AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Netflix: ವೆಚ್ಚ ತಗ್ಗಿಸುವ ಉದ್ದೇಶಕ್ಕೆ ನೆಟ್​ಫ್ಲಿಕ್ಸ್​ನಿಂದ 300 ಉದ್ಯೋಗಿಗಳ ವಜಾ

ಅಮೆರಿಕ ಮೂಲದ ನೆಟ್​ಫ್ಲಿಕ್ಸ್ 300 ಉದ್ಯೋಗಿಗಳನ್ನು ವಜಾ ಮಾಡಲಾಗಿದೆ. ವೆಚ್ಚ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಮಾಡಲಾಗಿದೆ.

Netflix: ವೆಚ್ಚ ತಗ್ಗಿಸುವ ಉದ್ದೇಶಕ್ಕೆ ನೆಟ್​ಫ್ಲಿಕ್ಸ್​ನಿಂದ 300 ಉದ್ಯೋಗಿಗಳ ವಜಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 24, 2022 | 12:43 PM

Share

ಸ್ಟ್ರೀಮಿಂಗ್ ಕಂಪೆನಿಯಾದ ನೆಟ್​ಫ್ಲಿಕ್ಸ್ ಒಂದು ದಶಕಕ್ಕೂ ಹೆಚ್ಚು ಅವಧಿಯಲ್ಲಿ ಮೊದಲ ಬಾರಿಗೆ ಚಂದಾದಾರರನ್ನು ಕಳೆದುಕೊಂಡ ನಂತರ ವೆಚ್ಚವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಎರಡನೇ ಸುತ್ತಿನ ಉದ್ಯೋಗ ಕಡಿತದಲ್ಲಿ (Job Cut) 300 ಉದ್ಯೋಗಿಗಳನ್ನು ಅಥವಾ ಅದರ ಸುಮಾರು ಶೇ 4ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ನೆಟ್​ಫ್ಲಿಕ್ಸ್​ ಇಂಕ್​ (Netflix Inc) ಹೇಳಿದೆ. ಈ ಕ್ರಮವು ಹೆಚ್ಚಾಗಿ ಅದರ ಅಮೆರಿಕ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿತು ಮತ್ತು ಕಂಪೆನಿಯು ಕಳೆದ ತಿಂಗಳು 150 ಉದ್ಯೋಗಗಳನ್ನು ಕಡಿತಗೊಳಿಸಿದ ನಂತರ ಈ ನಿರ್ಧಾರ ಬಂದಿತು.

“ನಾವು ವ್ಯವಹಾರದಲ್ಲಿ ಗಣನೀಯವಾಗಿ ಹೂಡಿಕೆ ಮಾಡುವುದನ್ನು ಮುಂದುವರಿಸುತ್ತಿರುವಾಗ ಈ ಹೊಂದಾಣಿಕೆಗಳನ್ನು ಮಾಡಿದ್ದೇವೆ. ಇದರಿಂದ ನಮ್ಮ ನಿಧಾನಗತಿಯ ಆದಾಯದ ಬೆಳವಣಿಗೆಗೆ ಅನುಗುಣವಾಗಿ ನಮ್ಮ ವೆಚ್ಚಗಳು ಬೆಳೆಯುತ್ತಿವೆ,” ಎಂದು ನೆಟ್‌ಫ್ಲಿಕ್ಸ್ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.

ಹಣದುಬ್ಬರ, ಉಕ್ರೇನ್‌ನಲ್ಲಿನ ಯುದ್ಧ ಮತ್ತು ತೀವ್ರ ಪೈಪೋಟಿ ಚಂದಾದಾರರ ಬೆಳವಣಿಗೆ ಮೇಲೆ ತೂಗುತ್ತಿರುವಂತೆ ಇತ್ತೀಚಿನ ತಿಂಗಳಲ್ಲಿ ವಿಶ್ವದ ಪ್ರಬಲ ಸ್ಟ್ರೀಮಿಂಗ್ ಸೇವೆಯು ಒತ್ತಡಕ್ಕೆ ಒಳಗಾಗಿದೆ. ಮೊದಲ ತ್ರೈಮಾಸಿಕದಲ್ಲಿ ಚಂದಾದಾರರ ಕುಸಿತದ ನಂತರ, ನೆಟ್‌ಫ್ಲಿಕ್ಸ್ ಸದ್ಯದ ಅವಧಿಗೆ ಇನ್ನೂ ಹೆಚ್ಚಿನ ನಷ್ಟ ಆಗುವ ಬಗ್ಗೆ ಸೂಚಿಸಿದೆ. ಆ ಇಳಿಕೆಯನ್ನು ತಡೆಯಲು, ಕಂಪೆನಿಯು ಅಗ್ಗದ, ಜಾಹೀರಾತು-ಬೆಂಬಲಿತ ಚಂದಾದಾರಿಕೆ ಶ್ರೇಣಿಯನ್ನು ಪರಿಚಯಿಸಲು ಯೋಜಿಸಿದ್ದು, ಇದಕ್ಕಾಗಿ ಹಲವಾರು ಕಂಪೆನಿಗಳೊಂದಿಗೆ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: Rupek Lay Offs: ರುಪೇಕ್​ನಿಂದ 180ಕ್ಕೂ ಹೆಚ್ಚು ಉದ್ಯೋಗಿಗಳ ವಜಾ; ಸ್ಥೂಲ ಆರ್ಥಿಕತೆಯ ಹೊಡೆತ ಬಿದ್ದ ಮೊದಲ ಫಿನ್​ಟೆಕ್

Published On - 12:43 pm, Fri, 24 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ