AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways: ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕಿಲ್ಲ ರಿಯಾಯಿತಿ ದರದ ಟಿಕೆಟ್; ಕೇಂದ್ರ

ಹಿರಿಯ ನಾಗರಿಕರಿಗೆ ರಿಯಾಯಿತಿ ದರದ ಪ್ರಯಾಣ ಮರು ಜಾರಿ ಮಾಡುವ ಯೋಜನೆ ಸದ್ಯಕ್ಕಿಲ್ಲ. ಕಳೆದ ವರ್ಷ ಪ್ರಯಾಣಿಕ ಸೇವೆಗಳಿಗಾಗಿ ರೈಲ್ವೆಗೆ 59,000 ಕೋಟಿ ರೂ. ಸಬ್ಸಿಡಿ ನೀಡಲಾಗುತ್ತಿದೆ. ಪಿಂಚಣಿ ಮತ್ತು ವೇತನದ ಮೊತ್ತ ಬಹಳ ಹೆಚ್ಚಾಗಿದೆ ಎಂದು ಸರ್ಕಾರ ತಿಳಿಸಿದೆ.

Indian Railways: ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕಿಲ್ಲ ರಿಯಾಯಿತಿ ದರದ ಟಿಕೆಟ್; ಕೇಂದ್ರ
ಭಾರತೀಯ ರೈಲ್ವೆ
TV9 Web
| Edited By: |

Updated on: Dec 15, 2022 | 1:04 PM

Share

ನವದೆಹಲಿ: ರೈಲುಗಳಲ್ಲಿ (Trains) ಹಿರಿಯ ನಾಗರಿಕರಿಗೆ (Senior Citizens) ರಿಯಾಯಿತಿ ದರದ ಟಿಕೆಟ್ ನೀಡುವುದನ್ನು ಸದ್ಯಕ್ಕೆ ಮರು ಜಾರಿಗೊಳಿಸುವುದಿಲ್ಲ ಎಂದು ರೈಲ್ವೆ (Indian Railway) ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿ ದರದ ಕೊಡುಗೆಯನ್ನು ಕೋವಿಡ್ (Covid-19) ಸಾಂಕ್ರಾಮಿಕದ ಬಳಿಕ ರೈಲ್ವೆ ಇಲಾಖೆ ಸ್ಥಗಿತಗೊಳಿಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಮತ್ತು ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೆ ಹಿರಿಯ ನಾಗರಿಕರಿಗೆ ರಿಯಾಯಿತಿ ದರದ ಪ್ರಯಾಣ ನೀಡಲಿದೆ ಎಂದು ಕೆಲವು ಮಾಧ್ಯಮಗಳು ಇತ್ತೀಚೆಗೆ ವರದಿ ಮಾಡಿದ್ದವು. ಈ ವಿಚಾರವಾಗಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ಸಂಸದ ನವನೀತ್ ರಾಣಾಂವ್​ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಹಿರಿಯ ನಾಗರಿಕರಿಗೆ ರಿಯಾಯಿತಿ ದರದ ಪ್ರಯಾಣ ಮರು ಜಾರಿ ಮಾಡುವ ಯೋಜನೆ ಸದ್ಯಕ್ಕಿಲ್ಲ. ಕಳೆದ ವರ್ಷ ಪ್ರಯಾಣಿಕ ಸೇವೆಗಳಿಗಾಗಿ ರೈಲ್ವೆಗೆ 59,000 ಕೋಟಿ ರೂ. ಸಬ್ಸಿಡಿ ನೀಡಲಾಗುತ್ತಿದೆ. ಪಿಂಚಣಿ ಮತ್ತು ವೇತನದ ಮೊತ್ತ ಬಹಳ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: IRCTC Stake Sell: ಐಆರ್​ಸಿಟಿಸಿ ಬಂಡವಾಳ ಮಾರಾಟ ಘೋಷಿಸಿದ ಸರ್ಕಾರ; ಷೇರು ಮೌಲ್ಯ ಕುಸಿತ

ರೈಲ್ವೆ ಇಲಾಖೆಯ ವಾರ್ಷಿಕ ಪಿಂಚಣಿ ಮೊತ್ತ 60,000 ಕೋಟಿ ರೂ. ಇದೆ. ಕಳೆದ ವರ್ಷ 59,000 ಕೋಟಿ ರೂ. ಸಬ್ಸಿಡಿ ನೀಡಲಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದ್ದು, ಕೆಲವು ರಾಜ್ಯಗಳ ಬಜೆಟ್​ ಮೊತ್ತಕ್ಕಿಂತಲೂ ಹೆಚ್ಚಿನದ್ದಾಗಿದೆ. ಇಂಧನಕ್ಕೆ 40,000 ಕೋಟಿ ರೂ. ವ್ಯಯಿಸಲಾಗಿದೆ. ವೇತನಕ್ಕಾಗಿ 97,000 ಕೋಟಿ ರೂ. ವೆಚ್ಚವಾಗಿದೆ ಎಂದು ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ದೇಶದ ಎಲ್ಲೆಡೆಯಿಂದಲೂ ಅಯೋಧ್ಯೆಗೆ ರೈಲು ಸಂಪರ್ಕ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ದೇಶದ ಎಲ್ಲ ಕಡೆಗಳಿಂದಲೂ ಅಯೋಧ್ಯೆಯನ್ನು ಸಂಪರ್ಕಿಸಲು ರೈಲು ವ್ಯವಸ್ಥೆ ಮಾಡಲಾಗುವುದು. 41 ಪ್ರಮುಖ ರೈಲು ನಿಲ್ದಾಣಗಳ ಮರು ಅಭಿವೃದ್ಧಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇದನ್ನು ಹಂತಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ರೈಲು ಟಿಕೆಟ್ ಕನ್​ಫರ್ಮ್ ಆಗಿಲ್ಲವೇ? ಈ ಆ್ಯಪ್​ನಲ್ಲಿ ಉಚಿತವಾಗಿ ಸಿಗುತ್ತೆ ಫ್ಲೈಟ್ ಟಿಕೆಟ್!

ಸದ್ಯ ವಂದೇ ಭಾರತ್ ರೈಲುಗಳು ಗರಿಷ್ಠ 500 ಕಿ.ಮೀ. ದೂರ ಕ್ರಮಿಸುತ್ತಿವೆ. ಸ್ಲೀಪಿಂಗ್ ಸೌಲಭ್ಯದ ರೈಲುಗಳು ಆರಂಭಗೊಂಡ ಬಳಿಕ ವಂದೇ ಭಾರತ್ ರೈಲುಗಳು ಹೆಚ್ಚು ದೂರ ಕ್ರಮಿಸಲು ಆರಂಭಿಸಲಿವೆ ಎಂದು ಅವರು ಹೇಳಿದ್ದಾರೆ.

2030ಕ್ಕೆ ಸಂಪೂರ್ಣ ಮಾಲಿನ್ಯಮುಕ್ತ

2030ರ ವೇಳೆಗೆ ಭಾರತೀಯ ರೈಲ್ವೆ ಸಂಪೂರ್ಣವಾಗಿ ಮಾಲಿನ್ಯ ಮುಕ್ತವಾಗಲಿದೆ. ಈ ನಿಟ್ಟಿನಲ್ಲಿ ಕೆಲಸಕಾರ್ಯಗಳು ಸಾಗುತ್ತಿವೆ. ಹೈಡ್ರೋಜನ್ ರೈಲುಗಳನ್ನು ಅಭಿವೃದ್ಧಿಪಡಿಸಲಾವಗುವುದು. ಇವುಗಳನ್ನು ಭಾರತದ ಎಂಜಿನಿಯರ್​​ಗಳೇ ವಿನ್ಯಾಸಗೊಳಿಸಲಿದ್ದಾರೆ ಎಂದು ವೈಷ್ಣವ್ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್