AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Banks: ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ರಿಂದ ಅವಲೋಕನ

Nirmala Sitharaman Chairs Meeting With PSBs: ವಿವಿಧ ಹಣಕಾಸು ಮಾನದಂಡಗಳ ವಿಚಾರದಲ್ಲಿ ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ ಎಂದು ಅವಲೋಕಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆ ನಡೆಸಿದ್ದಾರೆ.

Govt Banks: ಸರ್ಕಾರಿ ಬ್ಯಾಂಕುಗಳ ಕಾರ್ಯಸಾಧನೆ ಹೇಗಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ರಿಂದ ಅವಲೋಕನ
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 07, 2023 | 12:16 PM

Share

ನವದೆಹಲಿ: ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ (Public Sector Banks) ಕಾರ್ಯಸಾಧನೆ ಹೇಗಿದೆ ಎಂದು ಪರಾಮರ್ಶಿಸಲು ಕೆಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 6ರಂದು ಸಭೆ ನಡೆಸಿದರು. ಮ್ಯಾಕ್ರೋ ಟ್ರೆಂಡ್​ಗಳು ಹೇಗಿವೆ, ಬ್ಯುಸಿನೆಸ್ ಸೆಂಟಿಮೆಂಟ್​ಗಳು ಎಷ್ಟು ಉತ್ತಮಗೊಂಡಿವೆ, ಟ್ವಿನ್ ಬ್ಯಾಲೆನ್ಸ್ ಶೀಟ್ ಅನುಕೂಲತೆ ಎಷ್ಟಿದೆ ಇವೇ ಮುಂತಾದ ಹಣಕಾಸು ಆರೋಗ್ಯ ಮಾನದಂಡಗಳ ವಿಚಾರದ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು. ಹಣಕಾಸ ಸಚಿವೆಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 12 ಸರ್ಕಾರಿ ಬ್ಯಾಂಕುಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು. ಪ್ರಾಧಿಕಾರದ ನಿಯಮಗಳಿಗೆ ಬದ್ಧವಾಗಿ ಬ್ಯಾಂಕುಗಳು ರಿಸ್ಕ್ ಮ್ಯಾನೇಜ್ಮೆಂಟ್ ಹಾಗೂ ವ್ಯವಹಾರ ಬ್ಯುಸಿನೆಸ್ ಬೇಸ್ ಹೆಚ್ಚಿಸಲು ಗಮನ ವಹಿಸಬೇಕು ಎಂದು ಈ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಸೂಚಿಸಿದರೆನ್ನಲಾಗಿದೆ.

ಜಾಗತಿಕ ಬ್ಯಾಂಕಿಂಗ್ ಸೆಕ್ಟರ್ ಬೆಳವಣಿಗೆಗಳು ಹಿನ್ನಡೆ ತರುತ್ತಿದ್ದರೂ ಭಾರತದಲ್ಲಿ ವ್ಯಾವಹಾರಿಕ ನೋಟ ಉತ್ತಮ ಸ್ಥಿತಿಯಲ್ಲಿದೆ. ಅದ್ಯತಾ ವಲಯಕ್ಕೆ ಕೊಡಲಾಗುವ ಸಾಲವು ನಿಗದಿತ ಗುರಿಯನ್ನು ಮೀರಿದೆ. ಸಣ್ಣ ಹಾಗೂ ಅತಿಸಣ್ಣ ರೈತರು, ಕಿರು ಉದ್ದಿಮೆಗಳೂ ಸೇರಿದಂತೆ ಉಪ ವಿಭಾಗಗಳಲ್ಲೂ ಈ ಸಾಲದ ಗುರಿ ಮುಟ್ಟಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರಿ ಬ್ಯಾಂಕ್​ಗಳ ಮುಖ್ಯಸ್ಥರಿಗೆ ತಿಳಿಸಿದರು.

ಇದನ್ನೂ ಓದಿDigital Economy: ಡಿಜಿಟಲ್ ಇಂಡಿಯಾ ಏನು ಫಲಕೊಟ್ಟಿದೆ? ಡಿಜಿಟಲ್ ಎಕನಾಮಿ ಎಷ್ಟಿದೆ?; ಅಮೂಲಾಗ್ರ ಅಧ್ಯಯನಕ್ಕೆ ಸರ್ಕಾರ ಮುಂದು?

ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ ಸಾಲದ ಗುಣಮಟ್ಟ ಉತ್ತಮಗೊಂಡಿದೆ. ಒಟ್ಟು ಅನುತ್ಪಾದಕ ಸಾಲ (ಗ್ರಾಸ್ ಎನ್​ಪಿಎ) ಶೇ. 4.97 ಇದೆ. ನಿವ್ವಳ ಎನ್​ಪಿಎ ಶೇ. 1.24ಕ್ಕೆ ಇಳಿದಿದೆ. ಕಳೆದ ಹಣಕಾಸು ವರ್ಷದಲ್ಲಿ ಸರ್ಕಾರಿ ಬ್ಯಾಂಕುಗಳು 1.05 ಲಕ್ಷ ಕೋಟಿ ರೂನಷ್ಟು ನಿವ್ವಳ ಲಾಭ ಪಡೆದಿದ್ದವು ಎಂಬ ಸಂಗತಿಯನ್ನು ಈ ಸಭೆಯ ಮುಂದಿಟ್ಟರು ಸಚಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್