AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal Mines: 40 ಹೊಸ ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆ ಆರಂಭಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರದಿಂದ 40 ಹೊಸ ಕಲ್ಲಿದ್ದಲು ಗಣಿ ಹರಾಜು ಆರಂಭ ಮಾಡಲಾಗಿದೆ. ಅಕ್ಟೋಬರ್ 12ರಂದು ಈ ಪ್ರಕ್ರಿಯೆ ಶುರುವಾಗಿದ್ದು, ಹಿಂದಿನ ಬಾಕಿಯೂ ಸೇರಿದಂತೆ 88 ಗಣಿ ಉಳಿದಿದೆ ಎಂದು ತಿಳಿಸಲಾಗಿದೆ

Coal Mines: 40 ಹೊಸ ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆ ಆರಂಭಿಸಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 13, 2021 | 11:06 AM

Share

ಕೇಂದ್ರ ಸರ್ಕಾರವು ಅಕ್ಟೋಬರ್ 12ರಂದು 40 ಹೊಸ ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆಯನ್ನು ಆರಂಭಿಸಿದೆ. ಕಲ್ಲಿದ್ದಲು ಸಚಿವಾಲಯವು 88 ಗಣಿಗಳನ್ನು ನೀಡುವುದಾಗಿ ಹೇಳಿದ್ದು, ಹಿಂದಿನ ಎರಡು ಹಂತಗಳಲ್ಲಿ ಬಾಕಿ ಉಳಿದದ್ದು ಸಹ ಇದರಲ್ಲಿ ಒಳಗೊಂಡಿದೆ. “ಮೊದಲ ಎರಡು ಕಂತುಗಳಲ್ಲಿ 28 ಕಲ್ಲಿದ್ದಲು ಗಣಿಗಳನ್ನು ಯಶಸ್ವಿಯಾಗಿ ಹರಾಜು ಮಾಡಿದ ನಂತರ ಕಲ್ಲಿದ್ದಲು ಸಚಿವಾಲಯವು ಇಂದು 40 ಹೊಸ ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆಯನ್ನು ಆರಂಭಿಸಿದೆ,” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. 88 ಗಣಿಗಳಲ್ಲಿ 55 ಬಿಲಿಯನ್ ಟನ್ ಕಲ್ಲಿದ್ದಲು ಇದೆ ಮತ್ತು – ಜಾರ್ಖಂಡ್, ಛತ್ತೀಸ್​ಗಢ, ಒಡಿಶಾ, ಮಧ್ಯಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ತೆಲಂಗಾಣ, ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ಹೀಗೆ 10 ರಾಜ್ಯಗಳಲ್ಲಿ ಹರಡಿದೆ. ಇವುಗಳಲ್ಲಿ 57 ಸಂಪೂರ್ಣವಾಗಿ ಪರಿಶೋಧಿಸಲ್ಪಟ್ಟ ಗಣಿಗಳು ಮತ್ತು 31 ಭಾಗಶಃ ಪರಿಶೋಧಿಸಿದ ಗಣಿಗಳು. ಮಾರಾಟಕ್ಕೆ 4 ಕೋಕಿಂಗ್ ಕಲ್ಲಿದ್ದಲು ಗಣಿಗಳಿವೆ ಎಂದು ಸಚಿವಾಲಯ ತಿಳಿಸಿದೆ.

ಸಂರಕ್ಷಿತ ಪ್ರದೇಶಗಳು, ವನ್ಯಜೀವಿ ಅಭಯಾರಣ್ಯಗಳು, ನಿರ್ಣಾಯಕ ಆವಾಸಸ್ಥಾನಗಳು, ಶೇಕಡಾ 40ಕ್ಕಿಂತಲೂ ಹೆಚ್ಚಿನ ಅರಣ್ಯ ಪ್ರದೇಶವನ್ನು ಹೊಂದಿರುವ ಗಣಿಗಳು, ಭಾರೀ ಪ್ರಮಾಣದಲ್ಲಿ ನಿರ್ಮಾಣ ಇರುವ ಪ್ರದೇಶ ಇತ್ಯಾದಿಗಳನ್ನು ಹರಾಜಿನಿಂದ ಹೊರತುಪಡಿಸಲಾಗಿದೆ ಎಂದು ಕೇಂದ್ರ ಹೇಳಿದೆ. ವಾಣಿಜ್ಯ ಕಲ್ಲಿದ್ದಲು ಗಣಿ ಹರಾಜಿಗೆ ಕಲ್ಲಿದ್ದಲು ಸಚಿವಾಲಯದ ಏಕೈಕ ವಹಿವಾಟು ಸಲಹೆಗಾರ ಎಸ್‌ಬಿಐ ಕ್ಯಾಪಿಟಲ್ ಮಾರ್ಕೆಟ್ಸ್ ಆಗಿದೆ. “ಈ ಕಂತಿನಿಂದ, ಕಲ್ಲಿದ್ದಲು ಸಚಿವಾಲಯವು (i) ಗಣಿ ಮುಚ್ಚುವಿಕೆ ಸೇರಿದಂತೆ ಸುಸ್ಥಿರವಾದ ಗಣಿಗಾರಿಕೆ ಕಾರ್ಯಾಚರಣೆಗೆ ಸಂಬಂಧಿಸಿದ ಒಪ್ಪಂದದಲ್ಲಿ ನಿಬಂಧನೆಗಳನ್ನು ಪರಿಚಯಿಸಿದೆ; (ii) ಕಲ್ಲಿದ್ದಲನ್ನು ಯಾಂತ್ರಿಕವಾಗಿ ಸ್ಥಳಾಂತರಿಸುವುದು; (iii) ಕಷ್ಟದ ಗಣಿಗಾರಿಕೆ ಸನ್ನಿವೇಶಗಳಲ್ಲಿ ಕಲ್ಲಿದ್ದಲು ಗಣಿಯನ್ನು ಯಶಸ್ವಿ ಬಿಡ್ಡರ್ ಹಿಂತಿರುಗಿಸುವುದಕ್ಕೆ ಅವಕಾಶ ನೀಡಲಾಗಿದೆ,” ಎಂದು ಕೇಂದ್ರ ಹೇಳಿದೆ.

ಹರಾಜು ಪ್ರಕ್ರಿಯೆಯ ಪ್ರಮುಖ ಲಕ್ಷಣಗಳೆಂದರೆ ರಾಷ್ಟ್ರೀಯ ಕಲ್ಲಿದ್ದಲು ಸೂಚ್ಯಂಕದ ಪರಿಚಯ (National Coal Index). ಮೊದಲಿನ ಕಲ್ಲಿದ್ದಲು ಗಣಿಗಾರಿಕೆ ಅನುಭವಕ್ಕೆ ಯಾವುದೇ ನಿರ್ಬಂಧವಿಲ್ಲದೆ ಭಾಗವಹಿಸುವಿಕೆ ಸುಲಭ ಮಾಡುವುದು, ಕಲ್ಲಿದ್ದಲು ಬಳಕೆ ಸಂಪೂರ್ಣ ಸಲೀಸುಗೊಳಿಸುವುದು, ಅತ್ಯುತ್ತಮ ಪಾವತಿ ರಚನೆ, ಆರಂಭಿಕ ಉತ್ಪಾದನೆಗೆ ಪ್ರೋತ್ಸಾಹದ ಮೂಲಕ ದಕ್ಷತೆ ಉತ್ತೇಜನ ಮತ್ತು ಶುದ್ಧ ಕಲ್ಲಿದ್ದಲು ತಂತ್ರಜ್ಞಾನದ ಬಳಕೆ. ಸುಸ್ಥಿರತೆ ಮೇಲೆ ಕೇಂದ್ರೀಕರಿಸಿ, ಹೆಚ್ಚಿನ ಉತ್ತೇಜನವನ್ನು ಪರಿಗಣಿಸಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: National Monetisation Pipeline: ರಾಷ್ಟ್ರೀಯ ನಗದೀಕರಣ ಪೈಪ್​ಲೈನ್ ಏನಿದು? ಆ 6 ಲಕ್ಷ ಕೋಟಿ ರೂ. ಬಗ್ಗೆ ಇಲ್ಲಿದೆ ಮಾಹಿತಿ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ