AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dividend Payout: ಎನ್​ಎಚ್​​ಪಿಸಿಯಿಂದ ಸರ್ಕಾರಕ್ಕೆ ಮಧ್ಯಂತರ ಲಾಭಾಂಶವಾಗಿ 933.61 ಕೋಟಿ ವಿತರಣೆ

ಎನ್​ಎಚ್​ಪಿಸಿಯಿಂದ ಕೇಂದ್ರ ಸರ್ಕಾರಕ್ಕೆ 933.61 ಕೋಟಿ ರೂಪಾಯಿ ಮಧ್ಯಂತರ ಲಾಭಾಂಶವನ್ನು ಹಸ್ತಾಂತರ ಮಾಡಲಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.

Dividend Payout: ಎನ್​ಎಚ್​​ಪಿಸಿಯಿಂದ ಸರ್ಕಾರಕ್ಕೆ ಮಧ್ಯಂತರ ಲಾಭಾಂಶವಾಗಿ 933.61 ಕೋಟಿ ವಿತರಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 11, 2022 | 1:31 PM

Share

ಸರ್ಕಾರಿ ಸ್ವಾಮ್ಯದ ಜಲವಿದ್ಯುತ್ ಕಂಪೆನಿ ಎನ್​ಎಚ್​ಪಿಸಿ ಲಿಮಿಟೆಡ್​ನಿಂದ 2021-22ರ ಹಣಕಾಸು ವರ್ಷಕ್ಕೆ ಮಧ್ಯಂತರ ಲಾಭಾಂಶವಾಗಿ (Dividend) 933.61 ಕೋಟಿ ರೂಪಾಯಿಯನ್ನು ಪಾವತಿಸಲಾಗಿದೆ. ಕಂಪೆನಿಯ ಹೇಳಿಕೆಯಂತೆ, ಎನ್​ಎಚ್​ಪಿಸಿಯ ಸಿಎಂಡಿ ಆದ ಎ.ಕೆ.ಸಿಂಗ್ ಅವರು ಕೇಂದ್ರ ಸಚಿವರಾದ ಆರ್​.ಕೆ.ಸಿಂಗ್​ಗೆ ಡಿವಿಡೆಂಡ್​ ಪೇಔಟ್ ಅಡ್ವೈಸ್ ಅನ್ನು ಗುರುವಾರದಂದು ಹಸ್ತಾಂತರಿಸಿದರು. 2020-21ರ ಸಾಲಿನ ಹಣಕಾಸಿನ ವರ್ಷಕ್ಕೆ ಅಂತಿಮ ಡಿವಿಡೆಂಡ್​ ಆಗಿ 249.44 ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರಕ್ಕೆ ಎನ್​ಎಚ್​ಪಿಸಿಯಿಂದ ಪಾವತಿ ಮಾಡಲಾಗಿತ್ತು. ಫೆಬ್ರವರಿ 11ನೇ ತಾರೀಕಿನಂದು ನಡೆದ ಸಭೆಯಲ್ಲಿ ಎನ್​ಎಚ್​ಪಿಸಿಯ ಮಂಡಳಿ ನಿರ್ದೇಶಕರು ಪ್ರತಿ ಈಕ್ವಿಟಿ ಷೇರಿಗೆ ಮಧ್ಯಂತರ ಡಿವಿಡೆಂಡ್ 1.31 ರೂಪಾಯಿ ಘೋಷಣೆ ಮಾಡಿದ್ದರು. ಅಂದರೆ, ಮುಖಬೆಲೆಯ 13.10ರಷ್ಟು ಆಗುತ್ತದೆ.

ಸದ್ಯಕ್ಕೆ ಎನ್​ಎಚ್​ಪಿಸಿಗೆ 8 ಲಕ್ಷಕ್ಕೂ ಹೆಚ್ಚು ಷೇರುದಾರರಿದ್ದಾರೆ. ಒಟ್ಟಾರೆಯಾಗಿ 2021-22ನೇ ಸಾಲಿಗೆ ಮಧ್ಯಂತರ ಲಾಭಾಂಶದ ಪಾವತಿ 1,315.90 ಕೋಟಿ ರೂಪಾಯಿ ಆಗುತ್ತದೆ. CPSEಗಳ ಬಂಡವಾಳ ಪುನರ್​ರಚನೆಯ ಕುರಿತು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯ (DIPAM) ಮಾರ್ಗಸೂಚಿಗಳ ಪ್ರಕಾರ, ಪ್ರತಿ CPSU ತೆರಿಗೆ ನಂತರದ ಲಾಭದ ಶೇ 30 ಅಥವಾ ನಿವ್ವಳ ಮೌಲ್ಯದ ಶೇ 5ರಷ್ಟು ಕನಿಷ್ಠ ವಾರ್ಷಿಕ ಲಾಭಾಂಶವನ್ನು ಪಾವತಿಸಬೇಕಾಗುತ್ತದೆ.

ಅಕ್ಟೋಬರ್​ನಿಂದ ಆರಂಭವಾಗಿ ಡಿಸೆಂಬರ್​ಗೆ ಕೊನೆಯಾಗುವ ತ್ರೈಮಾಸಿಕದಲ್ಲಿ ಎನ್‌ಎಚ್‌ಪಿಸಿ ತನ್ನ ಏಕೀಕೃತ ನಿವ್ವಳ ಲಾಭದಲ್ಲಿ ಸುಮಾರು ಶೇ 7.5ರಷ್ಟು ಕುಸಿತವನ್ನು, ಅಂದರೆ 889 ಕೋಟಿ ರೂಪಾಯಿ ವರದಿ ಮಾಡಿದೆ. 2021ರ ಅಕ್ಟೋಬರ್​ನಿಂದ ಡಿಸೆಂಬರ್​ನಲ್ಲಿ ಒಟ್ಟು ಆದಾಯ ರೂ. 2,373.72 ಕೋಟಿ ದಾಖಲಿಸಿದೆ.

ಇದನ್ನೂ ಓದಿ: ಕೋಲ್ ಇಂಡಿಯಾ ಮತ್ತು ಇತರ ಪಿಎಸ್​ಯುಗಳಿಂದ ಕೇಂದ್ರ ಸರ್ಕಾರಕ್ಕೆ ಬಂಪರ್ ಡಿವಿಡೆಂಡ್

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು