AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನಿಯಲ್ಲಿ ನ್ಯೂಸ್9 ಗ್ಲೋಬಲ್ ಸಮಿಟ್; ಭಾರತ-ಜರ್ಮನಿ ಸಂಬಂಧ ಗಟ್ಟಿಗೊಳಿಸಲು ಯೋಜನೆ; ಪ್ರಧಾನಿ ಮೋದಿಯೂ ಭಾಗಿ

News9 Global Summit 2024: ಟಿವಿ9 ನೆಟ್ವರ್ಕ್ ವತಿಯಿಂದ ನ್ಯೂಸ್9 ಜಾಗತಿಕ ಶೃಂಗಸಭೆ ಜರ್ಮನಿಯಲ್ಲಿ ನಡೆಯುತ್ತಿದೆ. ಭಾರತ ಮತ್ತು ಜರ್ಮನಿಯ ಸಂಬಂಧಗಳನ್ನು ವಿವಿಧ ಸ್ತರಗಳಲ್ಲಿ ಗಟ್ಟಿಗೊಳಿಸಲು ಪೂರಕವಾಗಿ ಈ ಸಮಿಟ್ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂದ್ಯಾ ಮೊದಲಾದವರು ಈ ಸಮಿಟ್​ನಲ್ಲಿ ಭಾಷಣ ಮಾಡಲಿದ್ದಾರೆ.

ಜರ್ಮನಿಯಲ್ಲಿ ನ್ಯೂಸ್9 ಗ್ಲೋಬಲ್ ಸಮಿಟ್; ಭಾರತ-ಜರ್ಮನಿ ಸಂಬಂಧ ಗಟ್ಟಿಗೊಳಿಸಲು ಯೋಜನೆ; ಪ್ರಧಾನಿ ಮೋದಿಯೂ ಭಾಗಿ
ನ್ಯೂಸ್9 ಗ್ಲೋಬಲ್ ಸಮಿಟ್
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Nov 20, 2024 | 6:20 PM

Share

ಸ್ಟುಟ್​ಗಾರ್ಟ್, ಜರ್ಮನಿ, ನವೆಂಬರ್ 11: ಟಿವಿ9 ನೆಟ್ವರ್ಕ್ ವತಿಯಿಂದ ನ್ಯೂಸ್9 ಜಾಗತಿಕ ಶೃಂಗಸಭೆ ಜರ್ಮನಿಯಲ್ಲಿ ನಡೆಯಲಿದೆ. ಭಾರತ ಮತ್ತು ಜರ್ಮನಿಯ ಸಂಬಂಧಗಳನ್ನು ವಿವಿಧ ಸ್ತರಗಳಲ್ಲಿ ಗಟ್ಟಿಗೊಳಿಸಲು ಪೂರಕವಾಗಿ ಈ ಸಮಿಟ್ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂದ್ಯಾ ಮೊದಲಾದವರು ಈ ಸಮಿಟ್​ನಲ್ಲಿ ಭಾಷಣ ಮಾಡಲಿದ್ದಾರೆ. ಜರ್ಮನಿಯ ಅತ್ಯುನ್ನತ ಫುಟ್ಬಾಲ್ ಟೂರ್ನಿಯಾದ ಬುಂಡೆಸ್​ಲಿಗಾದ ಫುಟ್ಬಾಲ್ ಕ್ಲಬ್ ಆದ ವಿಎಫ್​ಬಿ ಸ್ಟುಟ್​ಗಾರ್ಟ್ ಈ ಕಾರ್ಯಕ್ರಮದ ಸಹ-ಆಯೋಜಕವಾಗಿದೆ. ಜರ್ಮನಿಯ ಬೇಡನ್ ವರ್ಟನ್​ಬರ್ಗ್ ರಾಜ್ಯವೂ ಈ ಕಾರ್ಯಕ್ರಮಕ್ಕೆ ಬೆಂಬಲ ನೀಡಿದೆ.

ಟಿವಿ9 ನೆಟ್ವರ್ಕ್ ಎಂಡಿ ಬರುಣ್ ದಾಸ್, ನ್ಯೂಸ್9 ಎಕ್ಸಿಕ್ಯೂಟಿವ್ ಎಡಿಟರ್ ಕಾರ್ತಿಕ್ ಮಲ್ಹೋತ್ರಾ, ವಿಎಫ್​ಬಿ ಸ್ಟುಟ್​ಗಾರ್ಟ್ ಮುಖ್ಯ ಸೇಲ್ಸ್ ಆಫೀಸರ್ ರೋವನ್ ಕ್ಯಾಸ್ಪರ್ (Rauven Kasper), ಎಎಂ ಗ್ರೀನ್ ಅಮೋನಿಯಾ ಸಂಸ್ಥೆಯ ಸಿಇಒ ಗೌತಮ್ ರೆಡ್ಡಿ ಮೊದಲಾದವರು ಈ ಕಾರ್ಯಕ್ರಮದ ಕರ್ಟನ್ ರೈಸರ್​ನಲ್ಲಿ ಪಾಲ್ಗೊಂಡಿದ್ದರು.

ನವೆಂಬರ್ 21ರಿಂದ 23ರವರೆಗೂ ಈ ನ್ಯೂಸ್9 ಗ್ಲೋಬಲ್ ಸಮಿಟ್ ಜರ್ಮನಿಯ ಸ್ಟುಟ್​ಗಾರ್ಟ್ ನಗರದಲ್ಲಿ ನಡೆಯಲಿದೆ. ಮೂರು ದಿನಗಳ ಕಾಲ ಎರಡೂ ದೇಶಗಳ ವಿವಿಧ ಕ್ಷೇತ್ರಗಳ ಪರಿಣಿತರು ಪಾಲ್ಗೊಂಡು ಚರ್ಚಿಸಲಿದ್ದಾರೆ.

ಭಾರತ ಮತ್ತು ಜರ್ಮನಿಯ ಕ್ರೀಡೆ, ಬಿಸಿನೆಸ್, ಕಲೆ ಇತ್ಯಾದಿ ಕ್ಷೇತ್ರಗಳಲ್ಲಿ ಕೊಡುಕೊಳ್ಳುವಿಕೆ ಇತ್ಯಾದಿ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಈ ಸಮಿಟ್​ನಲ್ಲಿ ಗಮನ ಹರಿಸಲಾಗುತ್ತದೆ. ಫುಟ್ಬಾಲ್​ನ ಪವರ್​ಹೌಸ್ ಆಗಿರುವ ಜರ್ಮನಿಯಿಂದ ಭಾರತದ ಫುಟ್ಬಾಲ್ ಕ್ಷೇತ್ರ ಹೇಗೆ ನೆರವು ಪಡೆದುಕೊಳ್ಳಬಹುದು ಎಂಬುದನ್ನೂ ಚರ್ಚಿಸಲಾಗುತ್ತದೆ.

ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಭಾರತದ ಹೊರಗೆ ಆಯೋಜನೆ ಆಗುತ್ತಿದೆ. ಇದರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮಾತನಾಡಿದ ಟಿವಿ9 ನೆಟ್ವರ್ಕ್ ಎಂಡಿ ಬರುಣ್ ದಾಸ್, ಈ ಸಮಿಟ್ ಜರ್ಮನಿಯಲ್ಲಿ ಯಾಕೆ ಆಯೋಜಿಸಲಾಗುತ್ತಿದೆ ಎಂದು ಕಾರಣ ನೀಡಿದ್ದಾರೆ.

ಹಿಂದಿನ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮದಲ್ಲಿ ಜರ್ಮನಿಯಿಂದ ಹೆಚ್ಚು ನಿಯೋಗ ಬಂದಿತ್ತು. ಭಾರತ ಮತ್ತು ಜರ್ಮನಿ ಮಧ್ಯೆ ಸಾಕಷ್ಟು ಪೈಪೋಟಿ ಇದೆ. ಜಿಡಿಪಿ ಅಂತರ ಕಡಿಮೆ ಇದೆ. ತಮಗೆ ವೈಯಕ್ತಿಕವಾಗಿಯೂ ಜರ್ಮನಿ ಎಂದರೆ ಇಷ್ಟ. ತಮಗೆ ಜರ್ಮನಿ ಎರಡನೇ ತವರಿನಂತಿದೆ ಎಂದು ಬರುಣ್ ದಾಸ್ ಹೇಳಿದ್ದಾರೆ.

ಸ್ಟುಟ್​ಗಾರ್ಟ್​ನಲ್ಲಿನ ಎಂಎಚ್​ಪಿ ಅರೆನಾ ಕ್ರೀಡಾಂಗಣದಲ್ಲಿ ನವೆಂಬರ್ 21ರಂದು ಸಂಜೆ 4ಗಂಟೆಗೆ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಎರಡನೇ ದಿನ ಭಾಷಣ ಮಾಡಲಿದ್ದಾರೆ. ಸಾರ್ವಜನಿಕರೂ ಕೂಡ ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಬಹುದು. ಸಂಪರ್ಕಿಸಬಹುದಾದ ಇಮೇಲ್ ವಿಳಾಸ: News9GlobalSummitGermany@TV9.com

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Mon, 11 November 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!