AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಅನೇಕ ದಶಕಗಳು ಭಾರತದ ಪಾರಮ್ಯಕ್ಕೆ ಅವಕಾಶ: ಮಾರುತಿ ಸುಜುಕಿ ಸಿಇಒ

Maruti Suzuki India CEO Hisashi Takeuchi compares Indian growth trajectory to Japan: ಮುಂದಿನ ಅನೇಕ ದಶಕಗಳು ಭಾರತಕ್ಕೆ ಸೇರಿದ್ದಾಗಿದೆ ಎಂದು ಮಾರುತಿ ಸುಜುಕಿ ಇಂಡಿಯಾದ ಸಿಇಒ ಹಿಸಾಶಿ ಟಕ್ಯೂಚಿ ಹೇಳಿದ್ದಾರೆ. ಭಾರತದ ನೀತಿಗಳಲ್ಲಿ ಸ್ಥಿರತೆ ಸಾಧನೆಯಾದರೆ ಮ್ಯಾನುಫ್ಯಾಕ್ಚರಿಂಗ್​ನಲ್ಲಿ ಮುಂದಿನ ಪವರ್ ಎನಿಸಲಿದೆ ಎಂಬುದು ಅವರ ಅನಿಸಿಕೆ. 2ನೇ ವಿಶ್ವ ಮಹಾಯುದ್ಧದ ನಂತರ ಜಪಾನ್ ಪ್ರಬಲ ಆರ್ಥಿಕತೆಯ ದೇಶವಾಗಿ ಬೆಳೆದಂತೆ ಭಾರತವೂ ಬೆಳೆಯಲಿದೆ ಎಂದಿದ್ದಾರೆ.

ಮುಂದಿನ ಅನೇಕ ದಶಕಗಳು ಭಾರತದ ಪಾರಮ್ಯಕ್ಕೆ ಅವಕಾಶ: ಮಾರುತಿ ಸುಜುಕಿ ಸಿಇಒ
ಹಿಸಾಶಿ ಟಕ್ಯೂಚಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 12, 2025 | 6:41 PM

Share

ನವದೆಹಲಿ, ಸೆಪ್ಟೆಂಬರ್ 12: ಭಾರತದ ಆರ್ಥಿಕ ಪ್ರಯಾಣ ಈಗ ನಿರ್ಣಾಯಕ ಹಂತ ಪ್ರವೇಶಿಸುತ್ತಿದೆ. ಮ್ಯಾನುಫ್ಯಾಕ್ಚರಿಂಗ್​ನಲ್ಲಿ ವಿಶ್ವದ ಮುಂದಿನ ಸೂಪರ್ ಪವರ್ ಆಗುವ ಅವಕಾಶ ಭಾರತಕ್ಕೆ ಬಂದೊದಗಿದೆ ಎಂದು ಮಾರುತಿ ಸುಜುಕಿಯ ಭಾರತ ವಿಭಾಗದ ಸಿಇಒ ಮತ್ತು ಎಂಡಿ ಹಿಸಾಶಿ ಟಕ್ಯೂಚಿ (Hisashi Takeuchi) ಅಭಿಪ್ರಾಯಪಟ್ಟಿದ್ದಾರೆ. ಭಾರತದ ಆಟೊಮೋಟಿವ್ ಬಿಡಿಭಾಗ ತಯಾರಕ ಸಂಘದ ವಾರ್ಷಿಕ ಅಧಿವೇಶನದಲ್ಲಿ ಮಾತನಾಡುತ್ತಿದ್ದ ಜಪಾನ್ ಮೂಲದ ಹಿರಿಯ ಅಧಿಕಾರಿಯು, ಮುಂಬರುವ ದಶಕಗಳು ಭಾರತಕ್ಕೆ ಸೇರಿದ್ದು ಎಂದಿದ್ದಾರೆ.

ನೀತಿಯಲ್ಲಿ ಸ್ಥಿರತೆ ಕಾಯ್ದುಕೊಂಡರೆ ಮುಂಬರುವ ಅನೇಕ ದಶಕಗಳು ಭಾರತ ಪಾರಮ್ಯ ಸಾಧಿಸುವ ಅವಕಾಶ ಹೊಂದಿದೆ ಎಂದು ಹಿಸಾಶಿ ಟಕ್ಯೂಚಿ ತಿಳಿಸಿದ್ದಾರೆ. ಜಾಗತಿಕವಾಗಿ ವಿವಿಧ ಪ್ರದೇಶಗಳು ಹೇಗೆ ನಿರ್ದಿಷ್ಟ ಕಾಲಾವಧಿಯವರೆಗೆ ಆರ್ಥಿಕವಾಗಿ ಪ್ರಾಬಲ್ಯ ಸಾಧಿಸಿದ್ದವು ಎಂಬುದನ್ನು ಸಾದೋಹರಣೆ ಸಮೇತ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಭಾರತದ ಹಣದುಬ್ಬರ ಆಗಸ್ಟ್​ನಲ್ಲಿ ಶೇ. 2.07ಕ್ಕೆ ಏರಿಕೆ; ತಾಳಿಕೆ ಮಿತಿಗಿಂತ ಬಹಳ ಕಡಿಮೆ

ಅಮೆರಿಕ, ಯೂರೋಪ್​ನಿಂದ ಹಿಡಿದು ಜಪಾನ್​ವರೆಗೆ ವಿವಿಧ ದೇಶಗಳು ನಿರ್ದಿಷ್ಟ ಕಾಲಾವಧಿಯವರೆಗೆ ಆರ್ಥಿಕ ಪ್ರಾಬಲ್ಯ ಹೊಂದಿದ್ದವು. ಇತ್ತೀಚೆಗೆ, ಚೀನಾ ವಿಶ್ವದ ಫ್ಯಾಕ್ಟರಿ ಎನ್ನುವ ಸ್ಥಾನ ಪಡೆದಿದೆ. ಈಗ ಆ ಸ್ಥಾನಕ್ಕೆ ಭಾರತದ ಸರದಿ ಬಂದಿದೆ ಎಂದು ಮಾರುತಿ ಸುಜುಕಿ ಇಂಡಿಯಾದ ಸಿಇಒ ಅಭಿಪ್ರಾಯಪಟ್ಟಿದ್ದಾರೆ.

ಜಪಾನ್ ಬೆಳೆದ ಮಾರ್ಗದಲ್ಲಿ ಭಾರತ…

ಹಿಸಾಶಿ ಟೆಕ್ಯೂಚಿ ಅವರು ಭಾರತದ ಬೆಳವಣಿಗೆ ಕ್ರಮವನ್ನು ವಿಶ್ವ ಮಹಾಯುದ್ಧದ ನಂತರ ಜಪಾನ್ ಕಂಡ ಬೆಳವಣಿಗೆಗೆ ಹೋಲಿಕೆ ಮಾಡಿದ್ದಾರೆ.

ಜಪಾನ್ ಸರ್ಕಾರದ ನೀತಿಗಳು ಕೈಗಾರಿಕೆಗಳ ನಿರ್ಮಾಣಕ್ಕೆ ಪೂರಕವಾಗಿದ್ದವು. ಜಾಗತಿಕವಾಗಿ ವಿಸ್ತರಣೆ ಹೊಂದಲು ಸಹಾಯಕವಾಗಿದ್ದವು. ಭಾರತದಲ್ಲೂ ಅದೇ ಸಂಕೇತ ಗೋಚರಿಸಿದೆ ಎಂದಿದ್ದಾರೆ ಅವರು.

ಇದನ್ನೂ ಓದಿ: ಉಕ್ರೇನ್-ರಷ್ಯಾ ಯುದ್ಧದಿಂದ ಹೆಚ್ಚು ಲಾಭ ಮಾಡುತ್ತಿರೋದು ಭಾರತವಲ್ಲ, ಚೀನಾವಲ್ಲ; ಅಮೆರಿಕಕ್ಕೆ ಹಣದ ಹೊಳೆ?

ಭಾರತಕ್ಕೆ ಅನುಕೂಲವಾಗುವ ಸಂಗತಿಗಳನ್ನು ತಿಳಿಸಿದ ಹಿಸಾಶಿ

ಭಾರತದಲ್ಲಿ ಕಾರ್ಮಿಕ ವಯೋಮಾನದ ಜನಸಂಖ್ಯೆ ವಿಶ್ವದಲ್ಲೇ ಅತಿಹೆಚ್ಚಿದೆ. ಭಾರತದ್ದು ನಾಲ್ಕು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದೆ. ಸರ್ಕಾರ ಕೂಡ ಉದ್ಯಮಕ್ಕೆ ಬೆಂಬಲವಾಗಿ ನಿಂತಿದೆ. ಕಾರ್ಪೊರೇಟ್ ಟ್ಯಾಕ್ಸ್ ಕಡಿಮೆ ಮಾಡಿರುವುದು, ಪಿಎಲ್​ಐ ಸ್ಕೀಮ್ ಮತ್ತು ಮೇಕ್ ಇನ್ ಇಂಡಿಯಾ ಸ್ಕೀಮ್​ಗಳನ್ನು ನಡೆಸುತ್ತಿರುವುದು, ಜಿಎಸ್​ಟಿ ಕಡಿತಗೊಳಿಸಿರುವುದು ಇವೇ ಮುಂತಾದ ಸಂಗತಿಗಳು ಭಾರತದ ಅಭಿವೃದ್ಧಿಗೆ ಪುಷ್ಟಿ ಕೊಡಬಹುದು ಎನ್ನುವುದು ಮಾರುತಿ ಸುಜುಕಿ ಇಂಡಿಯಾದ ಎಂಡಿಯೂ ಆಗಿರುವ ಹಿಸಾಶಿ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Fri, 12 September 25

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್