AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಷೇರು ಮಾರುಕಟ್ಟೆ ಸ್ವಚ್ಛಗೊಳಿಸಲು ಶಾರ್ಟ್ ಸೆಲ್ಲರ್​ಗಳು ಬೇಕೆಂದ ನಿತಿನ್ ಕಾಮತ್; ಏನಿದು ಶಾರ್ಟ್ ಸೆಲ್ಲಿಂಗ್?

Nithin Kamath wants the presence of short sellers in Indian markets: ಅಸಹಜವಾಗಿ ಷೇರುಬೆಲೆ ಏರಿರುವ ಸ್ಟಾಕ್​ಗಳು ನೈಜ ಬೆಲೆಗೆ ಇಳಿಯಲು ಶಾರ್ಟ್ ಸೆಲ್ಲಿಂಗ್ ತಂತ್ರಗಳನ್ನು ಬಳಸಲಾಗುತ್ತದೆ. ಝೀರೋಧ ಸಿಇಒ ನಿತಿನ್ ಕಾಮತ್ ಪ್ರಕಾರ ಭಾರತದ ಷೇರು ಮಾರುಕಟ್ಟೆಯಲ್ಲಿ ಶಾರ್ಟ್ ಸೆಲ್ಲರ್​​ಗಳ ಕೊರತೆ ಇದೆ. ಶಾರ್ಟ್ ಸೆಲ್ಲಿಂಗ್ ಮಾಡುವ ಕೆಲಸ ಬಹಳ ಕಷ್ಟ. ಇದನ್ನು ಸುಲಭಗೊಳಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಷೇರು ಮಾರುಕಟ್ಟೆ ಸ್ವಚ್ಛಗೊಳಿಸಲು ಶಾರ್ಟ್ ಸೆಲ್ಲರ್​ಗಳು ಬೇಕೆಂದ ನಿತಿನ್ ಕಾಮತ್; ಏನಿದು ಶಾರ್ಟ್ ಸೆಲ್ಲಿಂಗ್?
ಷೇರು ಮಾರುಕಟ್ಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 14, 2025 | 7:11 PM

Share

ನವದೆಹಲಿ, ಜುಲೈ 14: ಭಾರತದ ಷೇರು ಮಾರುಕಟ್ಟೆಗೆ (stock market) ಶಾರ್ಟ್ ಸೆಲ್ಲಿಂಗ್ ಕಾರ್ಯಗಳ ಅವಶ್ಯಕತೆ ಇದೆ. ಆದರೆ, ಇಲ್ಲಿ ಶಾರ್ಟ್ ಸೆಲ್ಲರ್​ಗಳ ಕೊರತೆ ಇದೆ. ಶಾರ್ಟ್ ಮಾಡುವ ದಾರಿಯೂ ಕಠಿಣ ಇದೆ ಎಂದು ಝೀರೋಧ ಸಂಸ್ಥಾಪಕ ಮತ್ತು ಸಿಇಒ ನಿತಿನ್ ಕಾಮತ್ (Nithin Kamath) ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಅಕೌಂಟ್​ನನಲ್ಲಿ ಪೋಸ್ಟ್ ಹಾಕಿದ ಅವರು, ಭಾರತದಲ್ಲಿ ಶಾರ್ಟ್ ಸೆಲ್ಲಿಂಗ್ ಕೊರತೆಯಿಂದಾಗಿ ಮಾರುಕಟ್ಟೆ ವಿರೂಪಗೊಳ್ಳುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಶಾರ್ಟ್ ಸೆಲ್ಲಿಂಗ್ ಇಲ್ಲವಾದರೆ ಷೇರುಗಳ ನೈಜ ಬೆಲೆ ಸರಿಯಾಗಿ ಗೊತ್ತಾಗುವುದಿಲ್ಲ ಎಂದು ಹೇಳಿದ ಅವರು, ಭಾರತದಲ್ಲಿ ಸ್ಟಾಕ್​ಗಳನ್ನು ಶಾರ್ಟ್ ಮಾಡುವ ಕೆಲಸ ಅಷ್ಟು ಸುಲಭವಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪ್ರಿಯಾ ನಾಯರ್ ಸಿಇಒ ಆದ ಬಳಿಕ ಹಿಂದೂಸ್ತಾನ್ ಯುನಿಲಿವರ್ ಷೇರುಬೆಲೆ ಭರ್ಜರಿ ಹೆಚ್ಚಳ; ಏನು ಕಾರಣ?

ನಿತಿನ್ ಕಾಮತ್ ಪ್ರಕಾರ ಭಾರತದಲ್ಲಿ ಯಾವುದೇ ಶಾರ್ಟಿಂಗ್ ಚಟುವಟಿಕೆ ನಡೆಯುತ್ತಿಲ್ಲ. ಶಾರ್ಟ್​​ಗಗಾಗಿ ಸ್ಟಾಕ್​ಗಳನ್ನು ಖರೀದಿಸುವುದು ಬಹಳ ಕಷ್ಟ. ಆಫ್​ಲೈನ್​ನಲ್ಲೇ ಮಾಡಬೇಕು. ಹೀಗಾಗಿ, ಭಾರತದಲ್ಲಿ ಶಾರ್ಟಿಂಗ್ ಕಷ್ಟ. ಇಲ್ಲಿ ಶಾರ್ಟ್ ಮಾಡಲು ಉಳಿದಿರುವ ಮಾರ್ಗ ಎಂದರೆ ಫ್ಯೂಚರ್ಸ್ ಮತ್ತು ಆಪ್ಷನ್ಸ್. ಆದರೆ, ಇಲ್ಲೂ ಕೂಡ ಕೇವಲ 224 ಎಫ್ ಅಂಡ್ ಒ ಸ್ಟಾಕ್​ಗಳು ಮಾತ್ರವೇ ಇರುವುದು. ಕೆಟ್ಟದಾಗಿರುವ ಹೆಚ್ಚಿನ ಸ್ಟಾಕ್​ಗಳನ್ನು ಶಾರ್ಟ್ ಮಾಡಲು ಅವಕಾಶ ಇರುವುದಿಲ್ಲ ಎಂದು ತಮ್ಮ ಎಕ್ಸ್ ಪೋಸ್ಟ್​​ನಲ್ಲಿ ನಿತಿನ್ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

ಏನಿದು ಶಾರ್ಟ್ ಸೆಲ್ಲಿಂಗ್?

ಶಾರ್ಟ್ ಸೆಲ್ಲಿಂಗ್ ಎಂದರೆ ಭಾರತೀಯರಿಗೆ ಅಮೆರಿಕದ ಹಿಂಡನ್ಬರ್ಗ್ ಸಂಸ್ಥೆ ನೆನಪಿಗೆ ಬರಬಹುದು. ಅದಾನಿ ಗ್ರೂಪ್ ವಿರುದ್ಧ ಆರೋಪಗಳನ್ನು ಮಾಡಿದ ವರದಿಯೊಂದನ್ನು ಬಿಡುಗಡೆ ಮಾಡಿತ್ತು. ಅದರ ವಿವಿಧ ಸ್ಟಾಕ್​ಗಳ ಬೆಲೆ ಪಾತಾಳಕ್ಕೆ ಇಳಿಯುವಂತೆ ಮಾಡಿತ್ತು. ಇದು ಶಾರ್ಟ್ ಸೆಲ್ಲರ್​ಗಳ ತಂತ್ರಗಳಲ್ಲಿ ಒಂದು.

ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ಜೇನ್ ಸ್ಟ್ರೀಟ್​​ನಂತಹ ವಂಚಕರ ಮಧ್ಯೆ ಟ್ರೇಡಿಂಗ್ ಮತ್ತು ಹೂಡಿಕೆ ಮಾಡುವ ತಂತ್ರ ತಿಳಿದಿರಿ…

ಸಾಮಾನ್ಯವಾಗಿ ಶಾರ್ಟ್ ಸೆಲ್ಲರ್​ಗಳು ಅಸ್ವಾಭಾವಿಕವಾಗಿ ಷೇರುಬೆಲೆ ಏರಿರುವ ಸ್ಟಾಕ್​ಗಳನ್ನು ಗುರುತಿಸಿ, ಅದಕ್ಕೆ ಕಾರಣಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುತ್ತಾರೆ. ಬಳಿಕ ಷೇರುಗಳನ್ನು ದೊಡ್ಡ ಪ್ರಮಾಣದಲ್ಲಿ ಮಾರಿ ಅವುಗಳ ಬೆಲೆ ಕುಸಿಯುವಂತೆ ಮಾಡುತ್ತಾರೆ. ಬೆಲೆ ಕುಸಿದ ಷೇರುಗಳನ್ನು ಖರೀದಿಸಿ ಲಾಭ ಮಾಡಿಕೊಳ್ಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ