AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Banks: ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ರಿಂದ ಅವಲೋಕನ

Nirmala Sitharaman Chairs Meeting With PSBs: ವಿವಿಧ ಹಣಕಾಸು ಮಾನದಂಡಗಳ ವಿಚಾರದಲ್ಲಿ ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ ಎಂದು ಅವಲೋಕಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆ ನಡೆಸಿದ್ದಾರೆ.

Govt Banks: ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ರಿಂದ ಅವಲೋಕನ
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 07, 2023 | 12:16 PM

Share

ನವದೆಹಲಿ: ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ (Public Sector Banks) ಕಾರ್ಯಸಾಧನೆ ಹೇಗಿದೆ ಎಂದು ಪರಾಮರ್ಶಿಸಲು ಕೆಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 6ರಂದು ಸಭೆ ನಡೆಸಿದರು. ಮ್ಯಾಕ್ರೋ ಟ್ರೆಂಡ್​ಗಳು ಹೇಗಿವೆ, ಬ್ಯುಸಿನೆಸ್ ಸೆಂಟಿಮೆಂಟ್​ಗಳು ಎಷ್ಟು ಉತ್ತಮಗೊಂಡಿವೆ, ಟ್ವಿನ್ ಬ್ಯಾಲೆನ್ಸ್ ಶೀಟ್ ಅನುಕೂಲತೆ ಎಷ್ಟಿದೆ ಇವೇ ಮುಂತಾದ ಹಣಕಾಸು ಆರೋಗ್ಯ ಮಾನದಂಡಗಳ ವಿಚಾರದ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು. ಹಣಕಾಸ ಸಚಿವೆಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 12 ಸರ್ಕಾರಿ ಬ್ಯಾಂಕುಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು. ಪ್ರಾಧಿಕಾರದ ನಿಯಮಗಳಿಗೆ ಬದ್ಧವಾಗಿ ಬ್ಯಾಂಕುಗಳು ರಿಸ್ಕ್ ಮ್ಯಾನೇಜ್ಮೆಂಟ್ ಹಾಗೂ ವ್ಯವಹಾರ ಬ್ಯುಸಿನೆಸ್ ಬೇಸ್ ಹೆಚ್ಚಿಸಲು ಗಮನ ವಹಿಸಬೇಕು ಎಂದು ಈ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಸೂಚಿಸಿದರೆನ್ನಲಾಗಿದೆ.

ಜಾಗತಿಕ ಬ್ಯಾಂಕಿಂಗ್ ಸೆಕ್ಟರ್ ಬೆಳವಣಿಗೆಗಳು ಹಿನ್ನಡೆ ತರುತ್ತಿದ್ದರೂ ಭಾರತದಲ್ಲಿ ವ್ಯಾವಹಾರಿಕ ನೋಟ ಉತ್ತಮ ಸ್ಥಿತಿಯಲ್ಲಿದೆ. ಅದ್ಯತಾ ವಲಯಕ್ಕೆ ಕೊಡಲಾಗುವ ಸಾಲವು ನಿಗದಿತ ಗುರಿಯನ್ನು ಮೀರಿದೆ. ಸಣ್ಣ ಹಾಗೂ ಅತಿಸಣ್ಣ ರೈತರು, ಕಿರು ಉದ್ದಿಮೆಗಳೂ ಸೇರಿದಂತೆ ಉಪ ವಿಭಾಗಗಳಲ್ಲೂ ಈ ಸಾಲದ ಗುರಿ ಮುಟ್ಟಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರಿ ಬ್ಯಾಂಕ್​ಗಳ ಮುಖ್ಯಸ್ಥರಿಗೆ ತಿಳಿಸಿದರು.

ಇದನ್ನೂ ಓದಿDigital Economy: ಡಿಜಿಟಲ್ ಇಂಡಿಯಾ ಏನು ಫಲಕೊಟ್ಟಿದೆ? ಡಿಜಿಟಲ್ ಎಕನಾಮಿ ಎಷ್ಟಿದೆ?; ಅಮೂಲಾಗ್ರ ಅಧ್ಯಯನಕ್ಕೆ ಸರ್ಕಾರ ಮುಂದು?

ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ ಸಾಲದ ಗುಣಮಟ್ಟ ಉತ್ತಮಗೊಂಡಿದೆ. ಒಟ್ಟು ಅನುತ್ಪಾದಕ ಸಾಲ (ಗ್ರಾಸ್ ಎನ್​ಪಿಎ) ಶೇ. 4.97 ಇದೆ. ನಿವ್ವಳ ಎನ್​ಪಿಎ ಶೇ. 1.24ಕ್ಕೆ ಇಳಿದಿದೆ. ಕಳೆದ ಹಣಕಾಸು ವರ್ಷದಲ್ಲಿ ಸರ್ಕಾರಿ ಬ್ಯಾಂಕುಗಳು 1.05 ಲಕ್ಷ ಕೋಟಿ ರೂನಷ್ಟು ನಿವ್ವಳ ಲಾಭ ಪಡೆದಿದ್ದವು ಎಂಬ ಸಂಗತಿಯನ್ನು ಈ ಸಭೆಯ ಮುಂದಿಟ್ಟರು ಸಚಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ