AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Banks: ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ರಿಂದ ಅವಲೋಕನ

Nirmala Sitharaman Chairs Meeting With PSBs: ವಿವಿಧ ಹಣಕಾಸು ಮಾನದಂಡಗಳ ವಿಚಾರದಲ್ಲಿ ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ ಎಂದು ಅವಲೋಕಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆ ನಡೆಸಿದ್ದಾರೆ.

Govt Banks: ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ರಿಂದ ಅವಲೋಕನ
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 07, 2023 | 12:16 PM

Share

ನವದೆಹಲಿ: ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ (Public Sector Banks) ಕಾರ್ಯಸಾಧನೆ ಹೇಗಿದೆ ಎಂದು ಪರಾಮರ್ಶಿಸಲು ಕೆಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 6ರಂದು ಸಭೆ ನಡೆಸಿದರು. ಮ್ಯಾಕ್ರೋ ಟ್ರೆಂಡ್​ಗಳು ಹೇಗಿವೆ, ಬ್ಯುಸಿನೆಸ್ ಸೆಂಟಿಮೆಂಟ್​ಗಳು ಎಷ್ಟು ಉತ್ತಮಗೊಂಡಿವೆ, ಟ್ವಿನ್ ಬ್ಯಾಲೆನ್ಸ್ ಶೀಟ್ ಅನುಕೂಲತೆ ಎಷ್ಟಿದೆ ಇವೇ ಮುಂತಾದ ಹಣಕಾಸು ಆರೋಗ್ಯ ಮಾನದಂಡಗಳ ವಿಚಾರದ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು. ಹಣಕಾಸ ಸಚಿವೆಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 12 ಸರ್ಕಾರಿ ಬ್ಯಾಂಕುಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು. ಪ್ರಾಧಿಕಾರದ ನಿಯಮಗಳಿಗೆ ಬದ್ಧವಾಗಿ ಬ್ಯಾಂಕುಗಳು ರಿಸ್ಕ್ ಮ್ಯಾನೇಜ್ಮೆಂಟ್ ಹಾಗೂ ವ್ಯವಹಾರ ಬ್ಯುಸಿನೆಸ್ ಬೇಸ್ ಹೆಚ್ಚಿಸಲು ಗಮನ ವಹಿಸಬೇಕು ಎಂದು ಈ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಸೂಚಿಸಿದರೆನ್ನಲಾಗಿದೆ.

ಜಾಗತಿಕ ಬ್ಯಾಂಕಿಂಗ್ ಸೆಕ್ಟರ್ ಬೆಳವಣಿಗೆಗಳು ಹಿನ್ನಡೆ ತರುತ್ತಿದ್ದರೂ ಭಾರತದಲ್ಲಿ ವ್ಯಾವಹಾರಿಕ ನೋಟ ಉತ್ತಮ ಸ್ಥಿತಿಯಲ್ಲಿದೆ. ಅದ್ಯತಾ ವಲಯಕ್ಕೆ ಕೊಡಲಾಗುವ ಸಾಲವು ನಿಗದಿತ ಗುರಿಯನ್ನು ಮೀರಿದೆ. ಸಣ್ಣ ಹಾಗೂ ಅತಿಸಣ್ಣ ರೈತರು, ಕಿರು ಉದ್ದಿಮೆಗಳೂ ಸೇರಿದಂತೆ ಉಪ ವಿಭಾಗಗಳಲ್ಲೂ ಈ ಸಾಲದ ಗುರಿ ಮುಟ್ಟಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರಿ ಬ್ಯಾಂಕ್​ಗಳ ಮುಖ್ಯಸ್ಥರಿಗೆ ತಿಳಿಸಿದರು.

ಇದನ್ನೂ ಓದಿDigital Economy: ಡಿಜಿಟಲ್ ಇಂಡಿಯಾ ಏನು ಫಲಕೊಟ್ಟಿದೆ? ಡಿಜಿಟಲ್ ಎಕನಾಮಿ ಎಷ್ಟಿದೆ?; ಅಮೂಲಾಗ್ರ ಅಧ್ಯಯನಕ್ಕೆ ಸರ್ಕಾರ ಮುಂದು?

ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ ಸಾಲದ ಗುಣಮಟ್ಟ ಉತ್ತಮಗೊಂಡಿದೆ. ಒಟ್ಟು ಅನುತ್ಪಾದಕ ಸಾಲ (ಗ್ರಾಸ್ ಎನ್​ಪಿಎ) ಶೇ. 4.97 ಇದೆ. ನಿವ್ವಳ ಎನ್​ಪಿಎ ಶೇ. 1.24ಕ್ಕೆ ಇಳಿದಿದೆ. ಕಳೆದ ಹಣಕಾಸು ವರ್ಷದಲ್ಲಿ ಸರ್ಕಾರಿ ಬ್ಯಾಂಕುಗಳು 1.05 ಲಕ್ಷ ಕೋಟಿ ರೂನಷ್ಟು ನಿವ್ವಳ ಲಾಭ ಪಡೆದಿದ್ದವು ಎಂಬ ಸಂಗತಿಯನ್ನು ಈ ಸಭೆಯ ಮುಂದಿಟ್ಟರು ಸಚಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ