AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DBT Savings: ನೇರವಾಗಿ ಅಕೌಂಟ್​ಗೆ ಹಣ ವರ್ಗಾವಣೆ ಮಾಡುವುದರಿಂದ ಕೇಂದ್ರ ಸರ್ಕಾರಕ್ಕೆ ಉಳಿತಾಯವಾದ ಹಣವೆಷ್ಟು ಗೊತ್ತಾ?

Nirmala Sitharaman on DBT: ಕಳೆದ 9 ವರ್ಷದಿಂದ ನೇರ ಹಣ ವರ್ಗಾವಣೆ ವ್ಯವಸ್ಥೆ ಬಳಕೆಯಿಂದ ಕೇಂದ್ರ ಸರ್ಕಾರಕ್ಕೆ 2.73 ಲಕ್ಷಕೋಟಿ ರೂನಷ್ಟು ಹಣ ಉಳಿತಾಯವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಉಳಿತಾಯವಾದ ಹಣವನ್ನು ಇತರ ಯೋಜನೆಗಳಿಗೆ ಬಳಸಲು ಅನುಕೂಲವಾಗಿದೆ ಎಂದವರು ತಿಳಿಸಿದ್ದಾರೆ.

DBT Savings: ನೇರವಾಗಿ ಅಕೌಂಟ್​ಗೆ ಹಣ ವರ್ಗಾವಣೆ ಮಾಡುವುದರಿಂದ ಕೇಂದ್ರ ಸರ್ಕಾರಕ್ಕೆ ಉಳಿತಾಯವಾದ ಹಣವೆಷ್ಟು ಗೊತ್ತಾ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 16, 2023 | 10:51 AM

ನವದೆಹಲಿ, ಆಗಸ್ಟ್ 16: ಪಿಎಂ ಕಿಸಾನ್ ಸಮ್ಮಾನ್ ನಿಧಿ ಇತ್ಯಾದಿ ಯಾವುದೇ ಸರ್ಕಾರಿ ಯೋಜನೆಯಲ್ಲಿ ನೀಡಲಾಗುವ ಧನಸಹಾಯವು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಆಗುತ್ತದೆ. ಇದು ನೇರ ನಗದು ವರ್ಗಾವಣೆ ಅಥವಾ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್​ಫರ್ (DBT- Direct Benefit Transfer) ವಿಧಾನ. ಹಣ ಪೋಲಾಗದೇ ನಿರ್ದಿಷ್ಟ ಫಲಾನುಭವಿಗಳಿಗೆ ನೆರವು ಹೋಗಲು ಈ ಪದ್ಧತಿ ಬಹಳ ಸಹಾಯವಾಗುತ್ತದೆ. ಕೇಂದ್ರ ಸರ್ಕಾರ ಪ್ರತೀ ವರ್ಷ ಲಕ್ಷಾಂತರ ಕೋಟಿ ರೂನಷ್ಟು ಹಣವನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ನೀಡುತ್ತದೆ. ಡಿಬಿಟಿ ವ್ಯವಸ್ಥೆಯಿಂದಾಗಿ ಬಹಳಷ್ಟು ಹಣ ಸೋರಿಕೆಯಾಗುವುದು ನಿಂತಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ ಮಾಹಿತಿ ಪ್ರಕಾರ ಕಳೆದ 9 ವರ್ಷದಲ್ಲಿ ಡಿಬಿಟಿ ವಿಧಾನದಲ್ಲಿ 2.73 ಲಕ್ಷಕೋಟಿ ಹಣ ಅನಗತ್ಯವಾಗಿ ಪೋಲಾಗುವುದು ತಪ್ಪಿದೆಯಂತೆ.

ಆಗಸ್ಟ್ 15ರಂದು ದಿಶಾ ಭಾರತ್ ಎಂಬ ಸರ್ಕಾರೇತರ ಸಂಸ್ಥೆ (NGO) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ನಿರ್ಮಲಾ ಸೀತಾರಾಮನ್, ಡಿಬಿಟಿ ವ್ಯವಸ್ಥೆಯನ್ನು ಅಳವಡಿಸಿಕೊಂಡ ಬಂದ ಬಳಿಕ ಕಳೆದ 9 ವರ್ಷದಲ್ಲಿ ಆಡಳಿತದ ಕಾರ್ಯಕ್ಷಮತೆ ಹೆಚ್ಚಿದೆ. ಸರ್ಕಾರಿ ಯೋಜನೆಗಳ ಅರ್ಹ ಫಲಾನುಭವಿಗಳನ್ನು ನಿಖರವಾಗಿ ತಲುಪಲು ಸಾಧ್ಯವಾಗಿದೆ. ಶಿಕ್ಷಣ, ಆರೋಗ್ಯ ಇತ್ಯಾದಿ ಕ್ಷೇತ್ರಗಳಿಗೆ ಹೆಚ್ಚು ಹಣ ವಿನಿಯೋಗಿಸುವ ಸಂಭಾವ್ಯತೆ ಹೆಚ್ಚಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಸ್ಟಾರ್ಟಪ್​ಗೆ ಪೂರಕ ವಾತಾವರಣ; ಜಾಗತಿಕ ರ‍್ಯಾಂಕಿಂಗ್​ನಲ್ಲಿ ಬೆಂಗಳೂರಿಗೆ 8ನೇ ಸ್ಥಾನ

‘2014ರ ನಂತರ ಹಂತ ಹಂತವಾಗಿ ಹೆಚ್ಚೆಚ್ಚು ಯೋಜನೆಗಳಿಗೆ ಡಿಬಿಟಿ ವ್ಯವಸ್ಥೆ ಜೋಡಿಸಿದ್ದೇವೆ. ಇದರಿಂದ 2.73 ಲಕ್ಷಕೋಟಿ ರೂ ಉಳಿದಿದೆ. ಈ ಹಣವನ್ನು ಹಲವು ಇತರ ಯೋಜನೆಗಳಿಗೆ ಬಳಸಲು ಅನುಕೂಲವಾಗಿದೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಡಿಬಿಟಿ ವ್ಯವಸ್ಥೆಯಲ್ಲಿ ಮೂರು ಅಂಶಗಳಿವೆ. ಜನ್ ಧನ್ ಖಾತೆ, ಆಧಾರ್ ಮತ್ತು ಮೊಬೈಲ್ ನಂಬರ್ ಈ ಮೂರನ್ನು ಉಪಯೋಗಿಸಿ ಯೋಜನೆಯ ನಕಲಿ ಫಲಾನುಭವಿಗಳನ್ನು ತಡೆಗಟ್ಟಿ ಅರ್ಹರಿಗೆ ಹಣ ತಲುಪಲು ಸಾಧ್ಯವಾಗಿದೆ.

ಇದನ್ನೂ ಓದಿ: ನಿವೃತ್ತಿ ಬಳಿಕ ಆರೋಗ್ಯ ವಿಮಾ ಪಾಲಿಸಿ ಸಿಗುತ್ತದಾ? ಇನ್ಷೂರೆನ್ಸ್ ಮಾಡಿಸುವಾಗ ಎಚ್ಚರವಹಿಸಬೇಕಾದ ಸಂಗತಿಗಳನ್ನು ತಿಳಿದಿರಿ

ನೇರ ಹಣ ವರ್ಗಾವಣೆ ಪದ್ಧತಿ ಮೊದಲು ಜಾರಿಗೆ ಬಂದಿದ್ದು 2013ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ಈ ವ್ಯವಸ್ಥೆ ಸುಧಾರಣೆ ಕಾಣುತ್ತಾ ಹೋಗಿದೆ. ಇಲ್ಲಿಯವರೆಗೆ ಭಾರತದಲ್ಲಿ 100 ಕೋಟಿಗೂ ಹೆಚ್ಚು ಮಂದಿ ಮೊಬೈಲ್ ನಂಬರ್ ಮತ್ತು ಆಧಾರ್ ನಂಬರ್ ಹೊಂದಿದ್ದಾರೆ. 22 ಕೋಟಿ ಮಂದಿ ಜನ್ ಧನ್ ಖಾತೆ ಹೊಂದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ