AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶೀ ಹೂಡಿಕೆಗಳು ಭಾರತದಿಂದ ಹೊರಹೋಗುತ್ತಿರುವುದು ಯಾಕೆ? ನಿರ್ಮಲಾ ಸೀತಾರಾಮನ್ ಅನಿಸಿಕೆ ಇದು

Nirmala Sitharaman on FII selling spree in Stock Market: ಭಾರತದ ಷೇರು ಮಾರುಕಟ್ಟೆ ಕಳೆದ ಐದಾರು ತಿಂಗಳಿಂದ ಹಿನ್ನಡೆಯಲ್ಲಿದೆ. ವಿದೇಶೀ ಹೂಡಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಹೊರಹೋಗಿವೆ. ನಿರ್ಮಲಾ ಸೀತಾರಾಮನ್ ಪ್ರಕಾರ ಭಾರತದ ಈಕ್ವಿಟಿ ಮಾರುಕಟ್ಟೆಯಿಂದ ಎಫ್​ಐಐಗಳು ಲಾಭ ಮಾಡಿವೆ. 2024ರ ಅಕ್ಟೋಬರ್ ತಿಂಗಳಿಂದ ಎಫ್​ಪಿಐಗಳು ಭಾರತದ ಈಕ್ವಿಟಿಯಲ್ಲಿ 2 ಲಕ್ಷ ಕೋಟಿ ರೂನಷ್ಟು ಹೂಡಿಕೆಗಳನ್ನು ಹಿಂಪಡೆದಿವೆ.

ವಿದೇಶೀ ಹೂಡಿಕೆಗಳು ಭಾರತದಿಂದ ಹೊರಹೋಗುತ್ತಿರುವುದು ಯಾಕೆ? ನಿರ್ಮಲಾ ಸೀತಾರಾಮನ್ ಅನಿಸಿಕೆ ಇದು
ಷೇರು ಮಾರುಕಟ್ಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 18, 2025 | 11:08 AM

Share

ನವದೆಹಲಿ, ಫೆಬ್ರುವರಿ 18: ಭಾರತದ ಈಕ್ವಿಟಿ ಮಾರುಕಟ್ಟೆಯಿಂದ ವಿದೇಶೀ ಹೂಡಿಕೆಗಳು (ಎಫ್​ಐಐ) ಸಾಕಷ್ಟು ಪ್ರಮಾಣದಲ್ಲಿ ಹೊರಹೋಗುತ್ತಿವೆ. ತಿಂಗಳುಗಳಿಂದಲೂ ಇದು ನಿರಂತರವಾಗಿ ನಡೆಯುತ್ತಿದೆ. ಜಾಗತಿಕ ರಾಜಕೀಯ ಅಸ್ಥಿರತೆ, ಅಮೆರಿಕದ ಹೊಸ ಸರ್ಕಾರದ ಹೊಸ ನೀತಿ, ಭಾರತೀಯ ಮಾರುಕಟ್ಟೆಯ ಅತಿಯಾದ ಮೌಲ್ಯ ಇತ್ಯಾದಿ ಕಾರಣಗಳು ಕೇಳಿಬರುತ್ತಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಈ ಎಫ್​ಐಐ ನಿರ್ಗಮನ ಕುರಿತು ಮಾತನಾಡಿದ್ದು, ಎಫ್​ಐಐಗಳು ಹೂಡಿಕೆ ಹಿಂಪಡೆದು ಲಾಭ ಮಾಡಿಕೊಳ್ಳುತ್ತಿವೆ. ಭಾರತೀಯ ಮಾರುಕಟ್ಟೆ ಲಾಭದಾಯಕ ಎನಿಸಿದೆ ಎಂದು ವಿಶ್ಲೇಷಿಸಿದ್ದಾರೆ.

ನಿನ್ನೆ ಸೋಮವಾರ ಬಜೆಟ್ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ನಿರ್ಮಲಾ ಸೀತಾರಾಮನ್, ಭಾರತದ ಆರ್ಥಿಕತೆಯು ಹೂಡಿಕೆದಾರರಿಗೆ ಆಕರ್ಷಕ ಲಾಭ ನೀಡುತ್ತಿದೆ. ಎಫ್​ಐಐಗಳು ಷೇರುಗಳನ್ನು ಮಾರಿ ಲಾಭ ಮಾಡುತ್ತಿರುವುದು ಇದಕ್ಕೆ ಸಾಕ್ಷಿ ಎಂಬುದು ಅವರ ಅನಿಸಿಕೆ.

ಹಣಕಾಸು ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಕೂಡ ಈ ವಿದೇಶೀ ಹೂಡಿಕೆಗಳ ನಿರ್ಗಮನದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಎಫ್​ಪಿಐಗಳ ಚಲನೆಯು ಜಾಗತಿಕ ವಿದ್ಯಮಾನಗಳಿಂದ ಪ್ರಭಾವಿತವಾಗಿವೆ. ಹೂಡಿಕೆದಾರರು ಒಂದು ಉದಯೋನ್ಮುಖ ಮಾರುಕಟ್ಟೆ ತೊರೆದು ಬೇರೆ ಉದಯೋನ್ಮುಖ ಮಾರುಕಟ್ಟೆಗಳತ್ತ ಹೋಗುತ್ತಿದ್ದಾರೆ ಎಂಬುದು ತಪ್ಪು. ಜಾಗತಿಕ ಅನಿಶ್ಚಿತತೆ ಇದ್ದಾಗ ಈ ಹೂಡಿಕೆಗಳು ಅಮೆರಿಕಕ್ಕೆ ವಾಪಸ್ ಹೋಗುವ ಪ್ರವೃತ್ತಿ ಇರುತ್ತದೆ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿಗಳು ಹೇಳಿದ್ದಾರೆ.

ಇದನ್ನೂ ಓದಿ: ಒಂದು ವರ್ಷದೊಳಗೆ ಇನ್ಷೂರೆನ್ಸ್ ಪಾಲಿಸಿ ರದ್ದುಗೊಳಿಸಲು ಸಾಧ್ಯವಾ? ಫ್ರೀಲುಕ್ ಅವಧಿ ವಿಸ್ತರಿಸಲು ಸರ್ಕಾರದ ಯೋಜನೆ

ಭಾರತದ ಸೆನ್ಸೆಕ್ಸ್ ಸೂಚ್ಯಂಕ 2024ರ ಸೆಪ್ಟೆಂಬರ್​ನಲ್ಲಿ ಗರಿಷ್ಠ ಮಟ್ಟಕ್ಕೆ ಹೋಗಿತ್ತು. ತನ್ನ ಆ ಮಟ್ಟದಿಂದ ಅದು ಈಗ ಶೇ. 12ರಷ್ಟು ಇಳಿಮುಖ ಕಂಡಿದೆ. ಚೀನಾ ಸರ್ಕಾರ ಆರ್ಥಿಕ ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್​ಗಳನ್ನು ಘೋಷಿಸಿದಾಗ ಭಾರತದ ಷೇರು ಮಾರುಕಟ್ಟೆಯಿಂದ ವಿದೇಶೀ ಹೂಡಿಕೆಗಳ ಹೊರಹರಿವು ಆರಂಭವಾಗಿದ್ದು ಎನ್ನಲಾಗಿದೆ. 2024ರ ಅಕ್ಟೋಬರ್​ನಿಂದ, ಅಂದರೆ ಕಳೆದ ನಾಲ್ಕೈದು ತಿಂಗಳಿಂದ ವಿದೇಶೀ ಪೋರ್ಟ್​ಫೋಲಿಯೋ ಹೂಡಿಕೆದಾರರು ಭಾರತದ ಷೇರು ಮಾರುಕಟ್ಟೆಯಿಂದ ಎರಡು ಲಕ್ಷ ಕೋಟಿ ರೂ ಹೂಡಿಕೆಯನ್ನು ಹಿಂಪಡೆದಿದ್ದಾರೆ. ಅದರಲ್ಲೂ 2025ರ ಮೊದಲ ಐದಾರು ವಾರದಲ್ಲಿ ಹತ್ತಿರ ಹತ್ತಿರ ಒಂದು ಲಕ್ಷ ಕೋಟಿ ರೂನಷ್ಟು ಹೂಡಿಕೆಗಳು ಹೊರಹೋಗಿವೆ ಎನ್ನುವುದು ಗಮನಾರ್ಹ. ಕಾರ್ಪೊರೇಟ್ ಗಳಿಕೆ ಕುಸಿದಿರುವುದು ಮತ್ತು ಅಮೆರಿಕದ ಹೊಸ ನೀತಿಗಳು ಈ ವರ್ಷದ ವಿದೇಶೀ ಹೂಡಿಕೆಗಳ ಹೊರಹರಿವಿಗೆ ಕಾರಣ ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ