AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dividend Payout: ಎನ್​ಎಚ್​​ಪಿಸಿಯಿಂದ ಸರ್ಕಾರಕ್ಕೆ ಮಧ್ಯಂತರ ಲಾಭಾಂಶವಾಗಿ 933.61 ಕೋಟಿ ವಿತರಣೆ

ಎನ್​ಎಚ್​ಪಿಸಿಯಿಂದ ಕೇಂದ್ರ ಸರ್ಕಾರಕ್ಕೆ 933.61 ಕೋಟಿ ರೂಪಾಯಿ ಮಧ್ಯಂತರ ಲಾಭಾಂಶವನ್ನು ಹಸ್ತಾಂತರ ಮಾಡಲಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.

Dividend Payout: ಎನ್​ಎಚ್​​ಪಿಸಿಯಿಂದ ಸರ್ಕಾರಕ್ಕೆ ಮಧ್ಯಂತರ ಲಾಭಾಂಶವಾಗಿ 933.61 ಕೋಟಿ ವಿತರಣೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Mar 11, 2022 | 1:31 PM

Share

ಸರ್ಕಾರಿ ಸ್ವಾಮ್ಯದ ಜಲವಿದ್ಯುತ್ ಕಂಪೆನಿ ಎನ್​ಎಚ್​ಪಿಸಿ ಲಿಮಿಟೆಡ್​ನಿಂದ 2021-22ರ ಹಣಕಾಸು ವರ್ಷಕ್ಕೆ ಮಧ್ಯಂತರ ಲಾಭಾಂಶವಾಗಿ (Dividend) 933.61 ಕೋಟಿ ರೂಪಾಯಿಯನ್ನು ಪಾವತಿಸಲಾಗಿದೆ. ಕಂಪೆನಿಯ ಹೇಳಿಕೆಯಂತೆ, ಎನ್​ಎಚ್​ಪಿಸಿಯ ಸಿಎಂಡಿ ಆದ ಎ.ಕೆ.ಸಿಂಗ್ ಅವರು ಕೇಂದ್ರ ಸಚಿವರಾದ ಆರ್​.ಕೆ.ಸಿಂಗ್​ಗೆ ಡಿವಿಡೆಂಡ್​ ಪೇಔಟ್ ಅಡ್ವೈಸ್ ಅನ್ನು ಗುರುವಾರದಂದು ಹಸ್ತಾಂತರಿಸಿದರು. 2020-21ರ ಸಾಲಿನ ಹಣಕಾಸಿನ ವರ್ಷಕ್ಕೆ ಅಂತಿಮ ಡಿವಿಡೆಂಡ್​ ಆಗಿ 249.44 ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರಕ್ಕೆ ಎನ್​ಎಚ್​ಪಿಸಿಯಿಂದ ಪಾವತಿ ಮಾಡಲಾಗಿತ್ತು. ಫೆಬ್ರವರಿ 11ನೇ ತಾರೀಕಿನಂದು ನಡೆದ ಸಭೆಯಲ್ಲಿ ಎನ್​ಎಚ್​ಪಿಸಿಯ ಮಂಡಳಿ ನಿರ್ದೇಶಕರು ಪ್ರತಿ ಈಕ್ವಿಟಿ ಷೇರಿಗೆ ಮಧ್ಯಂತರ ಡಿವಿಡೆಂಡ್ 1.31 ರೂಪಾಯಿ ಘೋಷಣೆ ಮಾಡಿದ್ದರು. ಅಂದರೆ, ಮುಖಬೆಲೆಯ 13.10ರಷ್ಟು ಆಗುತ್ತದೆ.

ಸದ್ಯಕ್ಕೆ ಎನ್​ಎಚ್​ಪಿಸಿಗೆ 8 ಲಕ್ಷಕ್ಕೂ ಹೆಚ್ಚು ಷೇರುದಾರರಿದ್ದಾರೆ. ಒಟ್ಟಾರೆಯಾಗಿ 2021-22ನೇ ಸಾಲಿಗೆ ಮಧ್ಯಂತರ ಲಾಭಾಂಶದ ಪಾವತಿ 1,315.90 ಕೋಟಿ ರೂಪಾಯಿ ಆಗುತ್ತದೆ. CPSEಗಳ ಬಂಡವಾಳ ಪುನರ್​ರಚನೆಯ ಕುರಿತು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯ (DIPAM) ಮಾರ್ಗಸೂಚಿಗಳ ಪ್ರಕಾರ, ಪ್ರತಿ CPSU ತೆರಿಗೆ ನಂತರದ ಲಾಭದ ಶೇ 30 ಅಥವಾ ನಿವ್ವಳ ಮೌಲ್ಯದ ಶೇ 5ರಷ್ಟು ಕನಿಷ್ಠ ವಾರ್ಷಿಕ ಲಾಭಾಂಶವನ್ನು ಪಾವತಿಸಬೇಕಾಗುತ್ತದೆ.

ಅಕ್ಟೋಬರ್​ನಿಂದ ಆರಂಭವಾಗಿ ಡಿಸೆಂಬರ್​ಗೆ ಕೊನೆಯಾಗುವ ತ್ರೈಮಾಸಿಕದಲ್ಲಿ ಎನ್‌ಎಚ್‌ಪಿಸಿ ತನ್ನ ಏಕೀಕೃತ ನಿವ್ವಳ ಲಾಭದಲ್ಲಿ ಸುಮಾರು ಶೇ 7.5ರಷ್ಟು ಕುಸಿತವನ್ನು, ಅಂದರೆ 889 ಕೋಟಿ ರೂಪಾಯಿ ವರದಿ ಮಾಡಿದೆ. 2021ರ ಅಕ್ಟೋಬರ್​ನಿಂದ ಡಿಸೆಂಬರ್​ನಲ್ಲಿ ಒಟ್ಟು ಆದಾಯ ರೂ. 2,373.72 ಕೋಟಿ ದಾಖಲಿಸಿದೆ.

ಇದನ್ನೂ ಓದಿ: ಕೋಲ್ ಇಂಡಿಯಾ ಮತ್ತು ಇತರ ಪಿಎಸ್​ಯುಗಳಿಂದ ಕೇಂದ್ರ ಸರ್ಕಾರಕ್ಕೆ ಬಂಪರ್ ಡಿವಿಡೆಂಡ್

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ