AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ಅಪಾಯದ ಮುನ್ಸೂಚನೆ ಕೊಡುವ ಅಲರ್ಟ್ ಸಿಸ್ಟಂ; ರಿಲಾಯನ್ಸ್ ಜಿಯೋ ಜೊತೆ ಹೆದ್ದಾರಿ ಪ್ರಾಧಿಕಾರ ಒಪ್ಪಂದ

NHAI plans for highway safety system: ಹೆದ್ದಾರಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮುಂಬರಬಹುದಾದ ರಸ್ತೆ ಅಪಾಯಗಳ ಬಗ್ಗೆ ಅಲರ್ಟ್ ಮೆಸೇಜ್​ಗಳು ಅಥವಾ ಕರೆಗಳು ಬರಬಹುದು. ಇಂಥದ್ದೊಂದು ಅಲರ್ಟ್ ಸಿಸ್ಟಂ ಜಾರಿಗೆ ರಿಲಾಯನ್ಸ್ ಜಿಯೋ ಜೊತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಂದ ಮಾಡಿಕೊಂಡಿದೆ. ಸದ್ಯ ಜಿಯೋ ಬಳಕೆದಾರರಿಗೆ ಈ ಸಿಸ್ಟಂ ಇರುತ್ತದೆ. ಮುಂದಿನ ದಿನಗಳಲ್ಲಿ ಇತರ ಟೆಲಿಕಾಂ ಕಂಪನಿಗಳೊಂದಿಗೂ ಪ್ರಾಧಿಕಾರ ಒಪ್ಪಂದ ಮಾಡಿಕೊಳ್ಳಬಹುದು.

ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ಅಪಾಯದ ಮುನ್ಸೂಚನೆ ಕೊಡುವ ಅಲರ್ಟ್ ಸಿಸ್ಟಂ; ರಿಲಾಯನ್ಸ್ ಜಿಯೋ ಜೊತೆ ಹೆದ್ದಾರಿ ಪ್ರಾಧಿಕಾರ ಒಪ್ಪಂದ
ಹೆದ್ದಾರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 02, 2025 | 6:57 PM

Share

ನವದೆಹಲಿ, ಡಿಸೆಂಬರ್ 2: ದೇಶಾದ್ಯಂತ ಹೆದ್ದಾರಿಯಲ್ಲಿ ಪ್ರಯಾಣಿಸುವವರಿಗೆ ಎದುರಾಗಬಹುದಾದ ವಿವಿಧ ಅಪಾಯಗಳ ಮುನ್ಸೂಚನೆ ನೀಡುವಂತಹ ಅಲರ್ಟ್ ಸಿಸ್ಟಂ (Highway alert system) ಅನ್ನು ಜಾರಿಗೆ ತರಲು ರಿಲಾಯನ್ಸ್ ಜಿಯೋ (Reliance Jio) ಸಂಸ್ಥೆಯೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI- National Highways Authority of India) ಎಂಒಯು ಒಪ್ಪಂದ ಮಾಡಿಕೊಂಡಿದೆ. ಈ ಯೋಜನೆ ಪ್ರಕಾರ, ಮೊಬೈಲ್ ಮೂಲಕ ಈ ಅಲರ್ಟ್ ಮೆಸೇಜ್​ಗಳು ಪ್ರಯಾಣಿಕರಿಗೆ ಮುಂಚಿತವಾಗಿ ಹೋಗುತ್ತವೆ.

ಹೆದ್ದಾರಿಗಳಲ್ಲಿ ಹೋಗುವಾಗ ಮುಂದೆ ಆಕ್ಸಿಡೆಂಟ್ ಝೋನ್ ಇದ್ದರೆ, ಅಥವಾ ಬೀಡಾಡಿ ದನಗಳ ಸಂಚಾರ ಹೆಚ್ಚಾಗಿದ್ದರೆ, ದಟ್ಟ ಮಂಜು ಕವಿದ ಪ್ರದೇಶವಿದ್ದರೆ, ಅಥವಾ ತುರ್ತು ತಿರುವು ಇದ್ದರೆ ಅಂಥ ಸಂದರ್ಭದಲ್ಲಿ ಪ್ರಯಾಣಿಕರಿಗೆ ಮುಂಚಿತವಾಗಿ ಅಲರ್ಟ್ ಮೆಸೇಜ್​ಗಳನ್ನು ಕಳುಹಿಸುವ ಉದ್ದೇಶ ಈ ಯೋಜನೆಯಲ್ಲಿದೆ.

ಇದನ್ನೂ ಓದಿ: 22 ವರ್ಷದ ಕನ್ನಡಿಗ ಆದರ್ಶ್ ಹಿರೇಮಠ ವಿಶ್ವದ ಅತೀ ಕಿರಿಯ ವಯಸ್ಸಿನ ಸೆಲ್ಫ್ ಮೇಡ್ ಬಿಲಿಯನೇರ್

ಮುನ್ನೆಚ್ಚರಿಕೆಯ ಸಂದೇಶಗಳನ್ನು ವಿವಿಧ ರೀತಿಯಲ್ಲಿ ಕಳುಹಿಸಲಾಗಬಹುದು. ಎಸ್ಸೆಮ್ಮೆಸ್ ಮೂಲಕ ಹೋಗಬಹುದು, ವಾಟ್ಸಾಪ್ ಮೂಲಕ ಹೋಗಬಹುದು. ಅಥವಾ ಹೈ ಪ್ರಯಾರಿಟಿ ಕಾಲ್​ಗಳ ಮೂಲಕ ಅಲರ್ಟ್ ಕಳುಹಿಸಲಾಗಬಹುದು. ಈ ಮೆಸೇಜ್​ಗಳನ್ನು ನೋಡಿ ಪ್ರಯಾಣಿಕರು ಎಚ್ಚರಿಕೆಯಿಂದ ವಾಹನ ಚಲಾಯಿಸಲು ಸಾಧ್ಯವಾಗಬಹುದು.

ರಾಜಮಾರ್ಗ ಯಾತ್ರಾ ಮೊಬೈಲ್ ಆ್ಯಪ್, ಎಮರ್ಜೆನ್ಸಿ ಸಹಾಯವಾಣಿ 1022 ಸೇರಿದಂತೆ ಹೆದ್ದಾರಿ ಪ್ರಾಧಿಕಾರದ ವಿವಿಧ ಡಿಜಿಟಲ್ ಪ್ಲಾಟ್​ಫಾರ್ಮ್​ಗಳಲ್ಲಿ ಕ್ರಮೇಣವಾಗಿ ಈ ಅಲರ್ಟ್ ಸಿಸ್ಟಂ ಅನ್ನು ಜೋಡಿಸಲಾಗುವ ಉದ್ದೇಶ ಇದೆ.

ಇದನ್ನೂ ಓದಿ: ಗಿಫ್ಟ್ ಡೀಡ್ ಮಾಡಿದ ಆಸ್ತಿಯನ್ನು ಹಿಂಪಡೆಯಲು ಸಾಧ್ಯವಾ? ಕೋರ್ಟ್ ನೀಡಿದ ಮಹತ್ವದ ತೀರ್ಪಿದು

ಸದ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ಎಲ್ಲಾ ಜಿಯೊ ಬಳಕೆದಾರರ ಮೊಬೈಲ್​ಗಳಲ್ಲಿ ಈ ಆಟೊಮೇಟೆಡ್ ಸಿಸ್ಟಂ ಕೆಲಸ ಮಾಡುತ್ತದೆ. ದೇಶಾದ್ಯಂತ ಇರುವ ಜಿಯೋದ 4ಜಿ ಮತ್ತು 5ಜಿ ನೆಟ್ವರ್ಕ್​ಗಳು ಈ ಅಡ್ವಾನ್ಸ್ಡ್ ಸಿಸ್ಟಂ ಜಾರಿಗೆ ಸಹಾಯಕವಾಗಿವೆ. ಇದೇ ವೇಳೆ, ಎನ್​ಎಚ್​ಎಐ ಇತರ ಟೆಲಿಕಾಂ ಕಂಪನಿಗಳೊಂದಿಗೂ ಇದೇ ರೀತಿ ಒಪ್ಪಂದಕ್ಕೆ ಮುಂದಾಗಲಿದೆ. ಏರ್ಟೆಲ್ ಹಾಗೂ ಇತರ ಟೆಲಿಕಾಂ ಬಳಕೆದಾರರಿಗೂ ಈ ಸೇವೆ ಮುಂದಿನ ದಿನಗಳಲ್ಲಿ ಲಭ್ಯವಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!