Sign In

By signing in or creating an account, you agree with Associated Broadcasting Company's Terms & Conditions and Privacy Policy.

PF Withdrawal: ಗಮನಿಸಿ; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ಆಗಿದೆ ಬದಲಾವಣೆ

New PF withdrawal rule; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ತುಸು ಬದಲಾವಣೆ ಮಾಡಲಾಗಿದ್ದು, ಆ ಕುರಿತ ವಿವರ ಇಲ್ಲಿದೆ.

PF Withdrawal: ಗಮನಿಸಿ; ಪಿಎಫ್​​ ವಿತ್​​ಡ್ರಾ ನಿಯಮದಲ್ಲಿ ಆಗಿದೆ ಬದಲಾವಣೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Feb 04, 2023 | 4:04 PM

ನವದೆಹಲಿ: ಪ್ಯಾನ್ ಕಾರ್ಡ್ (PAN Card) ಹೊಂದಿಲ್ಲದವರ ಇಪಿಎಪ್​ಗೆ ಟಿಡಿಎಸ್​​ (TDS) ಕಡಿತ ಮಾಡುವ ಪ್ರಮಾಣವನ್ನು ಶೇ 30ರಿಂದ 20ಕ್ಕೆ ಇಳಿಕೆ ಮಾಡಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದಾರೆ. ಆದಾಗ್ಯೂ, ಈ ವಿಚಾರಕ್ಕೆ ಸಂಬಂಧಿಸಿ ಇತರ ಆದಾಯ ತೆರಿಗೆ ನಿಯಮಗಳು ಈಗಿರುವ ಹಾಗೆಯೇ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಆದಾಯ ತೆರಿಗೆ ನಿಯಮದ ಪ್ರಕಾರ, 5 ವರ್ಷಗಳ ಅವಧಿಗೆ ಮುನ್ನ ಇಪಿಎಫ್​ ವಿತ್​ಡ್ರಾ ಮಾಡುವುದಾದರೆ ಒಟ್ಟು ಮೊತ್ತಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ವರ್ಷಕ್ಕೆ 2.5 ಲಕ್ಷ ರೂ.ಗಿಂತ ಹೆಚ್ಚು ಪಿಎಫ್​​ಗೆ ಜಮೆ ಮಾಡುವುದೂ ತೆರಿಗೆ ವ್ಯಾಪ್ತಿಗೆ ಬರುತ್ತದೆ.

ಪಿಎಫ್ ಅಥವಾ ಇಪಿಎಫ್​ ಖಾತೆಯಿಂದ ಐದು ವರ್ಷ ಅವಧಿಗೂ ಮುನ್ನ ವಿತ್​ಡ್ರಾ ಮಾಡುವುದು ತೆರಿಗೆ ವ್ಯಾಪ್ತಿಗೆ ಬರುತ್ತದೆ. ಪಿಎಫ್​ ಖಾತೆದಾರ ಪ್ಯಾನ್ ಕಾರ್ಡ್ ಹೊಂದಿದ್ದಲ್ಲಿ ಟಿಡಿಎಸ್ ಕಡಿತವಾಗುವುದಿಲ್ಲ. ಇಲ್ಲದಿದ್ದರೆ ಪಿಎಫ್​ ವಿತ್​ಡ್ರಾವಲ್ ಮೊತ್ತವು ಪಿಎಫ್​ ಚಂದಾದಾರನ ಆ ವರ್ಷದ ತೆರಿಗೆ ವ್ಯಾಪ್ತಿಯ ಆದಾಯಕ್ಕೆ ಸೇರುತ್ತದೆ ಎಂದು ಮುಂಬೈ ಮೂಲದ ತೆರಿಗೆ ತಜ್ಞ ಬಲ್ವಂತ್ ಜೈನ್ ಹೇಳಿರುವುದಾಗಿ ‘ಲೈವ್ ಮಿಂಟ್​​ ಡಾಟ್​​ಕಾಂ’ ವರದಿ ಮಾಡಿದೆ.

ಇದನ್ನೂ ಓದಿ: Income Tax Slabs: ಆದಾಯ ತೆರಿಗೆ ಸ್ಲ್ಯಾಬ್​ ಬದಲಾವಣೆ; ಗೊಂದಲವಿದೆಯಾ? ಇಲ್ಲಿದೆ ಹಳೆದು, ಹೊಸದರ ನಡುವಣ ಪೂರ್ಣ ವ್ಯತ್ಯಾಸ

‘ಪಿಎಫ್​ ಖಾತೆ ಜತೆ ಪ್ಯಾನ್ ಅನ್ನು ಸಂಯೋಜಿಸಿರದಿದ್ದರೆ ಪಿಎಫ್​ ಖಾತೆಯ ನಿವ್ವಳ ಮೊತ್ತದಿಂದ ಪಿಎಫ್​ ಕಡಿತವಾಗಬಹುದು. ಸದ್ಯ ಟಿಡಿಎಸ್​ ಪ್ರಮಾಣ ಶೇ 30ರಷ್ಟಿದ್ದು, 2023ರ ಏಪ್ರಿಲ್ 1ರಿಂದ ಶೇ 20ಕ್ಕೆ ಇಳಿಕೆಯಾಗಲಿದೆ’ ಎಂದು ಬಲ್ವಂತ್ ಜೈನ್ ತಿಳಿಸಿದ್ದಾರೆ.

ಆದಾಯ ತೆರಿಗೆ ನಿಯಮಕ್ಕೆ ಬಜೆಟ್​ನಲ್ಲಿ ಮಹತ್ವದ ಪರಿಷ್ಕರಣೆ ಮಾಡಲಾಗಿದ್ದು, ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಲಾಗಿದೆ. ಹೊಸ ತೆರಿಗೆ ಪದ್ಧತಿಯಡಿ ಈ ಘೋಷಣೆ ಮಾಡಲಾಗಿದ್ದು, ಇದುವೇ ಡಿಫಾಲ್ಟ್ ತೆರಿಗೆ ಪದ್ಧತಿಯಾಗಿರಲಿದೆ ಎಂದೂ ಹಣಕಾಸು ಸಚಿವರು ತಿಳಿಸಿದ್ದಾರೆ. ಹಳೆಯ ತೆರಿಗೆ ಪದ್ಧತಿಯೂ ಅಸ್ತಿತ್ವದಲ್ಲಿರಲಿದ್ದು, 3 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ, ಈ ತೆರಿಗೆ ವಿಧಾನದಲ್ಲಿ ಆದಾಯ ತೆರಿಗೆಯ ವಿವಿಧ ಸೆಕ್ಷನ್​​ಗಳ ಅಡಿಯಲ್ಲಿ ತೆರಿಗೆ ವಿನಾಯಿತಿ ಪಡೆಯಲು ಅವಕಾಶವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು