AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಯುಎಇ ಭೇಟಿಯಲ್ಲಿ ಹಲವು ಒಪ್ಪಂದಗಳಿಗೆ ಸಹಿ

Narendra Modi UAE visit: ಭಾರತದಲ್ಲಿ ತೈಲ ಬಿಕ್ಕಟ್ಟು ತೀವ್ರವಾಗಿರುವ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ಭೇಟಿ ನೀಡಿದ್ದಾರೆ. ಇಂಧನ ಭದ್ರತೆ ಸೇರಿದಂತೆ ಹಲವು ಗುರಿಗಳೊಂದಿಗೆ ಸಂಯುಕ್ತ ಅರಬ್ ಸಂಸ್ಥಾನಕ್ಕೆ ಮೋದಿ ಭೇಟಿ ಕೊಟ್ಟಿದ್ಧಾರೆ. ನಿರೀಕ್ಷೆಯಂತೆ ಹಲವು ಎಂಒಯುಗಳು, ಒಪ್ಪಂದಗಳು ಏರ್ಪಟ್ಟಿವೆ.

ಪ್ರಧಾನಿ ಮೋದಿ ಯುಎಇ ಭೇಟಿಯಲ್ಲಿ ಹಲವು ಒಪ್ಪಂದಗಳಿಗೆ ಸಹಿ
ಯುಎಇ ಅಧ್ಯಕ್ಷ ಶೇಖ್ ಜೊತೆ ನರೇಂದ್ರ ಮೋದಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 15, 2026 | 4:47 PM

Share

ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಯುಎಇಗೆ (UAE) ನೀಡಿರುವ ಭೇಟಿಯಿಂದ ಹಲವು ನಿರೀಕ್ಷೆಗಳಿವೆ. ಭಾರತದ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಪ್ರಧಾನಿ ಭೇಟಿಯ ಪ್ರಮುಖ ಕಾರ್ಯಸೂಚಿಯಾಗಿದೆ. ಇಂಧನ ಭದ್ರತೆ, ರಕ್ಷಣಾ ಕ್ಷೇತ್ರ ಹಾಗೂ ವ್ಯಾಪಾರದಲ್ಲಿ ಎರಡೂ ದೇಶಗಳ ಮಧ್ಯೆ ಪ್ರಮುಖ ಒಪ್ಪಂದ ಏರ್ಪಟ್ಟಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಪ್ರತಿ ಲೀಟರ್‌ಗೆ ಸುಮಾರು 3 ರೂಪಾಯಿಗಳಷ್ಟು ಏರಿಕೆಯಾಗಿವೆ. ಯುಎಇ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿಯವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಪ್ರಮುಖ ಮಾತುಕತೆ ನಡೆಸಿದ್ದಾರೆ. ಭಾರತಕ್ಕೆ ಎಲ್‌ಪಿಜಿ (LPG) ಪೂರೈಕೆ ಮತ್ತು ಪೆಟ್ರೋಲಿಯಂ ಮೀಸಲು (Strategic Petroleum Reserves) ಕುರಿತು ಪ್ರಮುಖ ಒಪ್ಪಂದಗಳಿಗೆ ಸಹಿ (ಎಂಒಯು) ಹಾಕಲಾಗಿದೆ.

ಇದನ್ನೂ ಓದಿ: ಖೈಬರ್ ಪಖ್ತುಂಖ್ವಾದಲ್ಲಿ ಭಾರಿ ಉಗ್ರ ದಾಳಿ: ಪಾಕಿಸ್ತಾನದ 18 ಮಂದಿ ಭದ್ರತಾ ಸಿಬ್ಬಂದಿ ಸಾವು

ಭಾರತದ ಮೂಲಸೌಕರ್ಯ, ಆರ್​ಬಿಎಲ್ ಬ್ಯಾಂಕ್ ಮತ್ತು ಸಮ್ಮಾನ್ ಕ್ಯಾಪಿಟಲ್​ನಲ್ಲಿ ಯುಎಇಯಿಂದ 5 ಬಿಲಿಯನ್ ಡಾಲರ್​ನಷ್ಟು ಹೂಡಿಕೆ ಬರಲಿದೆ. ಗುಜರಾತ್​ನ ದ್ವಾರಕಾದಲ್ಲಿರುವ ವಾದಿನಾರ್​ನಲ್ಲಿ ಹಡಗು ದುರಸ್ತಿ ಕೇಂದ್ರವನ್ನು ಸ್ಥಾಪಿಸಲೂ ಸಹಿ ಹಾಕಲಾಗಿದೆ.

ಯಾವುದೇ ಪರಿಸ್ಥಿತಿಯಲ್ಲೂ ಯುಎಇಗೆ ಬೆಂಬಲ: ಮೋದಿ

ನಿಯೋಗ ಮಟ್ಟದ ಮಾತುಕತೆ ವೇಳೆ ಮಾತನಾಡಿದ ನರೇಂದ್ರ ಮೋದಿ, ಯುಎಇಗೆ ಎಲ್ಲಾ ರೀತಿಯಲ್ಲೂ ಸಹಕಾರ ಕೊಡುವುದಾಗಿ ಭರವಸೆ ನೀಡಿದ್ದಾರೆ. ಎಲ್ಲಾ ಪರಿಸ್ಥಿತಿಯಲ್ಲೂ ಯುಎಇಯೊಂದಿಗೆ ಭಾರತ ಹೆಗಲಿಗೆ ಹೆಗಲು ಕೊಡುತ್ತಾ ಬಂದಿದೆ. ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮರಳಿ ತರಲು ಭಾರತ ಸಾಧ್ಯವಾದ ಎಲ್ಲಾ ಸಹಕಾರ ಕೊಡುತ್ತದೆ ಎಂದೂ ಮೋದಿ ತಿಳಿಸಿದ್ದಾರೆ. ಹಾಗೆಯೇ, ಇರಾನ್, ಅಮೆರಿಕ ಯುದ್ಧದ ಮಧ್ಯೆ ಯುಎಇಯ ಸ್ಥಳಗಳ ಮೇಲೆ ನಡೆದ ದಾಳಿಯನ್ನೂ ಮೋದಿ ಇದೇ ವೇಳೆ ಖಂಡಿಸಿದ್ದಾರೆ.

ಭಾರತದ ಇಂಧನ ಭದ್ರತೆಗೆ ಸರ್ಕಾರದ ಪ್ರಯತ್ನಗಳು

ಯುದ್ಧದಿಂದಾಗಿ ವಿದೇಶಿ ವಿನಿಮಯ ಮೀಸಲು ಮೇಲೆ ಒತ್ತಡ ಬೀಳುತ್ತಿರುವುದರಿಂದ, ಪ್ರಧಾನಿಯವರು ದೇಶದ ಜನರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡಲು ಮತ್ತು ಮಿತವ್ಯಯದ ಕ್ರಮಗಳನ್ನು ಅನುಸರಿಸಲು ಕರೆ ನೀಡಿದ್ದಾರೆ. ಭಾರತೀಯ ತೈಲ ನಿಗಮ (IOC) ಮತ್ತು ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿ (ADNOC) ನಡುವೆ ಎಲ್‌ಪಿಜಿ ಪೂರೈಕೆಗಾಗಿ ಒಪ್ಪಂದ.

ಇದನ್ನೂ ಓದಿ: ಹಾರ್ಮುಜ್‌ ಸುತ್ತಲಿನ ಪ್ರದೇಶವೂ ಸುರಕ್ಷಿತವಲ್ಲ! ಮತ್ತೆ ಭಾರತದ ಹಡಗಿನ ಮೇಲೆ ದಾಳಿ

ತೈಲ ಸಂಗ್ರಹಣೆಯನ್ನು ಹೆಚ್ಚಿಸಲು ಭಾರತೀಯ ಆಯಕಟ್ಟಿನ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (ISPRL) ನೊಂದಿಗೆ ಸಹಯೋಗ ಪಡೆಯಲಾಗಿದೆ.

ಭಾರತವು ತನ್ನ ಕಚ್ಚಾ ತೈಲ ಅಗತ್ಯದ ಶೇ. 88 ರಷ್ಟು ಭಾಗವನ್ನು ಆಮದು ಮಾಡಿಕೊಳ್ಳುತ್ತದೆ. ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ತೈಲ ಸಾಗಣೆಗೆ ಅಡ್ಡಿಯಾಗಿರುವುದು ಭಾರತದ ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ.

ಜಾಗತಿಕ ಅಸ್ಥಿರತೆಯ ನಡುವೆ ಭಾರತದ ಇಂಧನ ಅಗತ್ಯಗಳನ್ನು ಪೂರೈಸಲು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಈ ಯುಎಇ ಭೇಟಿ ಅತ್ಯಂತ ನಿರ್ಣಾಯಕವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ