AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣಮೂರ್ತಿ ಹೇಳಿದ್ದು ಹಂಗಲ್ಲ, ಹಿಂಗೆ: 70 ಗಂಟೆ ಕೆಲಸವನ್ನು ಬಿಡಿಸಿ ವಿವರಿಸಿದ ಟೆಕ್ ಮಹೀಂದ್ರ ಸಿಇಒ ಗುರ್ನಾನಿ

Tech Mahindra CEO CP Gurnani Statement: ಐಟಿ ಸಂಸ್ಥೆ ಇನ್ಫೋಸಿಸ್​ನ ಮಾಜಿ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ವಾರದ 70 ಗಂಟೆ ಕೆಲಸದ ಹೇಳಿಕೆ ಬಗ್ಗೆ ಚರ್ಚೆ ನಡೆಯುವುದು ನಿಲ್ಲುತ್ತಿಲ್ಲ. ಜನಸಾಮಾನ್ಯರಿಂದ ಹಿಡಿದು ಉದ್ಯಮಿಗಳವರೆಗೆ ಬಹಳ ಜನರು ತಮ್ಮ ಅನಿಸಿಕೆಗಳನ್ನು ತೋರ್ಪಡಿಸುತ್ತಲೇ ಇದ್ದಾರೆ. ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಾರಾಯಣಮೂರ್ತಿ ಅವರು 70 ಗಂಟೆ ಕೆಲಸ ಮಾಡಬೇಕೆಂದು ಹೇಳಿದ್ದು ನಿಮಗಾಗಿ, ಕಂಪನಿಗಾಗಿ ಮತ್ತು ದೇಶಕ್ಕಾಗಿ ಎಂಬ ಹೊಸ ವಿವರಣೆ ನೀಡಿದ್ದಾರೆ.

ನಾರಾಯಣಮೂರ್ತಿ ಹೇಳಿದ್ದು ಹಂಗಲ್ಲ, ಹಿಂಗೆ: 70 ಗಂಟೆ ಕೆಲಸವನ್ನು ಬಿಡಿಸಿ ವಿವರಿಸಿದ ಟೆಕ್ ಮಹೀಂದ್ರ ಸಿಇಒ ಗುರ್ನಾನಿ
ಸಿಪಿ ಗುರ್ನಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 31, 2023 | 10:30 AM

Share

ನವದೆಹಲಿ, ಅಕ್ಟೋಬರ್ 31: ಐಟಿ ಸಂಸ್ಥೆ ಇನ್ಫೋಸಿಸ್​ನ ಮಾಜಿ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ವಾರದ 70 ಗಂಟೆ ಕೆಲಸದ (70 hours work) ಹೇಳಿಕೆ ಬಗ್ಗೆ ಚರ್ಚೆ ನಡೆಯುವುದು ನಿಲ್ಲುತ್ತಿಲ್ಲ. ಜನಸಾಮಾನ್ಯರಿಂದ ಹಿಡಿದು ಉದ್ಯಮಿಗಳವರೆಗೆ ಬಹಳ ಜನರು ತಮ್ಮ ಅನಿಸಿಕೆಗಳನ್ನು ತೋರ್ಪಡಿಸುತ್ತಲೇ ಇದ್ದಾರೆ. ಕೆಲವರು ಸಹಮತ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ವಿರೋಧಿಸುತ್ತಿದ್ದಾರೆ. ಮತ್ತಿನ್ನೂ ಕೆಲವರು ಬೇರೆ ಸಂಗತಿಗಳನ್ನು ಇದಕ್ಕೆ ಜೋಡಿಸುತ್ತಿದ್ದಾರೆ. ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ (Tech Mahindra CEO CP Gurnani) ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಾರಾಯಣಮೂರ್ತಿ ಅವರು 70 ಗಂಟೆ ಕೆಲಸ ಮಾಡಬೇಕೆಂದು ಹೇಳಿದ್ದು ನಿಮಗಾಗಿ, ಕಂಪನಿಗಾಗಿ ಮತ್ತು ದೇಶಕ್ಕಾಗಿ ಎಂಬ ಹೊಸ ವಿವರಣೆ ನೀಡಿದ್ದಾರೆ.

‘ಅವರು ಕೆಲಸದ ಬಗ್ಗೆ ಮಾತನಾಡಿದ್ದು, ಕಂಪನಿಗೆ ಸೀಮಿತವಾಗಿ ಅಲ್ಲ ಎಂಬುದು ನನ್ನ ಭಾವನೆ. ನಿಮಗೋಸ್ಕರ ಮತ್ತು ನಿಮ್ಮ ದೇಶಕ್ಕೋಸ್ಕರ ಕೆಲಸ ಮಾಡಿ ಎಂದಿರಬೇಕು. ಕಂಪನಿಗೆ 70 ಗಂಟೆ ಕೆಲಸ ಮಾಡಿ ಎಂದು ಅವರು ಹೇಳಿಲ್ಲ. ಸಂಸ್ಥೆಗೆ 40 ಗಂಟೆ ಕೆಲಸ ಮಾಡಿ. ನಿಮಗಾಗಿ 30 ಗಂಟೆ ಕೆಲಸ ಮಾಡಿ ಎಂದು ಹೇಳಿರಬೇಕು.

‘ನಿಮ್ಮ ಕ್ಷೇತ್ರದಲ್ಲಿ ನೈಪುಣ್ಯತೆ ಹೊಂದಲು 10,000 ಗಂಟೆಗಳನ್ನು ವಿನಿಯೋಗಿಸಿ. ರಾತ್ರಿ ಹಗಲು ಕಷ್ಟಪಟ್ಟು ನಿಮ್ಮ ಕ್ಷೇತ್ರದಲ್ಲಿ ಪರಿಣತಿ ಸಾಧಿಸಿ.

ಇದನ್ನೂ ಓದಿ: 70 ಗಂಟೆ ಕೆಲಸ ಮಾಡಬೇಕೆಂದು ಹೇಳುವ ನಾರಾಯಣಮೂರ್ತಿ ನಿಜಜೀವನದಲ್ಲಿ ಹೇಗೆ? ಪತ್ನಿ ಸುಧಾಮೂರ್ತಿ ಹೇಳಿದ್ದಿದು

‘ಈ 70 ಗಂಟೆ ಕೆಲಸವು ನಿಮ್ಮನ್ನು ಬೇರೆಯವರಿಗಿಂತ ವಿಭಿನ್ನವಾಗಿಸುತ್ತದೆ. ನಿಮ್ಮ ದೇಶವನ್ನೂ ಬದಲಿಸುತ್ತದೆ’ ಎಂದು ಸಿಪಿ ಗುರ್ನಾನಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

ಈ ಪೋಸ್ಟ್​ನಲ್ಲಿ ಕೆಲವರು ಖಾರವಾಗಿ ಪ್ರತಿಕ್ರಿಯಿಸಿರುವುದುಂಟು. ಹೆಚ್ಚು ಅವಧಿ ಕೆಲಸ ಮಾಡಬೇಕೆಂದು ಹೇಳುವ ಸಿಇಒಗಳು ತಮ್ಮ ಉದ್ಯೋಗಿ ಬೇರೆ ಪಾರ್ಟ್​ಟೈಮ್ ಕೆಲಸ ಮಾಡುವುದಕ್ಕೆ ಆಕ್ಷೇಪಿಸುತ್ತಾರೆ. ಇದು ಹಿಪೋಕ್ರೆಸಿ ಎಂದು ಟೀಕಿಸಿದ್ದಾರೆ.

ಕಳೆದ ಒಂದು ದಶಕದಲ್ಲಿ ಐಟಿ ಕಂಪನಿಗಳಲ್ಲಿ ಹೊಸಬರಿಗೆ ಸಿಗುವ ಸಂಬಳ ಮತ್ತು ಸಿಇಒಗಳಿಗೆ ಸಿಗುವ ಸಂಬಳ ಎಷ್ಟೆಷ್ಟು ಏರಿಕೆ ಆಗಿದೆ ಎಂಬುದನ್ನು ಹೋಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ಜನರು ಶಿಸ್ತು, ಶ್ರಮ ಹಾಕದಿದ್ದರೆ ಯಾವ ಸರ್ಕಾರ ಬಂದರೂ ಅಷ್ಟೇ; ಯುವಕರು ದಿನಕ್ಕೆ 12 ಗಂಟೆ ಕೆಲಸ ಮಾಡಬೇಕು: ಇನ್ಫೋಸಿಸ್ ನಾರಾಯಣಮೂರ್ತಿ

ಕಳೆದ ವಾರ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಮೋಹನ್ ದಾಸ್ ಪೈ ಜೊತೆಗಿನ ಪಾಡ್​ಕ್ಯಾಸ್ಟ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಭಾರತೀಯ ಉದ್ಯೋಗಿಗಳ ಉತ್ಪನ್ನಶೀಲತೆ ಬಹಳ ಕಡಿಮೆ ಇದೆ. ಚೀನಾದಂತಹ ದೇಶಗಳ ಜೊತೆ ಪೈಪೋಟಿ ನಡೆಸಬೇಕಾದರೆ ಭಾರತೀಯರ ಉತ್ಪನ್ನಶೀಲತೆ ಹೆಚ್ಚಬೇಕು. ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು. ಎರಡನೇ ವಿಶ್ವ ಮಹಾಯುದ್ಧದ ಬಳಿಕ ಜರ್ಮನಿ ಮತ್ತು ಜಪಾನೀಯರು ಹಾಕಿದ ರೀತಿಯಲ್ಲಿ ಭಾರತೀಯರು ಶ್ರಮ ಹಾಕಬೇಕು ಎಂದು ಮೂರ್ತಿ ಹೇಳಿದ್ದರು.

ನಾರಾಯಣಮೂರ್ತಿ ಪತ್ನಿ ಸುಧಾಮೂರ್ತಿ ಈ ಬಗ್ಗೆ ಪ್ರತಿಕ್ರಿಯಿಸಿ, ತಮ್ಮ ಪತಿ ವಾರಕ್ಕೆ 80-90 ಗಂಟೆ ಕೆಲಸ ಮಾಡುವವರು. ಅದಕ್ಕಿಂತ ಕಡಿಮೆ ಕೆಲಸ ಮಾಡಿಯೇ ಗೊತ್ತಿಲ್ಲ. ಅವರಿಗೆ ಅನಿಸಿದ್ದನ್ನು ಹೇಳಿದ್ದಾರೆ ಎಂದಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?