Narendra Modi: ಸ್ವಾತಂತ್ರ್ಯ ಶತಮಾನೋತ್ಸವದ ವೇಳೆ ಮುಂದುವರಿದ ದೇಶವನ್ನಾಗಿಸುವ ಗುರಿ: ನರೇಂದ್ರ ಮೋದಿ

Vibrant Gujarat global summit 2024: ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಮುಂದುವರಿದ ದೇಶವನ್ನಾಗಿಸುವ ಗುರಿ ಇಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ 25 ವರ್ಷ ಭಾರತಕ್ಕೆ ಅಮೃತ ಕಾಲವಾಗಿದೆ. ಕೆಲವೇ ವರ್ಷಗಳಲ್ಲಿ ಟಾಪ್ 3 ದೇಶವಾಗಿರುತ್ತದೆ ಎಂದು ಮೋದಿ ತಿಳಿಸಿದ್ದಾರೆ. ಗುಜರಾತ್​ನ ಗಾಂಧಿನಗರ್​ನಲ್ಲಿ 10ನೇ ಆವೃತ್ತಿಯ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಸಮಿಟ್ ಅನ್ನು ಮೋದಿ ಉದ್ಘಾಟನೆ ಮಾಡಿದ್ದಾರೆ.

Narendra Modi: ಸ್ವಾತಂತ್ರ್ಯ ಶತಮಾನೋತ್ಸವದ ವೇಳೆ ಮುಂದುವರಿದ ದೇಶವನ್ನಾಗಿಸುವ ಗುರಿ: ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
|

Updated on: Jan 10, 2024 | 2:18 PM

ಗಾಂಧಿನಗರ್, ಜನವರಿ 10: ಸ್ವಾತಂತ್ರ್ಯ ಶತಮಾನೋತ್ಸವದ ವೇಳೆಗೆ ಭಾರತ ಮುಂದುವರಿದ ದೇಶವನ್ನಾಗಿ ಮಾಡುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಗುಜರಾತ್​ನ ಗಾಂಧಿನಗರ್​ನಲ್ಲಿ ಇಂದು ಅವರು 10ನೇ ಆವೃತ್ತಿಯ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಸಮಿಟ್ ಕಾರ್ಯಕ್ರಮ (Vibrant Gujarat global summit 2024) ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ 25 ವರ್ಷ ಭಾರತದ ಅಮೃತ ಕಾಲವಾಗಿದೆ ಎಂದು ಹೇಳಿದ್ದಾರೆ.

‘ಈಗಷ್ಟೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (75 ವರ್ಷ) ಆಚರಿಸಿದೆ. ಈಗ ಮುಂದಿನ 25 ವರ್ಷಕ್ಕೆ ಇಡಲಾಗಿರುವ ಗುರಿ ಈಡೇರಿಕೆ ನಿಟ್ಟಿನಲ್ಲಿ ದೇಶ ಕಾರ್ಯನಿರತವಾಗಿದೆ. ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸುವ ವೇಳೆ ಭಾರತವನ್ನು ಮುಂದುವರಿದ ದೇಶವಾಗಿ ಮಾಡುವ ಗುರಿ ಹೊಂದಿದ್ದೇವೆ. ಆದ್ದರಿಂದ ಈ 25 ವರ್ಷ ಅವಧಿ ಭಾರತಕ್ಕೆ ಅಮೃತ ಕಾಲ ಆಗಿರುತ್ತದೆ,’ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Mukesh Ambani: ಭಾರತದ ಇತಿಹಾಸದಲ್ಲೇ ನರೇಂದ್ರ ಮೋದಿ ಅತ್ಯಂತ ಯಶಸ್ವಿ ಪ್ರಧಾನಿ: ಮುಕೇಶ್ ಅಂಬಾನಿ ಬಣ್ಣನೆ

ಮುಂಬರುವ ಕೆಲ ವರ್ಷಗಳಲ್ಲಿ ಭಾರತದ್ದು ಮೂರನೇ ಅತಿದೊಡ್ಡ ಆರ್ಥಿಕತೆ ಆಗಲಿದೆ ಎಂದು ಎಲ್ಲಾ ಪ್ರಮುಖ ಏಜೆನ್ಸಿಗಳು ಹೇಳಿವೆ. ಕಳೆದ ಒಂದು ದಶಕದಲ್ಲಿ ಭಾರತದ ಆರ್ಥಿಕತೆ ಬೆಳೆದಿರುವ ರೀತಿ ನೋಡಿದರೆ ವಿಶ್ವಾಸ ಮೂಡುತ್ತದೆ ಎಂದಿದ್ದಾರೆ.

ಭಾರತದಲ್ಲಿ ಸ್ಟಾರ್ಟಪ್ ಪ್ರವೃತ್ತಿ ಹೆಚ್ಚುತ್ತಿರುವುದನ್ನು ಸ್ವಾಗತಿಸಿದ ಪ್ರಧಾನಿಗಳು, ದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸ್ಟಾರ್ಟಪ್​ಗಳಿವೆ ಎಂದಿದ್ದಾರೆ.

ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರೂ ಪಾಲ್ಗೊಂಡಿದ್ದರು. ಉದ್ಘಾಟನಾ ಸಮಾರಂಭದ ಬಳಿಕ ಯುಎಇ ಅಧ್ಯಕ್ಷರು ನಿರ್ಗಮಿಸಿದರು.

ಇದನ್ನೂ ಓದಿ: Gautam adani: ವೈಬ್ರಂಟ್ ಗುಜರಾತ್ ಗ್ಲೋಬಲ್ ಸಮಿಟ್: ಮುಂದಿನ 3 ವರ್ಷದಲ್ಲಿ ಗುಜರಾತ್​ನಲ್ಲಿ 2 ಲಕ್ಷ ಕೋಟಿ ರೂ ಹೂಡಿಕೆ: ಗೌತಮ್ ಅದಾನಿ

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಪೊರೇಟ್ ಕಂಪನಿಗಳ ಸಿಇಒಗಳ ಜೊತೆ ಸಭೆ ನಡೆಸುವ ಕಾರ್ಯಕ್ರಮ ಇದೆ. ಸಂಜೆ 5 ಗಂಟೆಯ ಬಳಿಕ ಗಿಫ್ಟ್ ಸಿಟಿಗೆ ಪ್ರಯಾಣಿಸಿ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರಧಾನಿಗಳು ನಿನ್ನೆಯಿಂದಲೂ ಗುಜರಾತ್​ನ ಗಾಂಧಿನಗರ್​ನಲ್ಲಿದ್ದಾರೆ. ನಿನ್ನೆ (ಜ. 9) ಇಲ್ಲಿ ಗ್ಲೋಬಲ್ ಟ್ರೇಡ್ ಶೋಗೆ ಚಾಲನೆ ನೀಡಿದ್ದರು. ವಿವಿಧ ಜಾಗತಿಕ ನಾಯಕರ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು