AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal: ದುಬಾರಿ ವ್ಯಾಟ್ ತೆರಿಗೆ: ಭಾರತದಿಂದ ತರಕಾರಿ, ಈರುಳ್ಳಿ ಖರೀದಿ ನಿಲ್ಲಿಸಿದ ನೇಪಾಳಿ ವರ್ತಕರು

13% VAT For Imported Vegetables In Nepal: ನೇಪಾಳ ಸರ್ಕಾರ ಆಮದಿತ ತರಕಾರಿ, ಹಣ್ಣು ಮತ್ತಿತರ ವಸ್ತುಗಳಿಗೆ ಶೇ. 13ರಷ್ಟು ವ್ಯಾಟ್ ವಿಧಿಸಿದೆ. ಇದರ ಪರಿಣಾಮವಾಗಿ ಅಲ್ಲಿನ ವರ್ತಕರು ಭಾರತದಿಂದ ತರಕಾರಿ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿದ್ದಾರೆ.

Nepal: ದುಬಾರಿ ವ್ಯಾಟ್ ತೆರಿಗೆ: ಭಾರತದಿಂದ ತರಕಾರಿ, ಈರುಳ್ಳಿ ಖರೀದಿ ನಿಲ್ಲಿಸಿದ ನೇಪಾಳಿ ವರ್ತಕರು
ನೇಪಾಳದ ಈರುಳ್ಳಿ ಮಂಡಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 14, 2023 | 3:14 PM

Share

ಕಠ್ಮಂಡು: ನೇಪಾಳದಲ್ಲಿ ಈಗಾಗಲೇ ಬೆಲೆ ಏರಿಕೆಯ ಬಿಸಿಯಲ್ಲಿರುವ ಜನಸಾಮಾನ್ಯರ ಹಣಕಾಸು ದುಸ್ಥಿತಿಗೆ ಗಾಯದ ಮೇಲೆ ಬರೆ ಎಳೆದಂತೆ ಅಲ್ಲಿನ ಸರ್ಕಾರ ಕೆಲ ಪ್ರಮುಖ ಆಹಾರವಸ್ತುಗಳ ಆಮದಿಗೆ ವ್ಯಾಟ್ ತೆರಿಗೆ (VAT) ವಿಪರೀತ ಏರಿಸಿದೆ. ತರಕಾರಿ ಮತ್ತು ಈರುಳ್ಳಿ ವಸ್ತುಗಳ ಆಮದು (Import of Vegetables) ಮೇಲೆ ಕಳೆದ ತಿಂಗಳು ನೇಪಾಳ ಸರ್ಕಾರ ಶೇ. 13ರಷ್ಟು ಮೌಲ್ಯವರ್ಧಿತ ತೆರಿಗೆಯನ್ನು (ವಿಎಟಿ) ವಿಧಿಸಿದೆ. ಇದರ ಪರಿಣಾಮವಾಗಿ ಭಾರತದಿಂದ ನೇಪಾಳಕ್ಕೆ ರಫ್ತಾಗುತ್ತಿದ್ದ ತರಕಾರಿ ಮತ್ತು ಈರುಳ್ಳಿಯನ್ನು ನೇಪಾಳಿ ವರ್ತಕರು ಖರೀದಿಸುವುದನ್ನು ನಿಲ್ಲಿಸಿದ್ದಾರೆ. ಈ ವಿಚಾರವನ್ನು ನೇಪಾಳಿ ವ್ಯಾಪಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ಹಂಚಿಕೊಂಡಿದ್ದಾರೆ.

ಆಮದಾದ ಈರುಳ್ಳಿ, ಆಲೂಗಡ್ಡೆ ಮತ್ತಿತರ ವಿವಿಧ ತರಕಾರಿಗಳು ಹಾಗೂ ಹಣ್ಣುಗಳ ಮೇಲೆ ಶೇ. 13ರಷ್ಟು ವ್ಯಾಟ್ ವಿಧಿಸಲು ಅವಕಾಶ ಇರುವ ಹಣಕಾಸು ಮಸೂದೆಯು ಮೇ 29ರಂದು ನೇಪಾಳ ಸಂಸತ್ತಿನಲ್ಲಿ ಮಂಡನೆಯಾಗಿತ್ತು. ಸರ್ಕಾರದ ಈ ಕ್ರಮಕ್ಕೆ ಅಲ್ಲಿನ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿWPI Inflation: ಸಗಟು ಬೆಲೆ ಹಣದುಬ್ಬರ ಮೈನಸ್ 3.48 ಪ್ರತಿಶತಕ್ಕೆ ಕುಸಿತ; ಆರ್ಥಿಕತೆಗೆ ಅನುಕೂಲವೋ, ಅಪಾಯವೋ?

ನೇಪಾಳದಲ್ಲಿ ವಿಪರೀತವಾಗಿರುವ ಹಣದುಬ್ಬರದ ಪರಿಸ್ಥಿತಿ ಈಗ ಇನ್ನಷ್ಟು ಹದಗೆಡುತ್ತದೆ. ಬೆಲೆ ಏರಿಕೆಯ ಬಿಸಿಯಲ್ಲಿರುವ ಜನಸಾಮಾನ್ಯರ ಬವಣೆ ಇನ್ನೂ ತಾರಕಕ್ಕೇರುತ್ತದೆ. ಅದರಲ್ಲೂ ಕಡಿಮೆ ಆದಾಯದ ಕುಟುಂಬಗಳಿಗೆ ಆಹಾರ ಅಭದ್ರತೆ ಹೆಚ್ಚುತ್ತದೆ ಎಂದು ಅಲ್ಲಿನ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ನೇಪಾಳದಲ್ಲಿ 2023ರ ಮೇ ತಿಂಗಳಲ್ಲಿ ಹಣದುಬ್ಬರ ಶೇ. 7.41ರಷ್ಟಿದೆ. ಭಾರತದಿಂದ ಬಹಳಷ್ಟು ಆಹಾರವಸ್ತುಗಳನ್ನು ನೇಪಾಳ ಆಮದು ಮಾಡಿಕೊಳ್ಳುತ್ತದೆ. ಈಗ ವ್ಯಾಟ್ ತೆರಿಗೆ ಏರಿಕೆಯಿಂದ ಹಣ್ಣು ಮತ್ತು ತರಕಾರಿಗಳ ಬೆಲೆ ತುಸು ಹೆಚ್ಚಬಹುದು. ಏಪ್ರಿಲ್​ಗಿಂತ ಮೇ ತಿಂಗಳಲ್ಲಿ ಕಡಿಮೆ ಆಗಿದ್ದ ಹಣದುಬ್ಬರ ಮತ್ತೆ ಏರಿಕೆಯ ಹಾದಿಗಿಳಿದರೆ ಅಚ್ಚರಿ ಇಲ್ಲ ಎನ್ನುತ್ತಾರೆ ಅಲ್ಲಿನ ಹಣಕಾಸು ತಜ್ಞರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:13 pm, Wed, 14 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ