AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಂಡಿಯಾ ಸಹಕಾರಿ ಬ್ಯಾಂಕ್​ನ ನಿರ್ದೇಶಕರ ಮಂಡಳಿ ಸೂಪರ್​ಸೀಡ್ ಮಾಡಿದ ಆರ್​​ಬಿಐ

RBI supersedes board of New India Co-operative bank for 12 months: ಮುಂಬೈ ಮೂಲದ ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್​ನ ನಿರ್ದೇಶಕರ ಮಂಡಳಿಯನ್ನು ಆರ್​ಬಿಐ 12 ತಿಂಗಳ ಕಾಲ ಸೂಪರ್​ಸೀಡ್ ಮಾಡಿದೆ. ಎಸ್​ಬಿಐನ ಮಾಜಿ ಜನರಲ್ ಮ್ಯಾನೇಜರ್ ಶ್ರೀಕಾಂತ್ ಅವರನ್ನು ಈ ಸಹಕಾರಿ ಬ್ಯಾಂಕ್​ನ ಆಡಳಿತ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ. ಕಳೆದ ಕೆಲ ವರ್ಷಗಳಿಂದ ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್ ಹಣಕಾಸು ಸಂಕಷ್ಟದಲ್ಲಿರುವ ಕಾರಣದಿಂದ ಆರ್​ಬಿಐ ಈ ಕ್ರಮ ತೆಗೆದುಕೊಂಡಿದೆ.

ನ್ಯೂ ಇಂಡಿಯಾ ಸಹಕಾರಿ ಬ್ಯಾಂಕ್​ನ ನಿರ್ದೇಶಕರ ಮಂಡಳಿ ಸೂಪರ್​ಸೀಡ್ ಮಾಡಿದ ಆರ್​​ಬಿಐ
ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 14, 2025 | 6:50 PM

Share

ಮುಂಬೈ, ಫೆಬ್ರುವರಿ 14: ಕಳಪೆ ಆಡಳಿತ ನಿರ್ವಹಣೆ ಕಾರಣದಿಂದ ಮುಂಬೈ ಮೂಲದ ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ನಿನ್ನೆ ನಿರ್ಬಂಧಗಳನ್ನು ಹೇರಿದ್ದ ಆರ್​ಬಿಐ ಇವತ್ತು, ಆ ಸಹಕಾರಿ ಬ್ಯಾಂಕ್​ನ ನಿರ್ದೇಶಕರ ಮಂಡಳಿಯನ್ನು ಸೂಪರ್​ಸೀಡ್ ಮಾಡಿದೆ. ಆ ಮಂಡಳಿಯನ್ನು 12 ತಿಂಗಳ ಕಾಲ ವಜಾಗೊಳಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಜನರಲ್ ಮ್ಯಾನೇಜರ್ ಆದ ಶ್ರೀಕಾಂತ್ ಎಂಬುವರಿಗೆ ನ್ಯೂ ಇಂಡಿಯಾ ಸಹಕಾರಿ ಬ್ಯಾಂಕ್​ನ ಆಡಳಿತ ಚುಕ್ಕಾಣಿ ನೀಡಿದೆ.

ಶ್ರೀಕಾಂತ ಅವರು ಮುಂಬೈ ಮೂಲದ ಈ ಸಹಕಾರಿ ಬ್ಯಾಂಕ್​ನ ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲು ಮುಖ್ಯ ಆಡಳಿತಗಾರರಾಗಿರುತ್ತಾರೆ. ಎಸ್​ಬಿಐನ ಮತ್ತೊಬ್ಬ ಮಾಜಿ ಜನರಲ್ ಮ್ಯಾನೇಜರ್ ರವೀಂದ್ರ ಸಪ್ರ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಆದ ಅಭಿಜೀತ್ ದೇಶಮುಖ್ ಅವರುಗಳು ಶ್ರೀಕಾಂತ್​ಗೆ ಈ ಆಡಳಿತ ನಿರ್ವಹಣೆಯಲ್ಲಿ ಸಹಾಯಕರಾಗಿರುತ್ತಾರೆ.

ಬ್ಯಾಂಕ್​ನ ಪರಿಸ್ಥಿತಿ ಸ್ಥಿರ ಮಟ್ಟಕ್ಕೆ ಬರುವವರೆಗೂ ಈ ವ್ಯವಸ್ಥೆ ಮುಂದುವರಿಯುವ ನಿರೀಕ್ಷೆ ಇದೆ.

ಇದನ್ನೂ ಓದಿ: ಸತತ 8ನೇ ದಿನ ಸೆನ್ಸೆಕ್ಸ್, ನಿಫ್ಟಿಗೆ ಕೆಂಪು ಬಣ್ಣ; ಎರಡು ವರ್ಷದಲ್ಲಿ ಇದೇ ಅತಿದೊಡ್ಡ ಹಿನ್ನಡೆ

ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್ ಮೇಲೆ ಆರ್​ಬಿಐ ನಿರ್ಬಂಧ ಯಾಕೆ?

ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್ ಇತ್ತೀಚಿನ ವರ್ಷಗಳಲ್ಲಿ ಹಣಕಾಸು ಸಂಕಷ್ಟಕ್ಕೆ ಸಿಲುಕಿದೆ. 2023-24ರ ಹಣಕಾಸು ವರ್ಷದಲ್ಲಿ 22.78 ಕೋಟಿ ರೂ ನಷ್ಟವಾಗಿದೆ ಎಂದು ಈ ಬ್ಯಾಂಕ್​ನ ವಾರ್ಷಿಕ ವರದಿಯಲ್ಲಿ ತಿಳಿಸಲಾಗಿದೆ. ಹಿಂದಿನ ಹಣಕಾಸು ವರ್ಷದಲ್ಲೂ 30.75 ಕೋಟಿ ರೂ ನಷ್ಟವಾಗಿದೆ ಎಂದು ಹೇಳಿತ್ತು.

ಯಾವುದೇ ಸಹಕಾರಿ ಬ್ಯಾಂಕು ಈ ರೀತಿ ಸಂಕಷ್ಟಕ್ಕೆ ಸಿಲುಕಿದಾಗ ಆರ್​ಬಿಐ ಮಧ್ಯಪ್ರವೇಶಿಸಿ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತದೆ. ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್ ವಿಚಾರದಲ್ಲೂ ಆರ್​ಬಿಐ ಮಧ್ಯಪ್ರವೇಶಿಸಿ ನಿನ್ನೆ ನಿರ್ಬಂಧಗಳನ್ನು ವಿಧಿಸಿತ್ತು.

ಯಾವುದೇ ಹೊಸ ಸಾಲಗಳನ್ನು ಮಾಡಬಾರದು. ಹೊಸ ಹೂಡಿಕೆಗಳನ್ನು ಮಾಡುವಂತಿಲ್ಲ. ಹೊಸ ಠೇವಣಿಗಳನ್ನು ಸಂಗ್ರಹಿಸುವಂತಿಲ್ಲ. ಯಾವುದೇ ಆಸ್ತಿಯನ್ನು ಆರ್​ಬಿಐ ಅನುಮೋದನೆ ಇಲ್ಲದೇ ಮಾರುವಂತಿಲ್ಲ ಎಂಬಿತ್ಯಾದಿ ನಿರ್ಬಂಧಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಮಾಡಿತು. ಬ್ಯಾಂಕ್ ಗ್ರಾಹಕರೂ ಕೂಡ ಹಣ ವಿತ್​ಡ್ರಾ ಮಾಡದಂತೆ ನಿರ್ಬಂಧ ಹಾಕಲಾಯಿತು.

ಇದನ್ನೂ ಓದಿ: ಇನ್ಫೋಸಿಸ್ ಲೇಆಫ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕಕ್ಕೆ ಕೇಂದ್ರದಿಂದ ಮಹತ್ವದ ಸೂಚನೆ

ಇವತ್ತು ಬ್ಯಾಂಕ್ ಆಡಳಿತವನ್ನು ಸೂಪರ್​ಸೀಡ್ ಮಾಡಿದೆ. 12 ತಿಂಗಳವರೆಗೆ ಇದೇ ಪರಿಸ್ಥಿತಿ ಇರಲಿದೆ. ಎಸ್​ಬಿಐನ ಜನರಲ್ ಮ್ಯಾನೇಜರ್ ನೇತೃತ್ವದಲ್ಲಿ ಬ್ಯಾಂಕ್​ನ ಎಲ್ಲಾ ಹಣಕಾಸು ವ್ಯವಹಾರಗಳ ಆಡಿಟ್ ನಡೆಯಲಿದ್ದು, ಬ್ಯಾಂಕ್​ನ ಹಣಕಾಸು ಪರಿಸ್ಥಿತಿ ಸುಧಾರಣೆಗೆ ಪ್ರಯತ್ನಿಸಲಾಗುತ್ತದೆ. ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್ ಮುಂಬೈ, ನವಿ ಮುಂಬೈ, ಥಾಣೆ, ಪಾಲಗಡ್, ಪುಣೆ ಮತ್ತು ಗುಜರಾತ್​ನ ಸೂರತ್ ನಗರಗಳಲ್ಲಿ ಶಾಖೆಗಳನ್ನು ಹೊಂದಿದೆ. ಆದರೆ, ಮುಂಬೈನಲ್ಲಿ ಅತಿಹೆಚ್ಚು ಶಾಖೆಗಳಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ