AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NPAs in Banks: 3 ಲಕ್ಷ ಕೋಟಿ ರೂ. ಎನ್​ಪಿಎ ತಪ್ಪಿಸಿ ಬ್ಯಾಂಕ್​ಗಳನ್ನು ರಕ್ಷಿಸಿದ್ದೇವೆ; ನಿತಿನ್ ಗಡ್ಕರಿ

ದೇಶದಲ್ಲಿ 2014ರಿಂದ ಬಾಕಿ ಇದ್ದ ರಸ್ತೆ ನಿರ್ಮಾಣ ಯೋಜನೆಗಳಿಗೆ ಅನುಮತಿ ನೀಡುವ ಮೂಲಕ 3 ಲಕ್ಷ ಕೋಟಿ ರೂ. ಅನುತ್ಪಾದಕ ಆಸ್ತಿಯಾಗುವುದನ್ನು ಸರ್ಕಾರ ತಪ್ಪಿಸಿದೆ. ಆ ಮೂಲಕ ಬ್ಯಾಂಕ್​​ಗಳನ್ನು ರಕ್ಷಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

NPAs in Banks: 3 ಲಕ್ಷ ಕೋಟಿ ರೂ. ಎನ್​ಪಿಎ ತಪ್ಪಿಸಿ ಬ್ಯಾಂಕ್​ಗಳನ್ನು ರಕ್ಷಿಸಿದ್ದೇವೆ; ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
TV9 Web
| Updated By: Ganapathi Sharma|

Updated on: Dec 14, 2022 | 6:39 PM

Share

ನವದೆಹಲಿ: ದೇಶದಲ್ಲಿ 2014ರಿಂದ ಬಾಕಿ ಇದ್ದ ರಸ್ತೆ ನಿರ್ಮಾಣ ಯೋಜನೆಗಳಿಗೆ (Road Projects) ಅನುಮತಿ ನೀಡುವ ಮೂಲಕ 3 ಲಕ್ಷ ಕೋಟಿ ರೂ. ಅನುತ್ಪಾದಕ ಆಸ್ತಿಯಾಗುವುದನ್ನು (NPAs) ಸರ್ಕಾರ ತಪ್ಪಿಸಿದೆ. ಆ ಮೂಲಕ ಬ್ಯಾಂಕ್​​ಗಳನ್ನು ರಕ್ಷಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಬುಧವಾರ ತಿಳಿಸಿದ್ದಾರೆ. ಒಟ್ಟು 415 ರಸ್ತೆ ನಿರ್ಮಾಣ ಯೋಜನೆಗಳ ಪೈಕಿ ಶೇಕಡಾ 95ರ ಕಾಮಗಾರಿ ಮುಗಿದಿದೆ. ಆದರೆ ಇವುಗಳನ್ನು ವಿಳಂಬವಾಗಿರುವ ಯೋಜನೆಗಳ ಅಡಿಯಲ್ಲಿ ಪರಿಗಣಿಸಲಾಗಿದೆ ಎಂದು ಅವರು ರಾಜ್ಯಸಭೆಗೆ (Rajya Sabha) ತಿಳಿಸಿದ್ದಾರೆ.

ಶೀಘ್ರದಲ್ಲೇ ರಾಜ್ಯಮಟ್ಟದಲ್ಲಿ ಬಾಕಿ ಇರುವ ರಸ್ತೆ ನಿರ್ಮಾಣ ಯೋಜನೆಗಳನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಅಂಥ ಯೋಜನೆಗಳಿಗೆ ತ್ವರಿತವಾಗಿ ಅನುಮೋದನೆ ನೀಡಿ ಅದು ಅನುಷ್ಠಾನಗೊಳ್ಳಲು ನೆರವಾಗಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Banking Stocks: ಒಂದೇ ತಿಂಗಳಲ್ಲಿ ಶೇ 122ರವರೆಗೆ ಗಳಿಕೆ ದಾಖಲಿಸಿವೆ ಈ ಬ್ಯಾಂಕಿಂಗ್ ಷೇರುಗಳು

2014ರಲ್ಲಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಾಗ 3.85 ಲಕ್ಷ ಕೋಟಿ ಮೊತ್ತದ ರಸ್ತೆ ನಿರ್ಮಾಣ ಯೋಜನೆಗಳು ವಿವಿಧ ಕಾರಣಗಳಿಂದಾಗಿ ಸ್ಥಗಿತಗೊಂಡಿದ್ದವು. ಸರ್ಕಾರ ರಚನೆಯಾದ ಬೆನ್ನಲ್ಲೇ ಬ್ಯಾಂಕರ್​​ಗಳ ಜತೆ ಸಮಾಲೋಚನೆ ನಡೆಸಿ ಅನೇಕ ಅಡೆತಡೆಗಳನ್ನು ಪರಿಹರಿಸಲಾಯಿತು. ಭೂಸ್ವಾಧೀನದಂಥ ಅನೇಕ ಸಮಸ್ಯೆಗಳನ್ನು ಬಗೆಹರಿಸಲಾಯಿತು ಎಂದು ಗಡ್ಕರಿ ಹೇಳಿದ್ದಾರೆ. ವಿಳಂಬವಾಗಿರುವ ಅಥವಾ ಸ್ಥಗಿತಗೊಂಡಿರುವ ರಸ್ತೆ ನಿರ್ಮಾಣ ಯೋಜನೆಗಳನ್ನು ಪುನರಾರಂಭಿಸುವ ಯೋಜನೆ ಇದೆಯೇ ಎಂದು ಪ್ರಶ್ನೋತ್ತರ ವೇಳೆಯಲ್ಲಿ ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು.

719 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ನನೆಗುದಿಗೆ

ವಿವಿಧ ರಾಜ್ಯಗಳಲ್ಲಿ ಅನುಮೋದನೆ ದೊರೆತ ಸುಮಾರು 719 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ನನೆಗುದಿಗೆ ಬಿದ್ದಿವೆ. ಹಲವು ಯೋಜನೆಗಳು ಗುತ್ತಿಗೆದಾರರ ಸಮಸ್ಯೆಯಿಂದ, ಇನ್ನು ಕೆಲವು ಭೂಸ್ವಾಧೀನ ಮತ್ತಿತರ ಸಮಸ್ಯೆಗಳಿಂದ ಬಾಕಿ ಇವೆ. ಇವುಗಳ ತ್ವರಿತಗತಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Shiradi Ghat: ಶಿರಾಡಿ ಘಾಟ್​ನಲ್ಲಿ ಸುರಂಗ ಮಾರ್ಗ ಸಾಧ್ಯವಿಲ್ಲ, ಚತುಷ್ಪಥದ ರಸ್ತೆ ನಿರ್ಮಾಣಕ್ಕೆ ಚಿಂತನೆ; ನಿತಿನ್ ಗಡ್ಕರಿ ಸ್ಪಷ್ಟನೆ

ಹೆದ್ದಾರಿ ಯೋಜನೆಗಳು ಯಾವುವೂ ಪೂರ್ಣವಾಗಿ ಸ್ಥಗಿತಗೊಂಡಿಲ್ಲ. ಮುಂಗಾರು ಮಳೆ, ಕೋವಿಡ್ ಸಾಂಕ್ರಾಮಿಕ, ಭುಸ್ವಾಧೀನ, ವಿವಿಧ ಇಲಾಖೆಗಳ ಅನುಮೋದನೆ ವಿಳಂಬ ಇತ್ಯಾದಿ ಕಾರಣಗಳಿಂದ ಮುಂದೂಡಿಕೆಯಾಗಿವೆಯಷ್ಟೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!