AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF Withdrawal: ಗಮನಿಸಿ; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ಆಗಿದೆ ಬದಲಾವಣೆ

New PF withdrawal rule; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ತುಸು ಬದಲಾವಣೆ ಮಾಡಲಾಗಿದ್ದು, ಆ ಕುರಿತ ವಿವರ ಇಲ್ಲಿದೆ.

PF Withdrawal: ಗಮನಿಸಿ; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ಆಗಿದೆ ಬದಲಾವಣೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 04, 2023 | 4:04 PM

Share

ನವದೆಹಲಿ: ಪ್ಯಾನ್ ಕಾರ್ಡ್ (PAN Card) ಹೊಂದಿಲ್ಲದವರ ಇಪಿಎಪ್​ಗೆ ಟಿಡಿಎಸ್​​ (TDS) ಕಡಿತ ಮಾಡುವ ಪ್ರಮಾಣವನ್ನು ಶೇ 30ರಿಂದ 20ಕ್ಕೆ ಇಳಿಕೆ ಮಾಡಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದಾರೆ. ಆದಾಗ್ಯೂ, ಈ ವಿಚಾರಕ್ಕೆ ಸಂಬಂಧಿಸಿ ಇತರ ಆದಾಯ ತೆರಿಗೆ ನಿಯಮಗಳು ಈಗಿರುವ ಹಾಗೆಯೇ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಆದಾಯ ತೆರಿಗೆ ನಿಯಮದ ಪ್ರಕಾರ, 5 ವರ್ಷಗಳ ಅವಧಿಗೆ ಮುನ್ನ ಇಪಿಎಫ್​ ವಿತ್​ಡ್ರಾ ಮಾಡುವುದಾದರೆ ಒಟ್ಟು ಮೊತ್ತಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ವರ್ಷಕ್ಕೆ 2.5 ಲಕ್ಷ ರೂ.ಗಿಂತ ಹೆಚ್ಚು ಪಿಎಫ್​​ಗೆ ಜಮೆ ಮಾಡುವುದೂ ತೆರಿಗೆ ವ್ಯಾಪ್ತಿಗೆ ಬರುತ್ತದೆ.

ಪಿಎಫ್ ಅಥವಾ ಇಪಿಎಫ್​ ಖಾತೆಯಿಂದ ಐದು ವರ್ಷ ಅವಧಿಗೂ ಮುನ್ನ ವಿತ್​ಡ್ರಾ ಮಾಡುವುದು ತೆರಿಗೆ ವ್ಯಾಪ್ತಿಗೆ ಬರುತ್ತದೆ. ಪಿಎಫ್​ ಖಾತೆದಾರ ಪ್ಯಾನ್ ಕಾರ್ಡ್ ಹೊಂದಿದ್ದಲ್ಲಿ ಟಿಡಿಎಸ್ ಕಡಿತವಾಗುವುದಿಲ್ಲ. ಇಲ್ಲದಿದ್ದರೆ ಪಿಎಫ್​ ವಿತ್​ಡ್ರಾವಲ್ ಮೊತ್ತವು ಪಿಎಫ್​ ಚಂದಾದಾರನ ಆ ವರ್ಷದ ತೆರಿಗೆ ವ್ಯಾಪ್ತಿಯ ಆದಾಯಕ್ಕೆ ಸೇರುತ್ತದೆ ಎಂದು ಮುಂಬೈ ಮೂಲದ ತೆರಿಗೆ ತಜ್ಞ ಬಲ್ವಂತ್ ಜೈನ್ ಹೇಳಿರುವುದಾಗಿ ‘ಲೈವ್ ಮಿಂಟ್​​ ಡಾಟ್​​ಕಾಂ’ ವರದಿ ಮಾಡಿದೆ.

ಇದನ್ನೂ ಓದಿ: Income Tax Slabs: ಆದಾಯ ತೆರಿಗೆ ಸ್ಲ್ಯಾಬ್​ ಬದಲಾವಣೆ; ಗೊಂದಲವಿದೆಯಾ? ಇಲ್ಲಿದೆ ಹಳೆದು, ಹೊಸದರ ನಡುವಣ ಪೂರ್ಣ ವ್ಯತ್ಯಾಸ

‘ಪಿಎಫ್​ ಖಾತೆ ಜತೆ ಪ್ಯಾನ್ ಅನ್ನು ಸಂಯೋಜಿಸಿರದಿದ್ದರೆ ಪಿಎಫ್​ ಖಾತೆಯ ನಿವ್ವಳ ಮೊತ್ತದಿಂದ ಪಿಎಫ್​ ಕಡಿತವಾಗಬಹುದು. ಸದ್ಯ ಟಿಡಿಎಸ್​ ಪ್ರಮಾಣ ಶೇ 30ರಷ್ಟಿದ್ದು, 2023ರ ಏಪ್ರಿಲ್ 1ರಿಂದ ಶೇ 20ಕ್ಕೆ ಇಳಿಕೆಯಾಗಲಿದೆ’ ಎಂದು ಬಲ್ವಂತ್ ಜೈನ್ ತಿಳಿಸಿದ್ದಾರೆ.

ಆದಾಯ ತೆರಿಗೆ ನಿಯಮಕ್ಕೆ ಬಜೆಟ್​ನಲ್ಲಿ ಮಹತ್ವದ ಪರಿಷ್ಕರಣೆ ಮಾಡಲಾಗಿದ್ದು, ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಲಾಗಿದೆ. ಹೊಸ ತೆರಿಗೆ ಪದ್ಧತಿಯಡಿ ಈ ಘೋಷಣೆ ಮಾಡಲಾಗಿದ್ದು, ಇದುವೇ ಡಿಫಾಲ್ಟ್ ತೆರಿಗೆ ಪದ್ಧತಿಯಾಗಿರಲಿದೆ ಎಂದೂ ಹಣಕಾಸು ಸಚಿವರು ತಿಳಿಸಿದ್ದಾರೆ. ಹಳೆಯ ತೆರಿಗೆ ಪದ್ಧತಿಯೂ ಅಸ್ತಿತ್ವದಲ್ಲಿರಲಿದ್ದು, 3 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ, ಈ ತೆರಿಗೆ ವಿಧಾನದಲ್ಲಿ ಆದಾಯ ತೆರಿಗೆಯ ವಿವಿಧ ಸೆಕ್ಷನ್​​ಗಳ ಅಡಿಯಲ್ಲಿ ತೆರಿಗೆ ವಿನಾಯಿತಿ ಪಡೆಯಲು ಅವಕಾಶವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ