Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Banks: ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ರಿಂದ ಅವಲೋಕನ

Nirmala Sitharaman Chairs Meeting With PSBs: ವಿವಿಧ ಹಣಕಾಸು ಮಾನದಂಡಗಳ ವಿಚಾರದಲ್ಲಿ ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ ಎಂದು ಅವಲೋಕಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆ ನಡೆಸಿದ್ದಾರೆ.

Govt Banks: ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ರಿಂದ ಅವಲೋಕನ
ನಿರ್ಮಲಾ ಸೀತಾರಾಮನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 07, 2023 | 12:16 PM

ನವದೆಹಲಿ: ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ (Public Sector Banks) ಕಾರ್ಯಸಾಧನೆ ಹೇಗಿದೆ ಎಂದು ಪರಾಮರ್ಶಿಸಲು ಕೆಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 6ರಂದು ಸಭೆ ನಡೆಸಿದರು. ಮ್ಯಾಕ್ರೋ ಟ್ರೆಂಡ್​ಗಳು ಹೇಗಿವೆ, ಬ್ಯುಸಿನೆಸ್ ಸೆಂಟಿಮೆಂಟ್​ಗಳು ಎಷ್ಟು ಉತ್ತಮಗೊಂಡಿವೆ, ಟ್ವಿನ್ ಬ್ಯಾಲೆನ್ಸ್ ಶೀಟ್ ಅನುಕೂಲತೆ ಎಷ್ಟಿದೆ ಇವೇ ಮುಂತಾದ ಹಣಕಾಸು ಆರೋಗ್ಯ ಮಾನದಂಡಗಳ ವಿಚಾರದ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು. ಹಣಕಾಸ ಸಚಿವೆಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 12 ಸರ್ಕಾರಿ ಬ್ಯಾಂಕುಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು. ಪ್ರಾಧಿಕಾರದ ನಿಯಮಗಳಿಗೆ ಬದ್ಧವಾಗಿ ಬ್ಯಾಂಕುಗಳು ರಿಸ್ಕ್ ಮ್ಯಾನೇಜ್ಮೆಂಟ್ ಹಾಗೂ ವ್ಯವಹಾರ ಬ್ಯುಸಿನೆಸ್ ಬೇಸ್ ಹೆಚ್ಚಿಸಲು ಗಮನ ವಹಿಸಬೇಕು ಎಂದು ಈ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಸೂಚಿಸಿದರೆನ್ನಲಾಗಿದೆ.

ಜಾಗತಿಕ ಬ್ಯಾಂಕಿಂಗ್ ಸೆಕ್ಟರ್ ಬೆಳವಣಿಗೆಗಳು ಹಿನ್ನಡೆ ತರುತ್ತಿದ್ದರೂ ಭಾರತದಲ್ಲಿ ವ್ಯಾವಹಾರಿಕ ನೋಟ ಉತ್ತಮ ಸ್ಥಿತಿಯಲ್ಲಿದೆ. ಅದ್ಯತಾ ವಲಯಕ್ಕೆ ಕೊಡಲಾಗುವ ಸಾಲವು ನಿಗದಿತ ಗುರಿಯನ್ನು ಮೀರಿದೆ. ಸಣ್ಣ ಹಾಗೂ ಅತಿಸಣ್ಣ ರೈತರು, ಕಿರು ಉದ್ದಿಮೆಗಳೂ ಸೇರಿದಂತೆ ಉಪ ವಿಭಾಗಗಳಲ್ಲೂ ಈ ಸಾಲದ ಗುರಿ ಮುಟ್ಟಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರಿ ಬ್ಯಾಂಕ್​ಗಳ ಮುಖ್ಯಸ್ಥರಿಗೆ ತಿಳಿಸಿದರು.

ಇದನ್ನೂ ಓದಿDigital Economy: ಡಿಜಿಟಲ್ ಇಂಡಿಯಾ ಏನು ಫಲಕೊಟ್ಟಿದೆ? ಡಿಜಿಟಲ್ ಎಕನಾಮಿ ಎಷ್ಟಿದೆ?; ಅಮೂಲಾಗ್ರ ಅಧ್ಯಯನಕ್ಕೆ ಸರ್ಕಾರ ಮುಂದು?

ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ ಸಾಲದ ಗುಣಮಟ್ಟ ಉತ್ತಮಗೊಂಡಿದೆ. ಒಟ್ಟು ಅನುತ್ಪಾದಕ ಸಾಲ (ಗ್ರಾಸ್ ಎನ್​ಪಿಎ) ಶೇ. 4.97 ಇದೆ. ನಿವ್ವಳ ಎನ್​ಪಿಎ ಶೇ. 1.24ಕ್ಕೆ ಇಳಿದಿದೆ. ಕಳೆದ ಹಣಕಾಸು ವರ್ಷದಲ್ಲಿ ಸರ್ಕಾರಿ ಬ್ಯಾಂಕುಗಳು 1.05 ಲಕ್ಷ ಕೋಟಿ ರೂನಷ್ಟು ನಿವ್ವಳ ಲಾಭ ಪಡೆದಿದ್ದವು ಎಂಬ ಸಂಗತಿಯನ್ನು ಈ ಸಭೆಯ ಮುಂದಿಟ್ಟರು ಸಚಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ