮಾಡಿ ಜೂಜು ಆರಂಭಿಸಿದ್ದರು. ಆರಂಭದಲ್ಲಿ 5 ಕೋಟಿ ರೂ ಗೆದ್ದಿದ್ದರು. ಬಳಿಕ 58 ಕೋಟಿ ರೂ ಕಳೆದುಕೊಂಡು ಅಪಾರ ನಷ್ಟ ಅನುಭವಿಸಿದ್ದಾರೆ.

ಉದ್ಯಮಿ ನಷ್ಟದ ಬಗ್ಗೆ ಅನುಮಾನಗೊಂಡು ತನ್ನ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದನು, ಆದರೆ ಆರೋಪಿಯು ಹಣವನ್ನು ಹಿಂದಿರುಗಿಸಲು ನಿರಾಕರಿಸಿದನು ಎಂದು ಅಧಿಕಾರಿ ಹೇಳಿದರು. ಉದ್ಯಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ವಂಚನೆ ಪ್ರಕರಣ ದಾಖಲಾಗಿದೆ.  ಗೊಂಡಿಯಾದಲ್ಲಿರುವ ಜೈನ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ಕಾರ್ಯಾಚರಣೆಯಲ್ಲಿ 14 ಕೋಟಿ ರೂಪಾಯಿ ನಗದು ಮತ್ತು ನಾಲ್ಕು ಕೆಜಿ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿವೆ.

ಉದ್ಯಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆಯಡಿಯಲ್ಲಿ ವಂಚನೆ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸರು ಗೊಂಡಿಯಾದಲ್ಲಿರುವ ಜೈನ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ