AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ. 21-22ರಂದು ನಿರ್ಮಲಾ ಸೀತಾರಾಮನ್​ರಿಂದ ಬಜೆಟ್ ಪೂರ್ವಭಾವಿ ಸಮಾಲೋಚನೆ, ಜಿಎಸ್​ಟಿ ಕೌನ್ಸಿಲ್ ಸಭೆ

Nirmala Sitharaman pre-budget meeting: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡಿಸೆಂಬರ್ 21 ಮತ್ತು 22ರಂದು ಬಜೆಟ್ ಪೂರ್ವಭಾವಿ ಸಭೆ ಮತ್ತು 55ನೇ ಜಿಎಸ್​ಟಿ ಕೌನ್ಸಿಲ್ ಸಭೆಗಳನ್ನು ನಡೆಸಲಿದ್ದಾರೆ. ಪ್ರೀ-ಬಜೆಟ್ ಮೀಟಿಂಗ್​ನಲ್ಲಿ ವಿವಿಧ ರಾಜ್ಯಗಳ ಹಣಕಾಸು ಸಚಿವರು ಪಾಲ್ಗೊಳ್ಳಲಿದ್ದಾರೆ. ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಇನ್ಷೂರೆನ್ಸ್ ಪ್ರೀಮಿಯಮ್ ಸೇರಿದಂತೆ ವಿವಿಧ ವಸ್ತುಗಳ ಜಿಎಸ್​ಟಿ ದರಗಳ ಪರಿಷ್ಕರಣೆಯ ನಿರ್ಧಾರ ತೆಗೆದುಕೊಳ್ಳಬಹುದು.

ಡಿ. 21-22ರಂದು ನಿರ್ಮಲಾ ಸೀತಾರಾಮನ್​ರಿಂದ ಬಜೆಟ್ ಪೂರ್ವಭಾವಿ ಸಮಾಲೋಚನೆ, ಜಿಎಸ್​ಟಿ ಕೌನ್ಸಿಲ್ ಸಭೆ
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 12, 2024 | 3:24 PM

Share

ನವದೆಹಲಿ, ನವೆಂಬರ್ 12: ಮುಂದಿನ ಹಣಕಾಸು ವರ್ಷಕ್ಕೆ ಬಜೆಟ್ ರೂಪಿಸಲು ನಿರತವಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಡಿಸೆಂಬರ್ 21 ಮತ್ತು 22ರಂದು ಎರಡು ಪ್ರಮುಖ ಸಭೆಗಳನ್ನು ನಡೆಸಲಿದ್ದಾರೆ. ಬಜೆಟ್ ಪೂರ್ವಭಾವಿ ಸಮಾಲೋಚನೆಗಳ ಸಭೆ ಹಾಗೂ ಜಿಎಸ್​ಟಿ ಮಂಡಳಿಯೊಂದಿಗೆ ಸಭೆ ಆ ಎರಡು ದಿನಗಳಲ್ಲಿ ನಡೆಯಲಿವೆ. ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿವಿಧ ರಾಜ್ಯಗಳ ಹಣಕಾಸು ಸಚಿವರು ಪಾಲ್ಗೊಳ್ಳಲಿದ್ದಾರೆ. ಆ ಸಭೆಯಲ್ಲಿ ಸಚಿವರುಗಳು ತಂತಮ್ಮ ರಾಜ್ಯಗಳ ಆದ್ಯತೆ ಮತ್ತು ತಮ್ಮ ಶಿಫಾರಸುಗಳನ್ನು ಪ್ರಸ್ತುತಪಡಿಸುವ ನಿರೀಕ್ಷೆ ಇದೆ. ರಾಜಸ್ಥಾನದ ಜೋಧಪುರ್ ಅಥವಾ ಜೈಸಲ್ಮೇರ್ ನಗರದಲ್ಲಿ ಈ ಎರಡು ಸಭೆಗಳು ನಡೆಯಬಹುದು.

ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಇನ್ಷೂರೆನ್ಸ್ ಪ್ರೀಮಿಯಮ್​ಗಳಿಗೆ ಜಿಎಸ್​ಟಿ ದರ ನಿರ್ಧಾರ ಸಾಧ್ಯತೆ

ಡಿಸೆಂಬರ್ 21 ಅಥವಾ 22ರಂದು ನಡೆಯಲಿರುವ ಜಿಎಸ್​ಟಿ ಕೌನ್ಸಿಲ್ ಸಭೆ 55ನೆಯದ್ದಾಗರುತ್ತದೆ. ಜಿಎಸ್​ಟಿ ದರಗಳ ಪರಿಷ್ಕರಣೆ ಕಾರ್ಯ ಈ ಸಭೆಯಲ್ಲಿ ಮುಂದುವರಿಯಲಿದೆ. ಹೆಲ್ತ್ ಇನ್ಷೂರೆನ್ಸ್, ಲೈಫ್ ಇನ್ಷೂರೆನ್ಸ್ ಸೇರದಂತೆ ಹಲವು ವಸ್ತು ಮತ್ತು ಸೇವೆಗಳಿಗೆ ಜಿಎಸ್​ಟಿ ದರವನ್ನು ಪರಿಷ್ಕರಿಸುವ ಸಂಬಂಧ 55ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಚರ್ಚೆ ನಡೆಯಬಹುದು. ನಿರ್ಧಾರವನ್ನೂ ತೆಗೆದುಕೊಳ್ಳಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಸೆಮಿಕಂಡಕ್ಟರ್ ಸೆಕ್ಟರ್​ನಲ್ಲಿ ಒಂದೆರಡು ವರ್ಷದಲ್ಲಿ ಸೃಷ್ಟಿಯಾಗಲಿವೆ 10 ಲಕ್ಷ ಉದ್ಯೋಗ

ಹೆಲ್ತ್ ಇನ್ಷೂರೆನ್ಸ್ ಮತ್ತು ಲೈಫ್ ಇನ್ಷೂರೆನ್ಸ್ ಜಿಎಸ್​ಟಿ ದರವನ್ನು ಅವಲೋಕಿಸಲು ರೂಪಿಸಲಾದ ಸಚಿವರ ಮಂಡಳಿ (ಜಿಒಎಂ) ಕಳೆದ ತಿಂಗಳು ಸಭೆ ನಡೆಸಿತ್ತು. ಟರ್ಮ್ ಲೈಫ್ ಇನ್ಷೂರೆನ್ಸ್ ಪಾಲಿಸಿ ಮತ್ತು ಹಿರಿಯ ನಾಗರಿಕರ ಹೆಲ್ತ್ ಇನ್ಷೂರೆನ್ಸ್ ಪಾಲಿಸಿಗಳ ಪ್ರೀಮಿಯಮ್ ಹಣವನ್ನು ಜಿಎಸ್​ಟಿ ವ್ಯಾಪ್ತಿಯಿಂದ ಹೊರಗಿಡಬೇಕು ಎನ್ನುವ ಸಲಹೆಗೆ ಆ ಸಭೆಯಲ್ಲಿ ಸಹಮತ ಸಿಕ್ಕಿತ್ತು. ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಜಿಒಎಂನ ಅನಿಸಿಕೆಗಳು ಚರ್ಚೆಗೆ ಬರುವ ಸಾಧ್ಯತೆ ಇದೆ.

ಹಾಗೆಯೇ, 5 ಲಕ್ಷ ರೂವರೆಗಿನ ಕವರೇಜ್ ಇರುವ ಯಾವುದೇ ಹೆಲ್ತ್ ಇನ್ಷೂರೆನ್ಸ್ ಪಾಲಿಸಿಯ ಪ್ರೀಮಿಯಮ್ ಪಾವತಿಗೂ ಜಿಎಸ್​ಟಿಯಿಂದ ವಿನಾಯಿತಿ ಕೊಡಬೇಕು ಎನ್ನುವ ಪ್ರಸ್ತಾಪ ಇದೆ. ಇದೂ ಕೂಡ ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪವಾಗಬಹುದು.

ಹಿಂದಿನ ಜಿಎಸ್​ಟಿ ಕೌನ್ಸಿಲ್ ಸಭೆ (54ನೆಯದ್ದು) ನಡೆದದ್ದು ಸೆಪ್ಟೆಂಬರ್ 9ರಂದು. ಇನ್ಷೂರೆನ್ಸ್ ಪಾಲಿಸಿಗಳ ಪ್ರೀಮಿಯಮ್ ಹಣದ ಮೇಲೆ ವಿಧಿಸಲಾಗುತ್ತಿರುವ ಜಿಎಸ್​ಟಿಯನ್ನು ತೆಗೆದುಹಾಕಬೇಕೋ, ದರ ಕಡಿಮೆ ಮಾಡಬೇಕೋ ಎಂಬುದನ್ನು ಅವಲೋಕಿಸುವಂತೆ ಗ್ರೂಪ್ ಆಫ್ ಮಿನಿಸ್ಟರ್ಸ್​ಗೆ ಸೂಚಿಸಿತ್ತು.

ಇದನ್ನೂ ಓದಿ: ಷೇರುಗಳಲ್ಲಿ ಹೂಡಿಕೆ; 10 ವರ್ಷದಲ್ಲಿ ಭಾರತೀಯ ವ್ಯಕ್ತಿಗಳು ಗಳಿಸಿದ ಲಾಭ 84 ಲಕ್ಷ ಕೋಟಿ ರೂ

ಸದ್ಯ ಇನ್ಷೂರೆನ್ಸ್ ಪ್ರೀಮಿಯಮ್ ಮೇಲೆ ಶೇ. 18ರಷ್ಟು ಜಿಎಸ್​ಟಿ ವಿಧಿಸಲಾಗುತ್ತಿದೆ. ಇದಕ್ಕೆ ಜಿಎಸ್​ಟಿ ಇರಬಾರದು ಎನ್ನುವಂತಹ ಒತ್ತಾಯ ಸರ್ಕಾರದೊಳಗಿನಿಂದಲೂ ಕೇಳಿಬರುತ್ತಿದೆ. ಇದೇ ಕಾರಣಕ್ಕೆ ಸಚಿವರ ಗುಂಪನ್ನು ರಚಿಸಿ ಅವಲೋಕಿಸುವ ಪ್ರಯತ್ನವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ