AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF Withdrawal: ಗಮನಿಸಿ; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ಆಗಿದೆ ಬದಲಾವಣೆ

New PF withdrawal rule; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ತುಸು ಬದಲಾವಣೆ ಮಾಡಲಾಗಿದ್ದು, ಆ ಕುರಿತ ವಿವರ ಇಲ್ಲಿದೆ.

PF Withdrawal: ಗಮನಿಸಿ; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ಆಗಿದೆ ಬದಲಾವಣೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Feb 04, 2023 | 4:04 PM

Share

ನವದೆಹಲಿ: ಪ್ಯಾನ್ ಕಾರ್ಡ್ (PAN Card) ಹೊಂದಿಲ್ಲದವರ ಇಪಿಎಪ್​ಗೆ ಟಿಡಿಎಸ್​​ (TDS) ಕಡಿತ ಮಾಡುವ ಪ್ರಮಾಣವನ್ನು ಶೇ 30ರಿಂದ 20ಕ್ಕೆ ಇಳಿಕೆ ಮಾಡಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದಾರೆ. ಆದಾಗ್ಯೂ, ಈ ವಿಚಾರಕ್ಕೆ ಸಂಬಂಧಿಸಿ ಇತರ ಆದಾಯ ತೆರಿಗೆ ನಿಯಮಗಳು ಈಗಿರುವ ಹಾಗೆಯೇ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಆದಾಯ ತೆರಿಗೆ ನಿಯಮದ ಪ್ರಕಾರ, 5 ವರ್ಷಗಳ ಅವಧಿಗೆ ಮುನ್ನ ಇಪಿಎಫ್​ ವಿತ್​ಡ್ರಾ ಮಾಡುವುದಾದರೆ ಒಟ್ಟು ಮೊತ್ತಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ವರ್ಷಕ್ಕೆ 2.5 ಲಕ್ಷ ರೂ.ಗಿಂತ ಹೆಚ್ಚು ಪಿಎಫ್​​ಗೆ ಜಮೆ ಮಾಡುವುದೂ ತೆರಿಗೆ ವ್ಯಾಪ್ತಿಗೆ ಬರುತ್ತದೆ.

ಪಿಎಫ್ ಅಥವಾ ಇಪಿಎಫ್​ ಖಾತೆಯಿಂದ ಐದು ವರ್ಷ ಅವಧಿಗೂ ಮುನ್ನ ವಿತ್​ಡ್ರಾ ಮಾಡುವುದು ತೆರಿಗೆ ವ್ಯಾಪ್ತಿಗೆ ಬರುತ್ತದೆ. ಪಿಎಫ್​ ಖಾತೆದಾರ ಪ್ಯಾನ್ ಕಾರ್ಡ್ ಹೊಂದಿದ್ದಲ್ಲಿ ಟಿಡಿಎಸ್ ಕಡಿತವಾಗುವುದಿಲ್ಲ. ಇಲ್ಲದಿದ್ದರೆ ಪಿಎಫ್​ ವಿತ್​ಡ್ರಾವಲ್ ಮೊತ್ತವು ಪಿಎಫ್​ ಚಂದಾದಾರನ ಆ ವರ್ಷದ ತೆರಿಗೆ ವ್ಯಾಪ್ತಿಯ ಆದಾಯಕ್ಕೆ ಸೇರುತ್ತದೆ ಎಂದು ಮುಂಬೈ ಮೂಲದ ತೆರಿಗೆ ತಜ್ಞ ಬಲ್ವಂತ್ ಜೈನ್ ಹೇಳಿರುವುದಾಗಿ ‘ಲೈವ್ ಮಿಂಟ್​​ ಡಾಟ್​​ಕಾಂ’ ವರದಿ ಮಾಡಿದೆ.

ಇದನ್ನೂ ಓದಿ: Income Tax Slabs: ಆದಾಯ ತೆರಿಗೆ ಸ್ಲ್ಯಾಬ್​ ಬದಲಾವಣೆ; ಗೊಂದಲವಿದೆಯಾ? ಇಲ್ಲಿದೆ ಹಳೆದು, ಹೊಸದರ ನಡುವಣ ಪೂರ್ಣ ವ್ಯತ್ಯಾಸ

‘ಪಿಎಫ್​ ಖಾತೆ ಜತೆ ಪ್ಯಾನ್ ಅನ್ನು ಸಂಯೋಜಿಸಿರದಿದ್ದರೆ ಪಿಎಫ್​ ಖಾತೆಯ ನಿವ್ವಳ ಮೊತ್ತದಿಂದ ಪಿಎಫ್​ ಕಡಿತವಾಗಬಹುದು. ಸದ್ಯ ಟಿಡಿಎಸ್​ ಪ್ರಮಾಣ ಶೇ 30ರಷ್ಟಿದ್ದು, 2023ರ ಏಪ್ರಿಲ್ 1ರಿಂದ ಶೇ 20ಕ್ಕೆ ಇಳಿಕೆಯಾಗಲಿದೆ’ ಎಂದು ಬಲ್ವಂತ್ ಜೈನ್ ತಿಳಿಸಿದ್ದಾರೆ.

ಆದಾಯ ತೆರಿಗೆ ನಿಯಮಕ್ಕೆ ಬಜೆಟ್​ನಲ್ಲಿ ಮಹತ್ವದ ಪರಿಷ್ಕರಣೆ ಮಾಡಲಾಗಿದ್ದು, ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಲಾಗಿದೆ. ಹೊಸ ತೆರಿಗೆ ಪದ್ಧತಿಯಡಿ ಈ ಘೋಷಣೆ ಮಾಡಲಾಗಿದ್ದು, ಇದುವೇ ಡಿಫಾಲ್ಟ್ ತೆರಿಗೆ ಪದ್ಧತಿಯಾಗಿರಲಿದೆ ಎಂದೂ ಹಣಕಾಸು ಸಚಿವರು ತಿಳಿಸಿದ್ದಾರೆ. ಹಳೆಯ ತೆರಿಗೆ ಪದ್ಧತಿಯೂ ಅಸ್ತಿತ್ವದಲ್ಲಿರಲಿದ್ದು, 3 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ, ಈ ತೆರಿಗೆ ವಿಧಾನದಲ್ಲಿ ಆದಾಯ ತೆರಿಗೆಯ ವಿವಿಧ ಸೆಕ್ಷನ್​​ಗಳ ಅಡಿಯಲ್ಲಿ ತೆರಿಗೆ ವಿನಾಯಿತಿ ಪಡೆಯಲು ಅವಕಾಶವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ