AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DBT Savings: ನೇರವಾಗಿ ಅಕೌಂಟ್​ಗೆ ಹಣ ವರ್ಗಾವಣೆ ಮಾಡುವುದರಿಂದ ಕೇಂದ್ರ ಸರ್ಕಾರಕ್ಕೆ ಉಳಿತಾಯವಾದ ಹಣವೆಷ್ಟು ಗೊತ್ತಾ?

Nirmala Sitharaman on DBT: ಕಳೆದ 9 ವರ್ಷದಿಂದ ನೇರ ಹಣ ವರ್ಗಾವಣೆ ವ್ಯವಸ್ಥೆ ಬಳಕೆಯಿಂದ ಕೇಂದ್ರ ಸರ್ಕಾರಕ್ಕೆ 2.73 ಲಕ್ಷಕೋಟಿ ರೂನಷ್ಟು ಹಣ ಉಳಿತಾಯವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಉಳಿತಾಯವಾದ ಹಣವನ್ನು ಇತರ ಯೋಜನೆಗಳಿಗೆ ಬಳಸಲು ಅನುಕೂಲವಾಗಿದೆ ಎಂದವರು ತಿಳಿಸಿದ್ದಾರೆ.

DBT Savings: ನೇರವಾಗಿ ಅಕೌಂಟ್​ಗೆ ಹಣ ವರ್ಗಾವಣೆ ಮಾಡುವುದರಿಂದ ಕೇಂದ್ರ ಸರ್ಕಾರಕ್ಕೆ ಉಳಿತಾಯವಾದ ಹಣವೆಷ್ಟು ಗೊತ್ತಾ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 16, 2023 | 10:51 AM

Share

ನವದೆಹಲಿ, ಆಗಸ್ಟ್ 16: ಪಿಎಂ ಕಿಸಾನ್ ಸಮ್ಮಾನ್ ನಿಧಿ ಇತ್ಯಾದಿ ಯಾವುದೇ ಸರ್ಕಾರಿ ಯೋಜನೆಯಲ್ಲಿ ನೀಡಲಾಗುವ ಧನಸಹಾಯವು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಆಗುತ್ತದೆ. ಇದು ನೇರ ನಗದು ವರ್ಗಾವಣೆ ಅಥವಾ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್​ಫರ್ (DBT- Direct Benefit Transfer) ವಿಧಾನ. ಹಣ ಪೋಲಾಗದೇ ನಿರ್ದಿಷ್ಟ ಫಲಾನುಭವಿಗಳಿಗೆ ನೆರವು ಹೋಗಲು ಈ ಪದ್ಧತಿ ಬಹಳ ಸಹಾಯವಾಗುತ್ತದೆ. ಕೇಂದ್ರ ಸರ್ಕಾರ ಪ್ರತೀ ವರ್ಷ ಲಕ್ಷಾಂತರ ಕೋಟಿ ರೂನಷ್ಟು ಹಣವನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ನೀಡುತ್ತದೆ. ಡಿಬಿಟಿ ವ್ಯವಸ್ಥೆಯಿಂದಾಗಿ ಬಹಳಷ್ಟು ಹಣ ಸೋರಿಕೆಯಾಗುವುದು ನಿಂತಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ ಮಾಹಿತಿ ಪ್ರಕಾರ ಕಳೆದ 9 ವರ್ಷದಲ್ಲಿ ಡಿಬಿಟಿ ವಿಧಾನದಲ್ಲಿ 2.73 ಲಕ್ಷಕೋಟಿ ಹಣ ಅನಗತ್ಯವಾಗಿ ಪೋಲಾಗುವುದು ತಪ್ಪಿದೆಯಂತೆ.

ಆಗಸ್ಟ್ 15ರಂದು ದಿಶಾ ಭಾರತ್ ಎಂಬ ಸರ್ಕಾರೇತರ ಸಂಸ್ಥೆ (NGO) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ನಿರ್ಮಲಾ ಸೀತಾರಾಮನ್, ಡಿಬಿಟಿ ವ್ಯವಸ್ಥೆಯನ್ನು ಅಳವಡಿಸಿಕೊಂಡ ಬಂದ ಬಳಿಕ ಕಳೆದ 9 ವರ್ಷದಲ್ಲಿ ಆಡಳಿತದ ಕಾರ್ಯಕ್ಷಮತೆ ಹೆಚ್ಚಿದೆ. ಸರ್ಕಾರಿ ಯೋಜನೆಗಳ ಅರ್ಹ ಫಲಾನುಭವಿಗಳನ್ನು ನಿಖರವಾಗಿ ತಲುಪಲು ಸಾಧ್ಯವಾಗಿದೆ. ಶಿಕ್ಷಣ, ಆರೋಗ್ಯ ಇತ್ಯಾದಿ ಕ್ಷೇತ್ರಗಳಿಗೆ ಹೆಚ್ಚು ಹಣ ವಿನಿಯೋಗಿಸುವ ಸಂಭಾವ್ಯತೆ ಹೆಚ್ಚಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಸ್ಟಾರ್ಟಪ್​ಗೆ ಪೂರಕ ವಾತಾವರಣ; ಜಾಗತಿಕ ರ‍್ಯಾಂಕಿಂಗ್​ನಲ್ಲಿ ಬೆಂಗಳೂರಿಗೆ 8ನೇ ಸ್ಥಾನ

‘2014ರ ನಂತರ ಹಂತ ಹಂತವಾಗಿ ಹೆಚ್ಚೆಚ್ಚು ಯೋಜನೆಗಳಿಗೆ ಡಿಬಿಟಿ ವ್ಯವಸ್ಥೆ ಜೋಡಿಸಿದ್ದೇವೆ. ಇದರಿಂದ 2.73 ಲಕ್ಷಕೋಟಿ ರೂ ಉಳಿದಿದೆ. ಈ ಹಣವನ್ನು ಹಲವು ಇತರ ಯೋಜನೆಗಳಿಗೆ ಬಳಸಲು ಅನುಕೂಲವಾಗಿದೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಡಿಬಿಟಿ ವ್ಯವಸ್ಥೆಯಲ್ಲಿ ಮೂರು ಅಂಶಗಳಿವೆ. ಜನ್ ಧನ್ ಖಾತೆ, ಆಧಾರ್ ಮತ್ತು ಮೊಬೈಲ್ ನಂಬರ್ ಈ ಮೂರನ್ನು ಉಪಯೋಗಿಸಿ ಯೋಜನೆಯ ನಕಲಿ ಫಲಾನುಭವಿಗಳನ್ನು ತಡೆಗಟ್ಟಿ ಅರ್ಹರಿಗೆ ಹಣ ತಲುಪಲು ಸಾಧ್ಯವಾಗಿದೆ.

ಇದನ್ನೂ ಓದಿ: ನಿವೃತ್ತಿ ಬಳಿಕ ಆರೋಗ್ಯ ವಿಮಾ ಪಾಲಿಸಿ ಸಿಗುತ್ತದಾ? ಇನ್ಷೂರೆನ್ಸ್ ಮಾಡಿಸುವಾಗ ಎಚ್ಚರವಹಿಸಬೇಕಾದ ಸಂಗತಿಗಳನ್ನು ತಿಳಿದಿರಿ

ನೇರ ಹಣ ವರ್ಗಾವಣೆ ಪದ್ಧತಿ ಮೊದಲು ಜಾರಿಗೆ ಬಂದಿದ್ದು 2013ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ಈ ವ್ಯವಸ್ಥೆ ಸುಧಾರಣೆ ಕಾಣುತ್ತಾ ಹೋಗಿದೆ. ಇಲ್ಲಿಯವರೆಗೆ ಭಾರತದಲ್ಲಿ 100 ಕೋಟಿಗೂ ಹೆಚ್ಚು ಮಂದಿ ಮೊಬೈಲ್ ನಂಬರ್ ಮತ್ತು ಆಧಾರ್ ನಂಬರ್ ಹೊಂದಿದ್ದಾರೆ. 22 ಕೋಟಿ ಮಂದಿ ಜನ್ ಧನ್ ಖಾತೆ ಹೊಂದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ