AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2024: ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಪಾಲಾಗಲಿವೆ ಹಲವು ದಾಖಲೆಗಳು, ಇಲ್ಲಿದೆ ವಿವರ

ಕೇಂದ್ರ ಬಜೆಟ್ 2024: ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡಿಸುವುದರೊಂದಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಜಿ ಹಣಕಾಸು ಸಚಿವರಾದ ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ ಚಿದಂಬರಂ ಮತ್ತು ಯಶವಂತ್ ಸಿನ್ಹಾ ಅವರ ದಾಖಲೆಗಳನ್ನು ಹಿಂದಿಕ್ಕಲಿದ್ದಾರೆ. ಅಲ್ಲದೆ, ಇನ್ನೂ ಕೆಲವು ದಾಖಲೆಗಳನ್ನು ನಿರ್ಮಿಸಲಿದ್ದಾರೆ. ಅವುಗಳ ವಿವರ ಇಲ್ಲಿದೆ.

Union Budget 2024: ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಪಾಲಾಗಲಿವೆ ಹಲವು ದಾಖಲೆಗಳು, ಇಲ್ಲಿದೆ ವಿವರ
ನಿರ್ಮಲಾ ಸೀತಾರಾಮನ್
ಗಣಪತಿ ಶರ್ಮಾ
|

Updated on: Jan 27, 2024 | 6:01 PM

Share

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರವರಿ 1 ರಂದು ಸತತ ಆರನೇ ಬಜೆಟ್ (Union Budget 2024) ಮಂಡಿಸಲಿದ್ದಾರೆ. ಇದರೊಂದಿಗೆ ಹಲವು ದಾಖಲೆಗಳು ಅವರ ಪಾಲಾಗಲಿವೆ. ಅವರು ಸತತ ಐದು ಪೂರ್ಣ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಅಲ್ಲದೆ, ಸೀತಾರಾಮನ್ ಅವರು ಜುಲೈ 2019 ರಿಂದ ಐದು ಪೂರ್ಣ ಬಜೆಟ್‌ಗಳನ್ನು ಮಂಡಿಸಿದ್ದಾರೆ. ಸತತ ಐದು ಬಾರಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಸಚಿವರಾಗಿದ್ದಾರೆ.

ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡಿಸುವುದರೊಂದಿಗೆ ನಿರ್ಮಲಾ ಸೀತಾರಾಮನ್ ಮಾಜಿ ಹಣಕಾಸು ಸಚಿವರಾದ ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ ಚಿದಂಬರಂ ಮತ್ತು ಯಶವಂತ್ ಸಿನ್ಹಾ ಅವರ ದಾಖಲೆಗಳನ್ನು ಹಿಂದಿಕ್ಕಲಿದ್ದಾರೆ. ಈ ನಾಯಕರು ಸತತ ಐದು ಬಜೆಟ್ ಮಂಡಿಸಿದ್ದರು. ಹಣಕಾಸು ಮಂತ್ರಿಯಾಗಿ, ದೇಸಾಯಿ 1959-1964 ರ ನಡುವೆ ಐದು ವಾರ್ಷಿಕ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು. ಫೆಬ್ರವರಿ 1 ರಂದು ಮಂಡಿಸಲಿರುವ 2024-25 ರ ಹಣಕಾಸು ವರ್ಷದ ಮಧ್ಯಂತರ ಬಜೆಟ್ ಏಪ್ರಿಲ್-ಮೇನಲ್ಲಿ ಲೋಕಸಭೆ ಚುನಾವಣೆಯ ನಂತರ ಹೊಸ ಸರ್ಕಾರ ರಚನೆಯಾಗುವವರೆಗೆ ಕೆಲವು ವಸ್ತುಗಳ ಮೇಲೆ ಖರ್ಚು ಮಾಡುವ ಹಕ್ಕನ್ನು ಸರ್ಕಾರಕ್ಕೆ ನೀಡುತ್ತದೆ.

ಪ್ರಮುಖ ಘೋಷಣೆ ಅನುಮಾನ

ಲೋಕಸಭೆ ಚುನಾವಣೆಗಳು ನಡೆಯಲಿರುವ ಕಾರಣ, ಸೀತಾರಾಮನ್ ಅವರ ಮಧ್ಯಂತರ ಬಜೆಟ್‌ನಲ್ಲಿ ಯಾವುದೇ ಪ್ರಮುಖ ನೀತಿ ಬದಲಾವಣೆ, ಪ್ರಮುಖ ಯೋಜನೆಗಳ ಘೋಷಣೆ ಸಾಧ್ಯತೆ ಕಡಿಮೆಯಾಗಿದೆ. ಮಧ್ಯಂತರ ಬಜೆಟ್‌ನಲ್ಲಿ ಯಾವುದೇ ಪ್ರಮುಖ ಘೋಷಣೆ ಮಾಡುವುದನ್ನು ಕಳೆದ ತಿಂಗಳು ನಡೆದ ಕಾರ್ಯಕ್ರಮವೊಂದರಲ್ಲಿ ಹಣಕಾಸು ಸಚಿವರು ನಿರಾಕರಿಸಿದ್ದರು.

ಲೋಕಸಭೆ ಚುನಾವಣೆಯ ನಂತರ, ಜೂನ್‌ನಲ್ಲಿ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ಹೊಸ ಸರ್ಕಾರವು ಜುಲೈನಲ್ಲಿ 2024-25 ರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ. ಸಾಮಾನ್ಯವಾಗಿ, ಮಧ್ಯಂತರ ಬಜೆಟ್ ಪ್ರಮುಖ ನೀತಿ ಘೋಷಣೆಗಳನ್ನು ಒಳಗೊಂಡಿರುವುದಿಲ್ಲ, ಆದರೆ ಆರ್ಥಿಕತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಎದುರಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ಸರ್ಕಾರಕ್ಕೆ ಯಾವುದೇ ನಿರ್ಬಂಧವಿಲ್ಲ.

ಐದು ಬಜೆಟ್ ಮಂಡಿಸಿದ್ದ ಅರುಣ್ ಜೇಟ್ಲಿ

2014 ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅರುಣ್ ಜೇಟ್ಲಿ ಅವರು ಹಣಕಾಸು ಸಚಿವಾಲಯದ ಜವಾಬ್ದಾರಿಯನ್ನು ವಹಿಸಿಕೊಂಡರು ಮತ್ತು 2014-15 ರಿಂದ 2018-19 ರವರೆಗೆ ಸತತ ಐದು ಬಜೆಟ್​​ಗಳನ್ನು ಮಂಡಿಸಿದ್ದರು. 2017 ರಲ್ಲಿ, ಫೆಬ್ರವರಿ ಒಂದರಂದೇ ಬಜೆಟ್ ಮಂಡಿಸಲು ಸರ್ಕಾರ ನಿರ್ಧರಿಸಿತು.

ಜೇಟ್ಲಿ ಅವರ ಅನಾರೋಗ್ಯದ ಕಾರಣ, ಹೆಚ್ಚುವರಿಯಾಗಿ ಸಚಿವಾಲಯದ ಜವಾಬ್ದಾರಿಯನ್ನು ಹೊತ್ತಿದ್ದ ಪಿಯೂಷ್ ಗೋಯಲ್ ಅವರು 2019 ರ ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಅನ್ನು ಮಂಡಿಸಿದರು. ಗೋಯಲ್ ಅವರು ವೇತನ ಸಹಿತ ತೆರಿಗೆದಾರರಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿಯನ್ನು 10,000 ರೂ.ನಿಂದ 50,000 ರೂ.ಗೆ ಹೆಚ್ಚಿಸಿದ್ದರು. ಅಲ್ಲದೆ, ವಾರ್ಷಿಕ ತೆರಿಗೆಗೆ ಒಳಪಡುವ ಆದಾಯ 5 ಲಕ್ಷ ರೂಪಾಯಿ ಮೀರದ ತೆರಿಗೆದಾರರಿಗೆ ತೆರಿಗೆ ವಿನಾಯಿತಿ ಮಿತಿಯನ್ನು 2,500 ರಿಂದ 12,500 ಕ್ಕೆ ಹೆಚ್ಚಿಸಿದ್ದರು.

ಇಂದಿರಾ ಗಾಂಧಿ ನಂತರದ ಮಹಿಳಾ ಹಣಕಾಸು ಸಚಿವೆ

2019 ರ ಸಾರ್ವತ್ರಿಕ ಚುನಾವಣೆಯ ನಂತರ ಎರಡನೇ ಅವಧಿಯಲ್ಲಿ ಸೀತಾರಾಮನ್ ಅವರಿಗೆ ಹಣಕಾಸು ಇಲಾಖೆಯ ಜವಾಬ್ದಾರಿಯನ್ನು ಮೋದಿ ಸರ್ಕಾರ ವಹಿಸಿತು. ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ನಂತರ ಬಜೆಟ್ ಮಂಡಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಸೀತಾರಾಮನ್ ಪಾತ್ರರಾದರು. ಇಂದಿರಾ ಗಾಂಧಿಯವರು 1970-71ರ ಆರ್ಥಿಕ ವರ್ಷದ ಬಜೆಟ್ ಮಂಡಿಸಿದ್ದರು.

ಒಟ್ಟು 10 ಬಾರಿ ಬಜೆಟ್ ಮಂಡಿಸಿದ್ದ ಮೊರಾರ್ಜಿ ದೇಸಾಯಿ

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಗರಿಷ್ಠ 10 ಬಾರಿ ಬಜೆಟ್ ಮಂಡಿಸಿದ್ದಾರೆ. ದೇಶದ ಈವರೆಗಿನ ಹಣಕಾಸು ಸಚಿವರ ಪೈಕಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಇವರದ್ದಾಗಿದೆ. ಇದರಲ್ಲಿ, ಸತತ ಐದು ಪೂರ್ಣ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಸ್ವತಂತ್ರ ಭಾರತದ ಮೊದಲ ಬಜೆಟ್ ಅನ್ನು ಮೊದಲ ಹಣಕಾಸು ಸಚಿವ ಆರ್ ಕೆ ಷಣ್ಮುಖಂ ಚೆಟ್ಟಿ ಮಂಡಿಸಿದ್ದರು.

ಇದನ್ನೂ ಓದಿ: ಬಜೆಟ್ ಪದ ಬಳಕೆ ಆರಂಭವಾಗಿದ್ದು ಹೇಗೆ? ಆಯವ್ಯಯದ ಬಗ್ಗೆ ಇಲ್ಲಿದೆ ಆಸಕ್ತಿದಾಯಕ ಮಾಹಿತಿ

ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಆರನೇ ಬಜೆಟ್ ಅನ್ನು ಮಂಡಿಸುತ್ತಿದ್ದು, ಗ್ರಾಮೀಣ ಪ್ರದೇಶಗಳನ್ನು ಉತ್ತೇಜಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಭಾರತವು 2027-28ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಮತ್ತು 2047 ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯೊಂದಿಗೆ ಮುನ್ನಡೆಯುತ್ತಿದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!