AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal: ದುಬಾರಿ ವ್ಯಾಟ್ ತೆರಿಗೆ: ಭಾರತದಿಂದ ತರಕಾರಿ, ಈರುಳ್ಳಿ ಖರೀದಿ ನಿಲ್ಲಿಸಿದ ನೇಪಾಳಿ ವರ್ತಕರು

13% VAT For Imported Vegetables In Nepal: ನೇಪಾಳ ಸರ್ಕಾರ ಆಮದಿತ ತರಕಾರಿ, ಹಣ್ಣು ಮತ್ತಿತರ ವಸ್ತುಗಳಿಗೆ ಶೇ. 13ರಷ್ಟು ವ್ಯಾಟ್ ವಿಧಿಸಿದೆ. ಇದರ ಪರಿಣಾಮವಾಗಿ ಅಲ್ಲಿನ ವರ್ತಕರು ಭಾರತದಿಂದ ತರಕಾರಿ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿದ್ದಾರೆ.

Nepal: ದುಬಾರಿ ವ್ಯಾಟ್ ತೆರಿಗೆ: ಭಾರತದಿಂದ ತರಕಾರಿ, ಈರುಳ್ಳಿ ಖರೀದಿ ನಿಲ್ಲಿಸಿದ ನೇಪಾಳಿ ವರ್ತಕರು
ನೇಪಾಳದ ಈರುಳ್ಳಿ ಮಂಡಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 14, 2023 | 3:14 PM

Share

ಕಠ್ಮಂಡು: ನೇಪಾಳದಲ್ಲಿ ಈಗಾಗಲೇ ಬೆಲೆ ಏರಿಕೆಯ ಬಿಸಿಯಲ್ಲಿರುವ ಜನಸಾಮಾನ್ಯರ ಹಣಕಾಸು ದುಸ್ಥಿತಿಗೆ ಗಾಯದ ಮೇಲೆ ಬರೆ ಎಳೆದಂತೆ ಅಲ್ಲಿನ ಸರ್ಕಾರ ಕೆಲ ಪ್ರಮುಖ ಆಹಾರವಸ್ತುಗಳ ಆಮದಿಗೆ ವ್ಯಾಟ್ ತೆರಿಗೆ (VAT) ವಿಪರೀತ ಏರಿಸಿದೆ. ತರಕಾರಿ ಮತ್ತು ಈರುಳ್ಳಿ ವಸ್ತುಗಳ ಆಮದು (Import of Vegetables) ಮೇಲೆ ಕಳೆದ ತಿಂಗಳು ನೇಪಾಳ ಸರ್ಕಾರ ಶೇ. 13ರಷ್ಟು ಮೌಲ್ಯವರ್ಧಿತ ತೆರಿಗೆಯನ್ನು (ವಿಎಟಿ) ವಿಧಿಸಿದೆ. ಇದರ ಪರಿಣಾಮವಾಗಿ ಭಾರತದಿಂದ ನೇಪಾಳಕ್ಕೆ ರಫ್ತಾಗುತ್ತಿದ್ದ ತರಕಾರಿ ಮತ್ತು ಈರುಳ್ಳಿಯನ್ನು ನೇಪಾಳಿ ವರ್ತಕರು ಖರೀದಿಸುವುದನ್ನು ನಿಲ್ಲಿಸಿದ್ದಾರೆ. ಈ ವಿಚಾರವನ್ನು ನೇಪಾಳಿ ವ್ಯಾಪಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ಹಂಚಿಕೊಂಡಿದ್ದಾರೆ.

ಆಮದಾದ ಈರುಳ್ಳಿ, ಆಲೂಗಡ್ಡೆ ಮತ್ತಿತರ ವಿವಿಧ ತರಕಾರಿಗಳು ಹಾಗೂ ಹಣ್ಣುಗಳ ಮೇಲೆ ಶೇ. 13ರಷ್ಟು ವ್ಯಾಟ್ ವಿಧಿಸಲು ಅವಕಾಶ ಇರುವ ಹಣಕಾಸು ಮಸೂದೆಯು ಮೇ 29ರಂದು ನೇಪಾಳ ಸಂಸತ್ತಿನಲ್ಲಿ ಮಂಡನೆಯಾಗಿತ್ತು. ಸರ್ಕಾರದ ಈ ಕ್ರಮಕ್ಕೆ ಅಲ್ಲಿನ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿWPI Inflation: ಸಗಟು ಬೆಲೆ ಹಣದುಬ್ಬರ ಮೈನಸ್ 3.48 ಪ್ರತಿಶತಕ್ಕೆ ಕುಸಿತ; ಆರ್ಥಿಕತೆಗೆ ಅನುಕೂಲವೋ, ಅಪಾಯವೋ?

ನೇಪಾಳದಲ್ಲಿ ವಿಪರೀತವಾಗಿರುವ ಹಣದುಬ್ಬರದ ಪರಿಸ್ಥಿತಿ ಈಗ ಇನ್ನಷ್ಟು ಹದಗೆಡುತ್ತದೆ. ಬೆಲೆ ಏರಿಕೆಯ ಬಿಸಿಯಲ್ಲಿರುವ ಜನಸಾಮಾನ್ಯರ ಬವಣೆ ಇನ್ನೂ ತಾರಕಕ್ಕೇರುತ್ತದೆ. ಅದರಲ್ಲೂ ಕಡಿಮೆ ಆದಾಯದ ಕುಟುಂಬಗಳಿಗೆ ಆಹಾರ ಅಭದ್ರತೆ ಹೆಚ್ಚುತ್ತದೆ ಎಂದು ಅಲ್ಲಿನ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ನೇಪಾಳದಲ್ಲಿ 2023ರ ಮೇ ತಿಂಗಳಲ್ಲಿ ಹಣದುಬ್ಬರ ಶೇ. 7.41ರಷ್ಟಿದೆ. ಭಾರತದಿಂದ ಬಹಳಷ್ಟು ಆಹಾರವಸ್ತುಗಳನ್ನು ನೇಪಾಳ ಆಮದು ಮಾಡಿಕೊಳ್ಳುತ್ತದೆ. ಈಗ ವ್ಯಾಟ್ ತೆರಿಗೆ ಏರಿಕೆಯಿಂದ ಹಣ್ಣು ಮತ್ತು ತರಕಾರಿಗಳ ಬೆಲೆ ತುಸು ಹೆಚ್ಚಬಹುದು. ಏಪ್ರಿಲ್​ಗಿಂತ ಮೇ ತಿಂಗಳಲ್ಲಿ ಕಡಿಮೆ ಆಗಿದ್ದ ಹಣದುಬ್ಬರ ಮತ್ತೆ ಏರಿಕೆಯ ಹಾದಿಗಿಳಿದರೆ ಅಚ್ಚರಿ ಇಲ್ಲ ಎನ್ನುತ್ತಾರೆ ಅಲ್ಲಿನ ಹಣಕಾಸು ತಜ್ಞರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:13 pm, Wed, 14 June 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ