AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಐಫೋನ್ ಫ್ಯಾಕ್ಟರಿಯಲ್ಲಿ ವಿವಾಹಿತ ಮಹಿಳೆಯರಿಗೆ ಇಲ್ಲವಾ ಕೆಲಸ? ತಮಿಳುನಾಡಿನ ಫಾಕ್ಸ್​​ಕಾನ್ ಘಟಕದಲ್ಲಿ ಕೆಲಸಕ್ಕಾಗಿ ಮಹಿಳೆಯರ ಪರದಾಟ

Apple supplier Foxconn's Tamil Nadu Unit says no to married women: ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಫಾಕ್ಸ್​ಕಾನ್ ಘಟಕದಲ್ಲಿ ವಿವಾಹಿತ ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳುವುದಿಲ್ಲವಂತೆ. ಹಾಗಂತ ಅಘೋಷಿತ ನಿಯಮ ಅಲ್ಲಿ ಜಾರಿಯಲ್ಲಿರುವ ಸಂಗತಿಯನ್ನು ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ತನಿಖಾ ವರದಿಯಲ್ಲಿ ಬಯಲಿಗೆ ಎಳೆದಿದೆ. ಮದುವೆಯಾದ ಬಳಿಕ ಗರ್ಭ ಧರಿಸುವುದು, ಮಗು ಮಾಡಿಕೊಳ್ಳುವುದು ಇತ್ಯಾದಿ ಕಾರಣಕ್ಕೆ ಮಹಿಳೆಯರ ಹಾಜರಾತಿ ಕಡಿಮೆಗೊಳ್ಳುತ್ತದೆ ಎಂಬ ಕಾರಣಕ್ಕೆ ಅವರ ನೇಮಕಾತಿ ನಡೆಯುವುದಿಲ್ಲ ಎಂದು ಹೇಳಲಾಗಿದೆ.

ಈ ಐಫೋನ್ ಫ್ಯಾಕ್ಟರಿಯಲ್ಲಿ ವಿವಾಹಿತ ಮಹಿಳೆಯರಿಗೆ ಇಲ್ಲವಾ ಕೆಲಸ? ತಮಿಳುನಾಡಿನ ಫಾಕ್ಸ್​​ಕಾನ್ ಘಟಕದಲ್ಲಿ ಕೆಲಸಕ್ಕಾಗಿ ಮಹಿಳೆಯರ ಪರದಾಟ
ಫಾಕ್ಸ್​ಕಾನ್ ಕಂಪನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 25, 2024 | 6:40 PM

Share

ಚೆನ್ನೈ, ಜೂನ್ 25: ತಮಿಳುನಾಡಿನಲ್ಲಿರುವ ಫಾಕ್ಸ್​ಕಾನ್ ಕಂಪನಿಯ ಘಟಕದಲ್ಲಿ (foxconn unit) ವಿವಾಹಿತ ಮಹಿಳೆಯರಿಗೆ ಕೆಲಸ ಅವಕಾಶ ನಿರಾಕರಿಸಲಾಗಿದೆ ಎನ್ನುವಂತಹ ಸುದ್ದಿ ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ವರದಿಯಾಗಿದೆ. ಆ್ಯಪಲ್ ಕಂಪನಿಗೆ ಐಫೋನ್ ಅಸೆಂಬಲ್ ಮಾಡಿಕೊಡುವ ಫಾಕ್ಸ್​ಕಾನ್​ನ ಶ್ರೀಪೆರಂಬದೂರು ಫ್ಯಾಕ್ಟರಿಯಲ್ಲಿ ಈ ಅಘೋಷಿತ ನಿಯಮ ಜಾರಿಯಲ್ಲಿರುವುದು ತಿಳಿದುಬಂದಿದೆ. ರಾಯ್ಟರ್ಸ್ ಸುದ್ದಿ ಸಂಸ್ಥೆ ಈ ಬಗ್ಗೆ ತನಿಖಾ ವರದಿ ಬಿಡುಗಡೆ ಮಾಡಿದೆ. ಫಾಕ್ಸ್​ಕಾನ್​ನ ಮಾಜಿ ಎಚ್ಆರ್ ಎಕ್ಸಿಕ್ಯೂಟಿವ್ ಎಸ್ ಪೌಲ್ ಎಂಬುವವರೂ ಐಫೋನ್ ಘಟಕದಲ್ಲಿ ವಿವಾಹಿತ ಮಹಿಳೆಯರನ್ನು (married women) ಕೆಲಸಕ್ಕೆ ಸೇರಿಸಿಕೊಳ್ಳದೇ ಇರುವುದು ಹಾಗೂ ಇತರ ಕೆಲ ನಿರ್ಬಂಧಗಳು ಇರುವುದನ್ನು ಖಚಿತಪಡಿಸಿದ್ದಾರೆ.

ವಿವಾಹಿತ ಮಹಿಳೆಯರಿಗೆ ಕೆಲಸ ನಿರಾಕರಿಸಲು ಇವು ಕಾರಣಗಳು…

  • ವಿವಾಹದ ಬಳಿಕ ಮಹಿಳೆಯರಿಗೆ ಹಲವು ಸಮಸ್ಯೆಗಳು ಬರುತ್ತವೆ. ಇದರಿಂದ ಹಾಜರಾತಿ ಕಡಿಮೆ ಇರುತ್ತದೆ
  • ಮದುವೆಯ ಬಳಿಕ ಗರ್ಭ ಧರಿಸುವುದು, ಮಗು ಮಾಡಿಕೊಳ್ಳುವುದರಿಂದ ಹಾಜರಾತಿ ಕಡಿಮೆ ಆಗುತ್ತದೆ.
  • ವಿವಾಹಿತ ಮಹಿಳೆಯರಿಗೆ ಕೌಟುಂಬಿಕ ಜವಾಬ್ದಾರಿ ಹೆಚ್ಚಿರುತ್ತದೆ. ಈ ಕಾರಣಕ್ಕೆ ರಜೆ ಹಾಕುವ ಪ್ರಮಾಣ ಹೆಚ್ಚೇ ಇರುತ್ತದೆ.

ಇದನ್ನೂ ಓದಿ: ಸೋಲಾರ್ ಸೆಲ್​ಗೆ ಚೀನಾ ಮೇಲೆ ಅವಲಂಬನೆ ಇನ್ಮುಂದೆ ಕಡಿಮೆ; ಸ್ವಾವಲಂಬನೆ ಹಾದಿಯಲ್ಲಿ ಭಾರತ

ತಮಿಳುನಾಡಿನಲ್ಲಿರುವ ಹಿಂದೂ ವಿವಾಹಿತ ಮಹಿಳೆಯರ ಕತ್ತಿನಲ್ಲಿ ತಾಳಿಸರ ಇದ್ದೇ ಇರುತ್ತದೆ. ಇದನ್ನು ತೆಗೆಯುವುದು ಅಪಶಕುನ ಎಂಬ ಭಾವನೆ ಇದೆ. ಆದರೆ, ಈ ಆಭರಣ ಧರಿಸುವುದರಿಂದ ಐಫೋನ್ ತಯಾರಿಕೆಯ ಕಾರ್ಯಗಳಿಗೆ ತೊಂದರೆ ಆಗುತ್ತದೆ. ಈ ಕಾರಣಕ್ಕೂ ವಿವಾಹಿತ ಮಹಿಳೆಯರನ್ನು ನೇಮಕ ಮಾಡಿಕೊಳ್ಳಲು ಫಾಕ್ಸ್​ಕಾನ್ ಸಂಸ್ಥೆ ಹಿಂದೇಟು ಹಾಕುತ್ತದೆ ಎಂದು ಹೇಳಲಾಗುತ್ತಿದೆ.

ಫಾಕ್ಸ್​ಕಾನ್​ನ ಮಾಜಿ ಎಚ್​ಆರ್ ಎಕ್ಸಿಕ್ಯೂಟಿವ್ ಎಸ್ ಪೌಲ್ ಅವರು ಮಾತ್ರವಲ್ಲ, ಇನ್ನೂ ಕೆಲ ಮಾಜಿ ಉದ್ಯೋಗಿಗಳು ಈ ನಿರ್ಬಂಧ ಇರುವುದನ್ನು ದೃಢಪಡಿಸಿದ್ದಾರೆ ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ಹೇಳಿದೆ. ಫಾಕ್ಸ್​ಕಾನ್ ಘಟಕಕ್ಕೆ ಆಭ್ಯರ್ಥಿಗಳನ್ನು ಆರಿಸಿ ಇಂಟರ್​ವ್ಯೂಗೆ ಕಳುಹಿಸಲು ಹೈರಿಂಗ್ ಏಜೆನ್ಸಿಗಳಿಗೆ ಗುತ್ತಿಗೆ ಕೊಟ್ಟಿರಲಾಗುತ್ತದೆ. ಈ ಏಜೆನ್ಸಿಗಳಿಗೆ ಮೌಖಿಕವಾಗಿ ನಿರ್ಬಂಧದ ಬಗ್ಗೆ ಸೂಚನೆ ನೀಡಲಾಗಿರುತ್ತದೆ. ಅಲ್ಲಿಂದಲೇ ಅಭ್ಯರ್ಥಿಗಳನ್ನು ಫಿಲ್ಟರ್ ಮಾಡಲಾಗುತ್ತದೆ.

ಇದನ್ನೂ ಓದಿ: ಝೀರೋ ಬ್ಯಾಲನ್ಸ್ ಇರುವ ಪೇಟಿಎಂ ವ್ಯಾಲಟ್​ಗಳು ಬಂದ್ ಆಗಲಿವೆ, ಗಮನಿಸಿ

ದೇಶದ ಕಾನೂನು, ಆ್ಯಪಲ್ ಮತ್ತು ಫಾಕ್ಸ್​ಕಾನ್ ನೀತಿಗಳಿಗೂ ಇದು ವಿರುದ್ಧ

ನೇಮಕಾತಿಯಲ್ಲಿ ವೈವಾಹಿಕ ಸ್ಥಿತಿ ಆಧಾರದಲ್ಲಿ ತಾರತಮ್ಯ ಮಾಡುವುದನ್ನು ಭಾರತದ ಕಾನೂನು ನಿರ್ಬಂಧಿಸುತ್ತದೆ. ಆ್ಯಪಲ್ ಸಂಸ್ಥೆಯಾಗಲೀ, ಫಾಕ್ಸ್​ಕಾನ್ ಸಂಸ್ಥೆಯಾಗಲೀ ಈ ನೀತಿ ಹೊಂದಿಲ್ಲ. ಅವುಗಳ ಸಪ್ಲೈ ಚೈನ್​ನಲ್ಲೂ ಇಂಥದ್ದು ಇರದಂತೆ ನಿಗಾ ವಹಿಸುತ್ತವೆ ಆ ಕಂಪನಿಗಳು. ಆದರೂ ಕೂಡ ಶ್ರೀಪೆರಂಬದರೂರಿನಲ್ಲಿರುವ ಫಾಕ್ಸ್​ಕಾನ್ ಘಟಕದಲ್ಲಿ ವಿವಾಹಿತ ಮಹಿಳೆಯರಿಗೆ ಕೆಲಸ ನಿರಾಕರಿಸುವ ಪದ್ಧತಿಯೊಂದು ಅಘೋಷಿತವಾಗಿ ಚಾಲನೆಯಲ್ಲಿದ್ದಂತಿದೆ. ಈ ಬಗ್ಗೆ ಆ ಘಟಕದ ವತಿಯಿಂದ ಯಾವ ಅಧಿಕೃತ ಹೇಳಿಕೆ ಬಂದಿರುವುದು ಈವರೆಗೆ ಗೊತ್ತಾಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!