Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶೀ ಹೂಡಿಕೆಗಳು ಭಾರತದಿಂದ ಹೊರಹೋಗುತ್ತಿರುವುದು ಯಾಕೆ? ನಿರ್ಮಲಾ ಸೀತಾರಾಮನ್ ಅನಿಸಿಕೆ ಇದು

Nirmala Sitharaman on FII selling spree in Stock Market: ಭಾರತದ ಷೇರು ಮಾರುಕಟ್ಟೆ ಕಳೆದ ಐದಾರು ತಿಂಗಳಿಂದ ಹಿನ್ನಡೆಯಲ್ಲಿದೆ. ವಿದೇಶೀ ಹೂಡಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಹೊರಹೋಗಿವೆ. ನಿರ್ಮಲಾ ಸೀತಾರಾಮನ್ ಪ್ರಕಾರ ಭಾರತದ ಈಕ್ವಿಟಿ ಮಾರುಕಟ್ಟೆಯಿಂದ ಎಫ್​ಐಐಗಳು ಲಾಭ ಮಾಡಿವೆ. 2024ರ ಅಕ್ಟೋಬರ್ ತಿಂಗಳಿಂದ ಎಫ್​ಪಿಐಗಳು ಭಾರತದ ಈಕ್ವಿಟಿಯಲ್ಲಿ 2 ಲಕ್ಷ ಕೋಟಿ ರೂನಷ್ಟು ಹೂಡಿಕೆಗಳನ್ನು ಹಿಂಪಡೆದಿವೆ.

ವಿದೇಶೀ ಹೂಡಿಕೆಗಳು ಭಾರತದಿಂದ ಹೊರಹೋಗುತ್ತಿರುವುದು ಯಾಕೆ? ನಿರ್ಮಲಾ ಸೀತಾರಾಮನ್ ಅನಿಸಿಕೆ ಇದು
ಷೇರು ಮಾರುಕಟ್ಟೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 18, 2025 | 11:08 AM

ನವದೆಹಲಿ, ಫೆಬ್ರುವರಿ 18: ಭಾರತದ ಈಕ್ವಿಟಿ ಮಾರುಕಟ್ಟೆಯಿಂದ ವಿದೇಶೀ ಹೂಡಿಕೆಗಳು (ಎಫ್​ಐಐ) ಸಾಕಷ್ಟು ಪ್ರಮಾಣದಲ್ಲಿ ಹೊರಹೋಗುತ್ತಿವೆ. ತಿಂಗಳುಗಳಿಂದಲೂ ಇದು ನಿರಂತರವಾಗಿ ನಡೆಯುತ್ತಿದೆ. ಜಾಗತಿಕ ರಾಜಕೀಯ ಅಸ್ಥಿರತೆ, ಅಮೆರಿಕದ ಹೊಸ ಸರ್ಕಾರದ ಹೊಸ ನೀತಿ, ಭಾರತೀಯ ಮಾರುಕಟ್ಟೆಯ ಅತಿಯಾದ ಮೌಲ್ಯ ಇತ್ಯಾದಿ ಕಾರಣಗಳು ಕೇಳಿಬರುತ್ತಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಈ ಎಫ್​ಐಐ ನಿರ್ಗಮನ ಕುರಿತು ಮಾತನಾಡಿದ್ದು, ಎಫ್​ಐಐಗಳು ಹೂಡಿಕೆ ಹಿಂಪಡೆದು ಲಾಭ ಮಾಡಿಕೊಳ್ಳುತ್ತಿವೆ. ಭಾರತೀಯ ಮಾರುಕಟ್ಟೆ ಲಾಭದಾಯಕ ಎನಿಸಿದೆ ಎಂದು ವಿಶ್ಲೇಷಿಸಿದ್ದಾರೆ.

ನಿನ್ನೆ ಸೋಮವಾರ ಬಜೆಟ್ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ನಿರ್ಮಲಾ ಸೀತಾರಾಮನ್, ಭಾರತದ ಆರ್ಥಿಕತೆಯು ಹೂಡಿಕೆದಾರರಿಗೆ ಆಕರ್ಷಕ ಲಾಭ ನೀಡುತ್ತಿದೆ. ಎಫ್​ಐಐಗಳು ಷೇರುಗಳನ್ನು ಮಾರಿ ಲಾಭ ಮಾಡುತ್ತಿರುವುದು ಇದಕ್ಕೆ ಸಾಕ್ಷಿ ಎಂಬುದು ಅವರ ಅನಿಸಿಕೆ.

ಹಣಕಾಸು ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಕೂಡ ಈ ವಿದೇಶೀ ಹೂಡಿಕೆಗಳ ನಿರ್ಗಮನದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಎಫ್​ಪಿಐಗಳ ಚಲನೆಯು ಜಾಗತಿಕ ವಿದ್ಯಮಾನಗಳಿಂದ ಪ್ರಭಾವಿತವಾಗಿವೆ. ಹೂಡಿಕೆದಾರರು ಒಂದು ಉದಯೋನ್ಮುಖ ಮಾರುಕಟ್ಟೆ ತೊರೆದು ಬೇರೆ ಉದಯೋನ್ಮುಖ ಮಾರುಕಟ್ಟೆಗಳತ್ತ ಹೋಗುತ್ತಿದ್ದಾರೆ ಎಂಬುದು ತಪ್ಪು. ಜಾಗತಿಕ ಅನಿಶ್ಚಿತತೆ ಇದ್ದಾಗ ಈ ಹೂಡಿಕೆಗಳು ಅಮೆರಿಕಕ್ಕೆ ವಾಪಸ್ ಹೋಗುವ ಪ್ರವೃತ್ತಿ ಇರುತ್ತದೆ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿಗಳು ಹೇಳಿದ್ದಾರೆ.

ಇದನ್ನೂ ಓದಿ: ಒಂದು ವರ್ಷದೊಳಗೆ ಇನ್ಷೂರೆನ್ಸ್ ಪಾಲಿಸಿ ರದ್ದುಗೊಳಿಸಲು ಸಾಧ್ಯವಾ? ಫ್ರೀಲುಕ್ ಅವಧಿ ವಿಸ್ತರಿಸಲು ಸರ್ಕಾರದ ಯೋಜನೆ

ಭಾರತದ ಸೆನ್ಸೆಕ್ಸ್ ಸೂಚ್ಯಂಕ 2024ರ ಸೆಪ್ಟೆಂಬರ್​ನಲ್ಲಿ ಗರಿಷ್ಠ ಮಟ್ಟಕ್ಕೆ ಹೋಗಿತ್ತು. ತನ್ನ ಆ ಮಟ್ಟದಿಂದ ಅದು ಈಗ ಶೇ. 12ರಷ್ಟು ಇಳಿಮುಖ ಕಂಡಿದೆ. ಚೀನಾ ಸರ್ಕಾರ ಆರ್ಥಿಕ ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್​ಗಳನ್ನು ಘೋಷಿಸಿದಾಗ ಭಾರತದ ಷೇರು ಮಾರುಕಟ್ಟೆಯಿಂದ ವಿದೇಶೀ ಹೂಡಿಕೆಗಳ ಹೊರಹರಿವು ಆರಂಭವಾಗಿದ್ದು ಎನ್ನಲಾಗಿದೆ. 2024ರ ಅಕ್ಟೋಬರ್​ನಿಂದ, ಅಂದರೆ ಕಳೆದ ನಾಲ್ಕೈದು ತಿಂಗಳಿಂದ ವಿದೇಶೀ ಪೋರ್ಟ್​ಫೋಲಿಯೋ ಹೂಡಿಕೆದಾರರು ಭಾರತದ ಷೇರು ಮಾರುಕಟ್ಟೆಯಿಂದ ಎರಡು ಲಕ್ಷ ಕೋಟಿ ರೂ ಹೂಡಿಕೆಯನ್ನು ಹಿಂಪಡೆದಿದ್ದಾರೆ. ಅದರಲ್ಲೂ 2025ರ ಮೊದಲ ಐದಾರು ವಾರದಲ್ಲಿ ಹತ್ತಿರ ಹತ್ತಿರ ಒಂದು ಲಕ್ಷ ಕೋಟಿ ರೂನಷ್ಟು ಹೂಡಿಕೆಗಳು ಹೊರಹೋಗಿವೆ ಎನ್ನುವುದು ಗಮನಾರ್ಹ. ಕಾರ್ಪೊರೇಟ್ ಗಳಿಕೆ ಕುಸಿದಿರುವುದು ಮತ್ತು ಅಮೆರಿಕದ ಹೊಸ ನೀತಿಗಳು ಈ ವರ್ಷದ ವಿದೇಶೀ ಹೂಡಿಕೆಗಳ ಹೊರಹರಿವಿಗೆ ಕಾರಣ ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ