AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1,900 ಕೋಟಿ ರೂಗೆ ಕಟ್ಟಿದ ರಸ್ತೆಗೆ 8,000 ಕೋಟಿ ರೂ ಟೋಲ್? ನಿತಿನ್ ಗಡ್ಕರಿ ಉತ್ತರ ಇದು

Nitin Gadkari explains reasons for excessive toll collection: ಹೆದ್ದಾರಿಯಲ್ಲಿ ಯಾಕೆ ಬಹಳಷ್ಟು ಟೋಲ್ ತೆರಿಗೆಯನ್ನು ವಸೂಲಿ ಮಾಡಲಾಗುತ್ತದೆ ಎನ್ನುವ ಪ್ರಶ್ನೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಉತ್ತರ ಕೊಡುವ ಪ್ರಯತ್ನ ಮಾಡಿದ್ದಾರೆ. ರಸ್ತೆ ನಿರ್ಮಾಣದಲ್ಲಿ ಆಗುವ ಅಡೆ ತಡೆಗಳು, ಸರ್ಕಾರಕ್ಕೆ ಬೀಳುವ ವಿವಿಧ ರೀತಿಯ ಹೊರೆಗಳು ಇವುಗಳನ್ನು ಗಡ್ಕರಿ ಉದಾಹರಣೆಯಾಗಿ ನೀಡಿದ್ದಾರೆ. ದೆಹಲಿ ಜೈಪುರ್ ಹೆದ್ದಾರಿ ನಿರ್ಮಾಣಕ್ಕೆ 1,900 ಕೋಟಿ ರೂ ವೆಚ್ಚವಾಗಿತ್ತು. ಆದರೆ ಅಲ್ಲಿ 8,000 ರೂ ಮೊತ್ತದ ಟೋಲ್ ಸಂಗ್ರಹಿಸಲಾಗಿದೆ ಎಂದು ಹೇಳಲಾಗುತ್ತಿದೆ.

1,900 ಕೋಟಿ ರೂಗೆ ಕಟ್ಟಿದ ರಸ್ತೆಗೆ 8,000 ಕೋಟಿ ರೂ ಟೋಲ್? ನಿತಿನ್ ಗಡ್ಕರಿ ಉತ್ತರ ಇದು
ನಿತಿನ್ ಗಡ್ಕರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 17, 2024 | 12:35 PM

Share

ನವದೆಹಲಿ, ಸೆಪ್ಟೆಂಬರ್ 17: ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿಪರೀತ ಆಗುತ್ತಿದೆ ಎಂಬುದು ಹೆಚ್ಚಿನ ಜನರ ಆಕ್ಷೇಪ. ರಸ್ತೆ ನಿರ್ಮಾಣಕ್ಕೆ ಆಗಿರುವ ವೆಚ್ಚ ಮತ್ತು ರಸ್ತೆ ಪಾಲನೆಗೆ ಆಗುವ ವೆಚ್ಚಕ್ಕಿಂತ ಬಹಳ ಹೆಚ್ಚೇ ಟೋಲ್ ಕಲೆಕ್ಟ್ ಮಾಡಲಾಗುತ್ತದೆ ಎಂಬುದು ಬಹಳ ಜನರ ತಗಾದೆ. ಟೋಲ್ ಎಂಬುದು ಸರ್ಕಾರದಿಂದ ನಡೆಯುತ್ತಿರುವ ಹಗಲುದರೋಡೆ ಎಂದು ಬಹಳ ಜನರು ಟ್ರೋಲ್ ಮಾಡುವುದುಂಟು. ಹೆದ್ದಾರಿ ಟೋಲ್ ವಿಷಯದಲ್ಲಿ ಬಹಳ ಕಟ್ಟುನಿಟ್ಟಾಗಿರುವ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೆದುರು ಈ ಅತಿಯಾದ ಟೋಲ್ ಸಂಗ್ರಹದ ಬಗ್ಗೆ ಪ್ರಶ್ನೆ ಬಂದಿತು. ಇದಕ್ಕೆ ಅವರು ಕೆಲ ಉದಾಹರಣೆಗಳ ಮೂಲಕ ಉತ್ತರ ಕೊಟ್ಟಿದ್ದಾರೆ.

ನ್ಯೂಸ್18 ವಾಹಿನಿಯ ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ನಿತಿನ್ ಗಡ್ಕರಿ, ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಯಾಕಿಷ್ಟು ಜಾಸ್ತಿ ಮಾಡಲಾಗುತ್ತಿದೆ ಎಂಬುದಕ್ಕೆ ಕಾರಣ ಬಿಚ್ಚಿಟ್ಟಿದ್ದಾರೆ. ದೆಹಲಿ ಮತ್ತು ಜೈಪುರ್ ಹೆದ್ದಾರಿಯ ನಿರ್ಮಾಣಕ್ಕೆ 1,900 ಕೋಟಿ ರೂ ವೆಚ್ಚವಾಗಿತ್ತು. ಅಲ್ಲಿರುವ ಟೋಲ್​ಗಳಲ್ಲಿ 8,000 ಕೋಟಿ ರೂ ಸಂಗ್ರಹ ಆಗಿರುವುದು ಬೆಳಕಿಗೆ ಬಂದಿದೆ. ಇಷ್ಟು ಹೆಚ್ಚು ಟೋಲ್ ಸಂಗ್ರಹ ಯಾಕಾಗಿ ಮಾಡಲಾಗುತ್ತಿದೆ ಎನ್ನುವ ಪ್ರಶ್ನೆ ನಿತಿನ್ ಗಡ್ಕರಿಗೆ ಹಾಕಲಾಗಿತ್ತು. ಅವರ ಉತ್ತರ ಇದು:

ಇದನ್ನೂ ಓದಿ: ಭಾರತದಲ್ಲಿ ಮುಂದಿನ ಸಾವಿರ ವರ್ಷದ ಬೆಳವಣಿಗೆಗೆ ಈಗ ತಳಹದಿ ನಿರ್ಮಾಣ: ರೀ ಇನ್ವೆಸ್ಟ್ ಸಭೆಯಲ್ಲಿ ಪ್ರಧಾನಿ ಮೋದಿ

‘ಟೋಲ್ ತೆರಿಗೆಯನ್ನು ಒಂದೇ ದಿನ ಸಂಗ್ರಹ ಮಾಡಲಾಗುವುದಿಲ್ಲ. ಟೋಲ್ ಸಂಗ್ರಹಕ್ಕೆ ಮುಂಚೆ ಮತ್ತು ಆನಂತರ ಸರ್ಕಾರಕ್ಕೆ ಹಲವಾರು ವೆಚ್ಚಗಳು ಬೀಳುತ್ತವೆ. ಉದಾಹರಣೆಗೆ, ನೀವು ಒಂದು ಕಾರನ್ನು ಕ್ಯಾಷ್​ನಲ್ಲಿ ಖರೀದಿಸಿದಾಗ ಎರಡೂವರೆ ಲಕ್ಷ ರೂ ಆಗುತ್ತದೆ ಎಂದಿಟ್ಟುಕೊಳ್ಳಿ. ಅದನ್ನೇ ನೀವು 10 ವರ್ಷದ ಸಾಲದಲ್ಲಿ ತೆಗೆದುಕೊಂಡಿದ್ದೇ ಆದಲ್ಲಿ ಅಂತಿಮ ವೆಚ್ಚ 5.5ರಿಂದ 6 ಲಕ್ಷ ರೂ ಆಗುತ್ತದೆ. ಪ್ರತೀ ತಿಂಗಳೂ ಬಡ್ಡಿ ಕಟ್ಟಬೇಕಾಗುತ್ತದೆ. ಬಹಳಷ್ಟು ಸಲ ಸಾಲ ತೆಗೆದುಕೊಂಡು ಕಾಮಗಾರಿ ನಡೆಸಲಾಗುತ್ತದೆ,’ ಎಂದು ನಿತಿನ್ ಗಡ್ಕರಿ ವಿವರಣೆ ನೀಡಿದ್ದಾರೆ.

ದೆಹಲಿ-ಜೈಪುರ್ ಹೆದ್ದಾರಿ ವಿಚಾರದ ಬಗ್ಗೆ ಮಾತನಾಡಿದ ಸಚಿವರು, ‘2009ರಲ್ಲಿ ಯುಪಿಎ ಸರ್ಕಾರ ಇದ್ದಾಗ ಆ ರಸ್ತೆ ನಿರ್ಮಾಣ ಯೋಜನೆ ಚಾಲನೆ ಪಡೆಯಿತು. 9 ಬ್ಯಾಂಕುಗಳು ಈ ಯೋಜನೆಯಲ್ಲಿ ಭಾಗಿಯಾಗಿದ್ದವು. ಸಾಕಷ್ಟು ಸಮಸ್ಯೆಗಳು ಎದುರಾದವು. ಗುತ್ತಿಗೆದಾರರು ಪರಾರಿಯಾದರು. ಬ್ಯಾಂಕುಗಳು ಕೋರ್ಟ್​ಗಳಲ್ಲಿ ಕೇಸ್ ಹಾಕಿದವು. ಹೊಸ ಗುತ್ತಿಗೆದಾರರು ಬಂದರು. ನಾವು ಹೊಸ ಗುತ್ತಿಗೆದಾರರನ್ನು ವಾಪಸ್ ಕಳುಹಿಸಿದೆವು. ದೆಹಲಿ ಹೈಕೋರ್ಟ್ ಸ್ಟೇ ಕೊಟ್ಟಿತು. ಈ ರಸ್ತೆಗೆ ನಾವು ಹೊಸ ಡಿಪಿಆರ್ ರೂಪಿಸಿದೆವು. ರಸ್ತೆಯ ಎರಡೂ ಬದಿಗಳಲ್ಲಿ ಒತ್ತುವರಿಯಾಗಿದ್ದವು. ಷಟ್ಪಥದ ರಸ್ತೆ ನಿರ್ಮಿಸಬೇಕಾದರೆ ಒತ್ತುವರಿ ಜಾಗಗಳನ್ನು ತೆರವುಗೊಳಿಸುವುದು ಅನಿವಾರ್ಯವಾಗಿತ್ತು. ಈ ಬಾರಿ ಮಳೆಯಿಂದಾಗಿ ಹೆಚ್ಚು ಸಮಸ್ಯೆ ಸೃಷ್ಟಿಯಾಯಿತು’ ಎಂದು ನಿತಿನ್ ಗಡ್ಕರಿ ಒಂದು ಹೆದ್ದಾರಿ ನಿರ್ಮಾಣದಲ್ಲಿ ಆಗುವ ಸಂಭಾವ್ಯ ಅಡೆತಡೆಗಳ ಬಗ್ಗೆ ಉದಾಹರಣೆ ಸಮೇತ ವಿವರ ನೀಡಿದ್ದಾರೆ.

ಇದನ್ನೂ ಓದಿ: ರಾಧಿಕಾ ಗುಪ್ತಾ ಶ್ರೀಮಂತ ಉದ್ಯಮಿಯಾದರೂ ಲಕ್ಷುರಿ ಕಾರು ಒಲ್ಲೆ ಎನ್ನುವುದು ಯಾಕೆ? ಇಲ್ಲಿದೆ ಇಂಟರೆಸ್ಟಿಂಗ್ ಕಾರಣ

ನರೇಂದ್ರ ಮೋದಿ ನೇತೃತ್ವದ ಮೂರನೇ ಸರ್ಕಾರ ನೂರು ದಿನ ಪೂರ್ಣಗೊಳಿಸಿದ ಸಂದರ್ಭದಲ್ಲಿ ತಮ್ಮ ಇಲಾಖೆಯಿಂದ ಆಗಿರುವ ಸಾಧನೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮೊದಲ 100 ದಿನದಲ್ಲಿ 51,000 ಕೋಟಿ ರೂ ಮೊತ್ತದ ಎಂಟು ರಸ್ತೆ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದೆ. ಮಾರ್ಚ್ ತಿಂಗಳಷ್ಟರಲ್ಲಿ 3 ಲಕ್ಷ ಕೋಟಿ ರೂ ಮೌಲ್ಯದ ಯೋಜನೆಗಳನ್ನು ಪೂರ್ಣಗೊಳಿಸುವ ಗುರಿ ತಮ್ಮ ಇಲಾಖೆಯದ್ದು ಎಂದು ಗಡ್ಕರಿ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ