AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dividend Payout: ಎನ್​ಎಚ್​​ಪಿಸಿಯಿಂದ ಸರ್ಕಾರಕ್ಕೆ ಮಧ್ಯಂತರ ಲಾಭಾಂಶವಾಗಿ 933.61 ಕೋಟಿ ವಿತರಣೆ

ಎನ್​ಎಚ್​ಪಿಸಿಯಿಂದ ಕೇಂದ್ರ ಸರ್ಕಾರಕ್ಕೆ 933.61 ಕೋಟಿ ರೂಪಾಯಿ ಮಧ್ಯಂತರ ಲಾಭಾಂಶವನ್ನು ಹಸ್ತಾಂತರ ಮಾಡಲಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.

Dividend Payout: ಎನ್​ಎಚ್​​ಪಿಸಿಯಿಂದ ಸರ್ಕಾರಕ್ಕೆ ಮಧ್ಯಂತರ ಲಾಭಾಂಶವಾಗಿ 933.61 ಕೋಟಿ ವಿತರಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Mar 11, 2022 | 1:31 PM

ಸರ್ಕಾರಿ ಸ್ವಾಮ್ಯದ ಜಲವಿದ್ಯುತ್ ಕಂಪೆನಿ ಎನ್​ಎಚ್​ಪಿಸಿ ಲಿಮಿಟೆಡ್​ನಿಂದ 2021-22ರ ಹಣಕಾಸು ವರ್ಷಕ್ಕೆ ಮಧ್ಯಂತರ ಲಾಭಾಂಶವಾಗಿ (Dividend) 933.61 ಕೋಟಿ ರೂಪಾಯಿಯನ್ನು ಪಾವತಿಸಲಾಗಿದೆ. ಕಂಪೆನಿಯ ಹೇಳಿಕೆಯಂತೆ, ಎನ್​ಎಚ್​ಪಿಸಿಯ ಸಿಎಂಡಿ ಆದ ಎ.ಕೆ.ಸಿಂಗ್ ಅವರು ಕೇಂದ್ರ ಸಚಿವರಾದ ಆರ್​.ಕೆ.ಸಿಂಗ್​ಗೆ ಡಿವಿಡೆಂಡ್​ ಪೇಔಟ್ ಅಡ್ವೈಸ್ ಅನ್ನು ಗುರುವಾರದಂದು ಹಸ್ತಾಂತರಿಸಿದರು. 2020-21ರ ಸಾಲಿನ ಹಣಕಾಸಿನ ವರ್ಷಕ್ಕೆ ಅಂತಿಮ ಡಿವಿಡೆಂಡ್​ ಆಗಿ 249.44 ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರಕ್ಕೆ ಎನ್​ಎಚ್​ಪಿಸಿಯಿಂದ ಪಾವತಿ ಮಾಡಲಾಗಿತ್ತು. ಫೆಬ್ರವರಿ 11ನೇ ತಾರೀಕಿನಂದು ನಡೆದ ಸಭೆಯಲ್ಲಿ ಎನ್​ಎಚ್​ಪಿಸಿಯ ಮಂಡಳಿ ನಿರ್ದೇಶಕರು ಪ್ರತಿ ಈಕ್ವಿಟಿ ಷೇರಿಗೆ ಮಧ್ಯಂತರ ಡಿವಿಡೆಂಡ್ 1.31 ರೂಪಾಯಿ ಘೋಷಣೆ ಮಾಡಿದ್ದರು. ಅಂದರೆ, ಮುಖಬೆಲೆಯ 13.10ರಷ್ಟು ಆಗುತ್ತದೆ.

ಸದ್ಯಕ್ಕೆ ಎನ್​ಎಚ್​ಪಿಸಿಗೆ 8 ಲಕ್ಷಕ್ಕೂ ಹೆಚ್ಚು ಷೇರುದಾರರಿದ್ದಾರೆ. ಒಟ್ಟಾರೆಯಾಗಿ 2021-22ನೇ ಸಾಲಿಗೆ ಮಧ್ಯಂತರ ಲಾಭಾಂಶದ ಪಾವತಿ 1,315.90 ಕೋಟಿ ರೂಪಾಯಿ ಆಗುತ್ತದೆ. CPSEಗಳ ಬಂಡವಾಳ ಪುನರ್​ರಚನೆಯ ಕುರಿತು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯ (DIPAM) ಮಾರ್ಗಸೂಚಿಗಳ ಪ್ರಕಾರ, ಪ್ರತಿ CPSU ತೆರಿಗೆ ನಂತರದ ಲಾಭದ ಶೇ 30 ಅಥವಾ ನಿವ್ವಳ ಮೌಲ್ಯದ ಶೇ 5ರಷ್ಟು ಕನಿಷ್ಠ ವಾರ್ಷಿಕ ಲಾಭಾಂಶವನ್ನು ಪಾವತಿಸಬೇಕಾಗುತ್ತದೆ.

ಅಕ್ಟೋಬರ್​ನಿಂದ ಆರಂಭವಾಗಿ ಡಿಸೆಂಬರ್​ಗೆ ಕೊನೆಯಾಗುವ ತ್ರೈಮಾಸಿಕದಲ್ಲಿ ಎನ್‌ಎಚ್‌ಪಿಸಿ ತನ್ನ ಏಕೀಕೃತ ನಿವ್ವಳ ಲಾಭದಲ್ಲಿ ಸುಮಾರು ಶೇ 7.5ರಷ್ಟು ಕುಸಿತವನ್ನು, ಅಂದರೆ 889 ಕೋಟಿ ರೂಪಾಯಿ ವರದಿ ಮಾಡಿದೆ. 2021ರ ಅಕ್ಟೋಬರ್​ನಿಂದ ಡಿಸೆಂಬರ್​ನಲ್ಲಿ ಒಟ್ಟು ಆದಾಯ ರೂ. 2,373.72 ಕೋಟಿ ದಾಖಲಿಸಿದೆ.

ಇದನ್ನೂ ಓದಿ: ಕೋಲ್ ಇಂಡಿಯಾ ಮತ್ತು ಇತರ ಪಿಎಸ್​ಯುಗಳಿಂದ ಕೇಂದ್ರ ಸರ್ಕಾರಕ್ಕೆ ಬಂಪರ್ ಡಿವಿಡೆಂಡ್

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ