AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Online Gambling: ಆನ್​ಲೈನ್ ಜೂಜು: ಉದ್ಯಮಿಗೆ ಬಂದಿದ್ದು 5 ಕೋಟಿ ರೂ., ಕಳೆದುಕೊಂಡಿದ್ದು ಬರೋಬ್ಬರಿ 58 ಕೋಟಿ ರೂ.

ನಾಗ್ಪುರದ ಉದ್ಯಮಿಯೊಬ್ಬರು ಆನ್​ಲೈನ್ ಜೂಜಿ(Online Gambling)ನಲ್ಲಿ 58 ಕೋಟಿ ರೂ ಕಳೆದುಕೊಂಡಿರುವ ಘಟನೆ ನಡೆದಿದೆ.

Online Gambling: ಆನ್​ಲೈನ್ ಜೂಜು: ಉದ್ಯಮಿಗೆ ಬಂದಿದ್ದು 5 ಕೋಟಿ ರೂ., ಕಳೆದುಕೊಂಡಿದ್ದು ಬರೋಬ್ಬರಿ 58 ಕೋಟಿ ರೂ.
ಹಣ
ನಯನಾ ರಾಜೀವ್
|

Updated on: Jul 23, 2023 | 9:32 AM

Share

ನಾಗ್ಪುರದ ಉದ್ಯಮಿಯೊಬ್ಬರು ಆನ್​ಲೈನ್ ಜೂಜಿ(Online Gambling)ನಲ್ಲಿ 58 ಕೋಟಿ ರೂ ಕಳೆದುಕೊಂಡಿರುವ ಘಟನೆ ನಡೆದಿದೆ. ಮೊದಲು 5 ಕೋಟಿ ರೂ. ಬಂದಿತ್ತು, ಹೆಚ್ಚು ಹಣ ಗಳಿಸಬಹುದೆನ್ನುವ ಆಸೆಯಲ್ಲಿ ಜೂಜಾಡಿ 58 ಲಕ್ಷ ರೂ. ಕಳೆದುಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು 14 ಕೋಟಿ ರೂ. ನಗದು, 4 ಕೆಜಿ ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಉದ್ಯಮಿಯನ್ನು ಅನಂತ್ ಅಲಿಯಾಸ್ ಸೊಂತು ನವರತನ್ ಜೈನ್ ಎಂದು ಗುರುತಿಸಲಾಗಿದ್ದು, ನಾಗ್ಪುರದಿಂದ 160 ಕಿಮೀ ದೂರದಲ್ಲಿರುವ ಗೊಂಡಿಯಾ ಸಿಟಿಯಲ್ಲಿರುವ ಅವರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸುವ ಮುನ್ನವೇ ಪರಾರಿಯಾಗಿದ್ದಾರೆ. ದುಬೈಗೆ ತೆರಳಿರಬಹುದು ಎಂದು ಅಂದಾಜಿಸಲಾಗಿದೆ. ಈ ಉದ್ಯಮಿ ಹಲವು ಉದ್ಯಮಿಗಳಿಗೆ ಆನ್​ಲೈನ್ ಜೂಜಾಡುವಂತೆ ಪ್ರೇರೇಪಿಸುತ್ತಿದ್ದ ಬಳಿಕ ಕೋಟಿಗಟ್ಟಲೆ ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ನಗರಸಭೆ ಸದಸ್ಯ, ಹೆಡ್ ಕಾನ್ಸ್​​ಟೇಬಲ್ ಬಂಧನ

ಹೆಚ್ಚು ಲಾಭ ಗಳಿಸಲು ಆನ್​ಲೈನ್​ನಲ್ಲಿ ಜೂಜಾಡುವಂತೆ ಉದ್ಯಮಿಯೊಬ್ಬರಿಗೆ ಜೈನ್ ಮನವರಿಕೆ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉದ್ಯಮಿ ಖಾತೆಗೆ 8 ಲಕ್ಷ ಹಣ ಜಮಾ ಮಾಡಿ ಜೂಜು ಆರಂಭಿಸಿದ್ದರು. ಆರಂಭದಲ್ಲಿ 5 ಕೋಟಿ ರೂ ಗೆದ್ದಿದ್ದರು. ಬಳಿಕ 58 ಕೋಟಿ ರೂ ಕಳೆದುಕೊಂಡು ಅಪಾರ ನಷ್ಟ ಅನುಭವಿಸಿದ್ದಾರೆ.

ಉದ್ಯಮಿ ನಷ್ಟದ ಬಗ್ಗೆ ಅನುಮಾನಗೊಂಡು ತನ್ನ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದನು, ಆದರೆ ಆರೋಪಿಯು ಹಣವನ್ನು ಹಿಂದಿರುಗಿಸಲು ನಿರಾಕರಿಸಿದನು ಎಂದು ಅಧಿಕಾರಿ ಹೇಳಿದರು. ಉದ್ಯಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ವಂಚನೆ ಪ್ರಕರಣ ದಾಖಲಾಗಿದೆ.  ಗೊಂಡಿಯಾದಲ್ಲಿರುವ ಜೈನ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ಕಾರ್ಯಾಚರಣೆಯಲ್ಲಿ 14 ಕೋಟಿ ರೂಪಾಯಿ ನಗದು ಮತ್ತು ನಾಲ್ಕು ಕೆಜಿ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿವೆ.

ಉದ್ಯಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆಯಡಿಯಲ್ಲಿ ವಂಚನೆ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸರು ಗೊಂಡಿಯಾದಲ್ಲಿರುವ ಜೈನ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ