AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ಜುಲೈನಲ್ಲಿ ಮತ್ತೆ 1 ಲಕ್ಷ ಕೋಟಿ ರೂ. ದಾಟಿದ ಜಿಎಸ್​ಟಿ ಸಂಗ್ರಹ; ಚೇತರಿಕೆಯತ್ತ ಆರ್ಥಿಕತೆ ಎಂದ ನಿರ್ಮಲಾ

ಜುಲೈ ತಿಂಗಳಲ್ಲಿ ಜಿಎಸ್​ಟಿ ಆದಾಯ ಸಂಗ್ರಹ 1 ಲಕ್ಷ ಕೋಟಿ ರೂಪಾಯಿಯನ್ನು ದಾಟಿದ ಮೇಲೆ ಭಾರತದ ಆರ್ಥಿಕತೆಯ ಚೇತರಿಕೆ ವೇಗವನ್ನು ಪಡೆದುಕೊಂಡಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Nirmala Sitharaman: ಜುಲೈನಲ್ಲಿ ಮತ್ತೆ 1 ಲಕ್ಷ ಕೋಟಿ ರೂ. ದಾಟಿದ ಜಿಎಸ್​ಟಿ ಸಂಗ್ರಹ; ಚೇತರಿಕೆಯತ್ತ ಆರ್ಥಿಕತೆ ಎಂದ ನಿರ್ಮಲಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 02, 2021 | 11:45 AM

Share

ಕೊವಿಡ್-19 ನಿರ್ಬಂಧಗಳನ್ನು ಸಡಿಲಗೊಳಿಸುತ್ತಿದ್ದಂತೆ 2021ರ ಜುಲೈ ತಿಂಗಳಲ್ಲಿ ಮತ್ತೆ ಜಿಎಸ್​ಟಿ (GST) ಸಂಗ್ರಹವು 1 ಲಕ್ಷ ಕೋಟಿ ರೂಪಾಯಿ ದಾಟಿದೆ. ಆರ್ಥಿಕತೆಯು ತುಂಬ ವೇಗವಾಗಿ ಚೇತರಿಕೆ ಕಾಣುತ್ತಿರುವ ಸೂಚನೆ ಇದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಭಾನುವಾರ ಅಭಿಪ್ರಾಯ ಪಟ್ಟಿದ್ದಾರೆ. ಜಿಎಸ್​ಟಿ ಸಂಗ್ರಹ ಪ್ರಮಾಣವು ಮುಂಬರುವ ತಿಂಗಳುಗಳಲ್ಲಿ ಕೂಡ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಟ್ವೀಟ್ ಮೂಲಕ ಹೇಳಿದ್ದಾರೆ. ಜುಲೈ ತಿಂಗಳಲ್ಲಿ 1.16 ಲಕ್ಷ ಕೋಟಿ ರೂಪಾಯಿಯಷ್ಟು ಗ್ರಾಸ್ ಜಿಎಸ್​ಟಿ ಆದಾಯ ಸಂಗ್ರಹ ಆಗಿದೆ. ಅದರಲ್ಲಿ ಸಿಜಿಎಸ್ಟಿ 22,197 ಕೋಟಿ ರೂಪಾಯಿ, ಎಸ್​ಜಿಎಸ್​ಟಿ ರೂ. 28,541 ಕೋಟಿ ರೂಪಾಯಿ, ಐಜಿಎಸ್​ಟಿ 57,864 ಕೋಟಿ ರೂ. ಮತ್ತು ಸೆಸ್ 7,790 ಕೋಟಿ ರೂ. (815 ಕೋಟಿ ರೂ. ಆಮದು ವಸ್ತುಗಳ ಮೇಲೆ ಸಂಗ್ರಹವಾದದ್ದು ಒಳಗೊಂಡಿದೆ) ಎಂದು ಹಣಕಾಸು ಸಚಿವಾಲಯದಿಂದ ಮಾಹಿತಿ ನೀಡಲಾಗಿದೆ.

ಈ ಅಂಕಿ-ಅಂಶಗಳು ಜುಲೈ 1ರಿಂದ 31ರ ಮಧ್ಯೆ ಫೈಕ್​ ಆದ GSTR-3B ರಿಟರ್ನ್ಸ್​ನಿಂದ ಸಂಗ್ರಹವಾದದ್ದನ್ನೂ ಒಳಗೊಂಡಿದೆ. ಜತೆಗೆ ಇದೇ ಅವಧಿಯಲ್ಲಿ ಆಮದಿನ ಮೇಲೆ ಸಂಗ್ರಹವಾದ ಐಜಿಎಸ್​ಟಿ ಮತ್ತು ಸೆಸ್​ ಸಹ ಇದೆ. ಜುಲೈ 1ರಿಂದ 5ನೇ ತಾರೀಕಿನ ಮಧ್ಯೆ ರಿಟರ್ನ್ಸ್ ಫೈಲ್ ಆದ 2021ರ ಜೂನ್ ತಿಂಗಳ ಜಿಎಸ್​ಟಿ ಸಂಗ್ರಹವಾದ 4,937 ಕೋಟಿ ರೂಪಾಯಿ ಕೂಡ ಒಳಗೊಂಡಿದೆ.

ಕೊವಿಡ್ ನಿರ್ಬಂಧಗಳು ಸಡಿಲ ಆಗುತ್ತಿದ್ದಂತೆಯೇ 2021ರ ಜುಲೈ ತಿಂಗಳ ಜಿಎಸ್​ಟಿ ಸಂಗ್ರಹ ಮತ್ತೊಮ್ಮೆ 1 ಲಕ್ಷ ಕೋಟಿ ರೂಪಾಯಿಯನ್ನು ದಾಟಿದೆ. ಆರ್ಥಿಕತೆಯು ಬಹಳ ವೇಗವಾಗಿ ಚೇತರಿಸಿಕೊಳ್ಳುತ್ತಿದೆ ಎಂಬುದು ಸೂಚನೆ ಇದು. ಜಿಎಸ್​ಟಿ ಆದಾಯದ ಹೆಚ್ಚಳ ಮುಂಬರುವ ತಿಂಗಳುಗಳಲ್ಲೂ ಮುಂದುವರಿಯುವ ಎಲ್ಲ ಸಾಧ್ಯತೆಗಳಿವೆ ಎಂದು ಹಣಕಾಸು ಸಚಿವಾಲಯವು ತಿಳಿಸಿದೆ. ಅಂದಹಾಗೆ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಜೂನ್ ತಿಂಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಲಾಕ್​ಡೌನ್ ಹೇರಲಾಗಿತ್ತು. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ತಡೆ ಬಿದ್ದು, ಜಿಎಸ್​ಟಿ ಆದಾಯ ಸಂಗ್ರಹಕ್ಕೆ ಹಿನ್ನಡೆ ಆಗಿತ್ತು. ಈಗ ಜುಲೈ ತಿಂಗಳಲ್ಲಿ ಚೇತರಿಕೆ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ.​

ಇದನ್ನೂ ಓದಿ: GST: ಜುಲೈ ತಿಂಗಳಲ್ಲಿ 1,16,393 ಕೋಟಿ ರೂಪಾಯಿ ಒಟ್ಟು ಜಿಎಸ್​ಟಿ ಸಂಗ್ರಹ

(Nirmala Sitharaman Said Indian Economy In Fast Pace Of Recovery After Crossing Rs 1 Lakh Crore GST In July)

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ