AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways: ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕಿಲ್ಲ ರಿಯಾಯಿತಿ ದರದ ಟಿಕೆಟ್; ಕೇಂದ್ರ

ಹಿರಿಯ ನಾಗರಿಕರಿಗೆ ರಿಯಾಯಿತಿ ದರದ ಪ್ರಯಾಣ ಮರು ಜಾರಿ ಮಾಡುವ ಯೋಜನೆ ಸದ್ಯಕ್ಕಿಲ್ಲ. ಕಳೆದ ವರ್ಷ ಪ್ರಯಾಣಿಕ ಸೇವೆಗಳಿಗಾಗಿ ರೈಲ್ವೆಗೆ 59,000 ಕೋಟಿ ರೂ. ಸಬ್ಸಿಡಿ ನೀಡಲಾಗುತ್ತಿದೆ. ಪಿಂಚಣಿ ಮತ್ತು ವೇತನದ ಮೊತ್ತ ಬಹಳ ಹೆಚ್ಚಾಗಿದೆ ಎಂದು ಸರ್ಕಾರ ತಿಳಿಸಿದೆ.

Indian Railways: ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕಿಲ್ಲ ರಿಯಾಯಿತಿ ದರದ ಟಿಕೆಟ್; ಕೇಂದ್ರ
ಭಾರತೀಯ ರೈಲ್ವೆ
TV9 Web
| Edited By: |

Updated on: Dec 15, 2022 | 1:04 PM

Share

ನವದೆಹಲಿ: ರೈಲುಗಳಲ್ಲಿ (Trains) ಹಿರಿಯ ನಾಗರಿಕರಿಗೆ (Senior Citizens) ರಿಯಾಯಿತಿ ದರದ ಟಿಕೆಟ್ ನೀಡುವುದನ್ನು ಸದ್ಯಕ್ಕೆ ಮರು ಜಾರಿಗೊಳಿಸುವುದಿಲ್ಲ ಎಂದು ರೈಲ್ವೆ (Indian Railway) ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿ ದರದ ಕೊಡುಗೆಯನ್ನು ಕೋವಿಡ್ (Covid-19) ಸಾಂಕ್ರಾಮಿಕದ ಬಳಿಕ ರೈಲ್ವೆ ಇಲಾಖೆ ಸ್ಥಗಿತಗೊಳಿಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಮತ್ತು ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೆ ಹಿರಿಯ ನಾಗರಿಕರಿಗೆ ರಿಯಾಯಿತಿ ದರದ ಪ್ರಯಾಣ ನೀಡಲಿದೆ ಎಂದು ಕೆಲವು ಮಾಧ್ಯಮಗಳು ಇತ್ತೀಚೆಗೆ ವರದಿ ಮಾಡಿದ್ದವು. ಈ ವಿಚಾರವಾಗಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ಸಂಸದ ನವನೀತ್ ರಾಣಾಂವ್​ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಹಿರಿಯ ನಾಗರಿಕರಿಗೆ ರಿಯಾಯಿತಿ ದರದ ಪ್ರಯಾಣ ಮರು ಜಾರಿ ಮಾಡುವ ಯೋಜನೆ ಸದ್ಯಕ್ಕಿಲ್ಲ. ಕಳೆದ ವರ್ಷ ಪ್ರಯಾಣಿಕ ಸೇವೆಗಳಿಗಾಗಿ ರೈಲ್ವೆಗೆ 59,000 ಕೋಟಿ ರೂ. ಸಬ್ಸಿಡಿ ನೀಡಲಾಗುತ್ತಿದೆ. ಪಿಂಚಣಿ ಮತ್ತು ವೇತನದ ಮೊತ್ತ ಬಹಳ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: IRCTC Stake Sell: ಐಆರ್​ಸಿಟಿಸಿ ಬಂಡವಾಳ ಮಾರಾಟ ಘೋಷಿಸಿದ ಸರ್ಕಾರ; ಷೇರು ಮೌಲ್ಯ ಕುಸಿತ

ರೈಲ್ವೆ ಇಲಾಖೆಯ ವಾರ್ಷಿಕ ಪಿಂಚಣಿ ಮೊತ್ತ 60,000 ಕೋಟಿ ರೂ. ಇದೆ. ಕಳೆದ ವರ್ಷ 59,000 ಕೋಟಿ ರೂ. ಸಬ್ಸಿಡಿ ನೀಡಲಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದ್ದು, ಕೆಲವು ರಾಜ್ಯಗಳ ಬಜೆಟ್​ ಮೊತ್ತಕ್ಕಿಂತಲೂ ಹೆಚ್ಚಿನದ್ದಾಗಿದೆ. ಇಂಧನಕ್ಕೆ 40,000 ಕೋಟಿ ರೂ. ವ್ಯಯಿಸಲಾಗಿದೆ. ವೇತನಕ್ಕಾಗಿ 97,000 ಕೋಟಿ ರೂ. ವೆಚ್ಚವಾಗಿದೆ ಎಂದು ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ದೇಶದ ಎಲ್ಲೆಡೆಯಿಂದಲೂ ಅಯೋಧ್ಯೆಗೆ ರೈಲು ಸಂಪರ್ಕ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ದೇಶದ ಎಲ್ಲ ಕಡೆಗಳಿಂದಲೂ ಅಯೋಧ್ಯೆಯನ್ನು ಸಂಪರ್ಕಿಸಲು ರೈಲು ವ್ಯವಸ್ಥೆ ಮಾಡಲಾಗುವುದು. 41 ಪ್ರಮುಖ ರೈಲು ನಿಲ್ದಾಣಗಳ ಮರು ಅಭಿವೃದ್ಧಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇದನ್ನು ಹಂತಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ರೈಲು ಟಿಕೆಟ್ ಕನ್​ಫರ್ಮ್ ಆಗಿಲ್ಲವೇ? ಈ ಆ್ಯಪ್​ನಲ್ಲಿ ಉಚಿತವಾಗಿ ಸಿಗುತ್ತೆ ಫ್ಲೈಟ್ ಟಿಕೆಟ್!

ಸದ್ಯ ವಂದೇ ಭಾರತ್ ರೈಲುಗಳು ಗರಿಷ್ಠ 500 ಕಿ.ಮೀ. ದೂರ ಕ್ರಮಿಸುತ್ತಿವೆ. ಸ್ಲೀಪಿಂಗ್ ಸೌಲಭ್ಯದ ರೈಲುಗಳು ಆರಂಭಗೊಂಡ ಬಳಿಕ ವಂದೇ ಭಾರತ್ ರೈಲುಗಳು ಹೆಚ್ಚು ದೂರ ಕ್ರಮಿಸಲು ಆರಂಭಿಸಲಿವೆ ಎಂದು ಅವರು ಹೇಳಿದ್ದಾರೆ.

2030ಕ್ಕೆ ಸಂಪೂರ್ಣ ಮಾಲಿನ್ಯಮುಕ್ತ

2030ರ ವೇಳೆಗೆ ಭಾರತೀಯ ರೈಲ್ವೆ ಸಂಪೂರ್ಣವಾಗಿ ಮಾಲಿನ್ಯ ಮುಕ್ತವಾಗಲಿದೆ. ಈ ನಿಟ್ಟಿನಲ್ಲಿ ಕೆಲಸಕಾರ್ಯಗಳು ಸಾಗುತ್ತಿವೆ. ಹೈಡ್ರೋಜನ್ ರೈಲುಗಳನ್ನು ಅಭಿವೃದ್ಧಿಪಡಿಸಲಾವಗುವುದು. ಇವುಗಳನ್ನು ಭಾರತದ ಎಂಜಿನಿಯರ್​​ಗಳೇ ವಿನ್ಯಾಸಗೊಳಿಸಲಿದ್ದಾರೆ ಎಂದು ವೈಷ್ಣವ್ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ