AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Netflix: ವೆಚ್ಚ ತಗ್ಗಿಸುವ ಉದ್ದೇಶಕ್ಕೆ ನೆಟ್​ಫ್ಲಿಕ್ಸ್​ನಿಂದ 300 ಉದ್ಯೋಗಿಗಳ ವಜಾ

ಅಮೆರಿಕ ಮೂಲದ ನೆಟ್​ಫ್ಲಿಕ್ಸ್ 300 ಉದ್ಯೋಗಿಗಳನ್ನು ವಜಾ ಮಾಡಲಾಗಿದೆ. ವೆಚ್ಚ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಮಾಡಲಾಗಿದೆ.

Netflix: ವೆಚ್ಚ ತಗ್ಗಿಸುವ ಉದ್ದೇಶಕ್ಕೆ ನೆಟ್​ಫ್ಲಿಕ್ಸ್​ನಿಂದ 300 ಉದ್ಯೋಗಿಗಳ ವಜಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 24, 2022 | 12:43 PM

Share

ಸ್ಟ್ರೀಮಿಂಗ್ ಕಂಪೆನಿಯಾದ ನೆಟ್​ಫ್ಲಿಕ್ಸ್ ಒಂದು ದಶಕಕ್ಕೂ ಹೆಚ್ಚು ಅವಧಿಯಲ್ಲಿ ಮೊದಲ ಬಾರಿಗೆ ಚಂದಾದಾರರನ್ನು ಕಳೆದುಕೊಂಡ ನಂತರ ವೆಚ್ಚವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಎರಡನೇ ಸುತ್ತಿನ ಉದ್ಯೋಗ ಕಡಿತದಲ್ಲಿ (Job Cut) 300 ಉದ್ಯೋಗಿಗಳನ್ನು ಅಥವಾ ಅದರ ಸುಮಾರು ಶೇ 4ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ನೆಟ್​ಫ್ಲಿಕ್ಸ್​ ಇಂಕ್​ (Netflix Inc) ಹೇಳಿದೆ. ಈ ಕ್ರಮವು ಹೆಚ್ಚಾಗಿ ಅದರ ಅಮೆರಿಕ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿತು ಮತ್ತು ಕಂಪೆನಿಯು ಕಳೆದ ತಿಂಗಳು 150 ಉದ್ಯೋಗಗಳನ್ನು ಕಡಿತಗೊಳಿಸಿದ ನಂತರ ಈ ನಿರ್ಧಾರ ಬಂದಿತು.

“ನಾವು ವ್ಯವಹಾರದಲ್ಲಿ ಗಣನೀಯವಾಗಿ ಹೂಡಿಕೆ ಮಾಡುವುದನ್ನು ಮುಂದುವರಿಸುತ್ತಿರುವಾಗ ಈ ಹೊಂದಾಣಿಕೆಗಳನ್ನು ಮಾಡಿದ್ದೇವೆ. ಇದರಿಂದ ನಮ್ಮ ನಿಧಾನಗತಿಯ ಆದಾಯದ ಬೆಳವಣಿಗೆಗೆ ಅನುಗುಣವಾಗಿ ನಮ್ಮ ವೆಚ್ಚಗಳು ಬೆಳೆಯುತ್ತಿವೆ,” ಎಂದು ನೆಟ್‌ಫ್ಲಿಕ್ಸ್ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.

ಹಣದುಬ್ಬರ, ಉಕ್ರೇನ್‌ನಲ್ಲಿನ ಯುದ್ಧ ಮತ್ತು ತೀವ್ರ ಪೈಪೋಟಿ ಚಂದಾದಾರರ ಬೆಳವಣಿಗೆ ಮೇಲೆ ತೂಗುತ್ತಿರುವಂತೆ ಇತ್ತೀಚಿನ ತಿಂಗಳಲ್ಲಿ ವಿಶ್ವದ ಪ್ರಬಲ ಸ್ಟ್ರೀಮಿಂಗ್ ಸೇವೆಯು ಒತ್ತಡಕ್ಕೆ ಒಳಗಾಗಿದೆ. ಮೊದಲ ತ್ರೈಮಾಸಿಕದಲ್ಲಿ ಚಂದಾದಾರರ ಕುಸಿತದ ನಂತರ, ನೆಟ್‌ಫ್ಲಿಕ್ಸ್ ಸದ್ಯದ ಅವಧಿಗೆ ಇನ್ನೂ ಹೆಚ್ಚಿನ ನಷ್ಟ ಆಗುವ ಬಗ್ಗೆ ಸೂಚಿಸಿದೆ. ಆ ಇಳಿಕೆಯನ್ನು ತಡೆಯಲು, ಕಂಪೆನಿಯು ಅಗ್ಗದ, ಜಾಹೀರಾತು-ಬೆಂಬಲಿತ ಚಂದಾದಾರಿಕೆ ಶ್ರೇಣಿಯನ್ನು ಪರಿಚಯಿಸಲು ಯೋಜಿಸಿದ್ದು, ಇದಕ್ಕಾಗಿ ಹಲವಾರು ಕಂಪೆನಿಗಳೊಂದಿಗೆ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: Rupek Lay Offs: ರುಪೇಕ್​ನಿಂದ 180ಕ್ಕೂ ಹೆಚ್ಚು ಉದ್ಯೋಗಿಗಳ ವಜಾ; ಸ್ಥೂಲ ಆರ್ಥಿಕತೆಯ ಹೊಡೆತ ಬಿದ್ದ ಮೊದಲ ಫಿನ್​ಟೆಕ್

Published On - 12:43 pm, Fri, 24 June 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ