AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಗುಡ್ ನ್ಯೂಸ್: ನಾಳೆ ಕಿಸಾನ್ ಸಮ್ಮಾನ್​ 12ನೇ ಕಂತಿನ ಹಣ ಬಿಡುಗಡೆ ಮಾಡಲಿರುವ ಮೋದಿ

ನಾಳೆ ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್​​​ ಸಮ್ಮಾನ್​ ಯೋಜನೆಯ ಹಣವನ್ನೂ ಸಹ ಬಿಡುಗಡೆ ಮಾಡಲಿದ್ದಾರೆ. 12 ನೇ ಕಂತಿನ ಸ್ಟೇಟಸ್ ತಿಳಿದುಕೊಳ್ಳುವುದು ಹೇಗೆ?

ರೈತರಿಗೆ ಗುಡ್ ನ್ಯೂಸ್: ನಾಳೆ ಕಿಸಾನ್ ಸಮ್ಮಾನ್​ 12ನೇ ಕಂತಿನ ಹಣ ಬಿಡುಗಡೆ ಮಾಡಲಿರುವ ಮೋದಿ
ಪಿಎಮ್ ಕಿಸಾನ್ ಯೋಜನೆ
TV9 Web
| Edited By: |

Updated on:Oct 16, 2022 | 10:15 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಅಂದ್ರೆ ಅ.17ರಂದು ಕಿಸಾನ್ ಸಮ್ಮಾನ್ ಯೋಜನೆಯಡಿ (PM Kisan Samman)12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ.

16 ಸಾವಿರ ಕೋಟಿ ರೂ. ಹಣ 8 ಲಕ್ಷ ರೈತರ ಖಾತೆಗಳಿಗೆ ಜಮವಾಗಲಿದೆ. ಕಿಸಾನ್ ಸಮ್ಮಾನ್​ ಹಣ ಬಿಡುಗಡೆ ಮಾಡುವುದರ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಒಂದು ದೇಶ ಒಂದು ಗೊಬ್ಬರ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್‍ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಲಿದ್ದಾರೆ.

PM Kisan Samman Nidhi: ಒಂದು ಕುಟುಂಬದಲ್ಲಿ ಎಷ್ಟು ಮಂದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಪ್ರಯೋಜನ ಪಡೆಯಬಹುದು?

ಅಲ್ಲದೇ, 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಮೋದಿ ಆರಂಭಿಸಲಿದ್ದಾರೆ. ದೇಶದಲ್ಲಿರುವ 2.7 ಲಕ್ಷ ಗೊಬ್ಬರದ ಅಂಗಡಿಗಳನ್ನು ಹಂತ ಹಂತವಾಗಿ ವನ್ ಸ್ಟಾಪ್ ಸೆಂಟರ್‌ಗಳಾಗಿ ಬದಲಿಸಿ ಪಿಎಂ ಸಮೃದ್ಧಿ ಕೇಂದ್ರಗಳೆಂದು ಮರುನಾಮಕರಣ ಮಾಡಲಾಗುತ್ತದೆ.

ವಿವಿಧ ಸಂಘ-ಸಂಸ್ಥೆಗಳಿಂದ ಒಂದು ಕೋಟಿಗೂ ಹೆಚ್ಚು ರೈತರು ಈ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದೀಗ ದೇಶದಲ್ಲಿರುವ ರಸಗೊಬ್ಬರ ಚಿಲ್ಲರೆ ಅಂಗಡಿಗಳನ್ನು ಹಂತ ಹಂತವಾಗಿ ಪ್ರದಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳಾಗಿ ಪರಿವರ್ತಿಸುವ ಕಾರ್ಯ ಮುಂದಿನ ದಿನಗಳಲ್ಲಿ ನಡೆಯಲಿದೆ.

ಕೃಷಿ ಸ್ಟಾರ್ಟ್ಅಪ್ ಕಾನ್​ಕ್ಲೇವ್​ & ಪ್ರದರ್ಶನ ಆರಂಭಿಸಲಿದ್ದು, 1,500 ಅಗ್ರಿ ಸ್ಟಾರ್ಟ್​ಅಪ್​​, 13,500 ರೈತರು ಭಾಗಿಯಾಗಲಿದ್ದಾರೆ.

12 ನೇ ಕಂತಿನ ಸ್ಟೇಟಸ್ ತಿಳಿದುಕೊಳ್ಳುವುದು ಹೇಗೆ?

-ಅಧಿಕೃತ ವೆಬ್ ಸೈಟ್ pmkisan.gov.in ಲಾಗಿನ್ ಆಗಿ

-‘ಫಾರ್ಮರ್ಸ್ ಕಾರ್ನರ್’ ಎಂದ ಆಪ್ಶನ್ ಮೇಲೆ ಕ್ಲಿಕ್ ಮಾಡಿ

-ನಂತರ ‘ಬೆನೆಫಿಸಿಯರಿ ಸ್ಟೇಟಸ್’ ಮೇಲೆ ಕ್ಲಿಕ್ ಮಾಡಿ

-ನಿಮ್ಮ ಬ್ಯಾಂಕ್ ಅಕೌಂಟ್ ಇಲ್ಲವೇ ಆಧಾರ್ ನಂಬರ್ ಆಪ್ಶನ್​ಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಿ.

-ಸೂಕ್ತವಾದ ನಂಬರನ್ನು ತಪ್ಪಿಲ್ಲದಂತೆ ಭರ್ತಿ ಮಾಡಿ

-‘ಗೆಟ್ ಡಾಟಾ’ ಎಂಬ ಆಪ್ಶನ್ ಮೇಲೆ ಕ್ಲಿಕ್ ಮಾಡಿ 

ಇದನ್ನೆಲ್ಲ ಮಾಡಿದ ಮೇಲೆ ವಹಿವಾಟಿನ ಎಲ್ಲ ವಿವರಗಳು ನಿಮಗೆ ಲಭ್ಯವಾಗುತ್ತವೆ.

Published On - 10:15 pm, Sun, 16 October 22

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ