RCB: ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

No sale of RCB, clarifies United Spirits: ಆರ್​​ಸಿಬಿಯನ್ನು ಮಾರಾಟ ಮಾಡಲಾಗುತ್ತದೆ ಎನ್ನುವ ಸುದ್ದಿಯನ್ನು ಯುನೈಟೆಡ್ ಸ್ಪಿರಿಟ್ಸ್ ಅಲ್ಲಗಳೆದಿದೆ. ರಾಯಲ್ ಚಾಲೆಂಜರ್ಸ್ ತಂಡವನ್ನು ಮಾರಾಟ ಮಾಡುವ ಯಾವ ಆಲೋಚನೆಯೂ ಇಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರವು ಮದ್ಯದ ಜಾಹೀರಾತು ನಿರ್ಬಂಧಿಸುವ ಕಾರಣದಿಂದ ಆರ್​​ಸಿಬಿಯನ್ನು ಮಾರಬಹುದು ಎನ್ನುವ ಸುದ್ದಿ ಹರಿದಾಡುತ್ತಿತ್ತು. ಈ ಕಾರಣಕ್ಕೆ ಮಾಲೀಕರು ಸ್ಪಷ್ಟನೆ ನೀಡಿದ್ದಾರೆ.

RCB: ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ
ಆರ್​​​ಸಿಬಿ

Updated on: Jun 10, 2025 | 7:03 PM

ಬೆಂಗಳೂರು, ಜೂನ್ 10: ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಫ್ರಾಂಚೈಸಿಯನ್ನು (Royal Challengers Bangalore) ಮಾರಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಕಂಪನಿ (USL- United Spirits Ltd) ತಳ್ಳಿಹಾಕಿದೆ. ಆರ್​​ಸಿಬಿ ತಂಡವನ್ನು ಮಾರಾಟ ಮಾಡಲಾಗುತ್ತದೆ ಎನ್ನುವ ಸುದ್ದಿ ಶುದ್ಧ ಸುಳ್ಳು, ಊಹಾಪೋಹ ಅಷ್ಟೇ. ತಂಡವನ್ನು ಮಾರಾಟ ಮಾಡುತ್ತಿಲ್ಲ ಎಂದು ಆರ್​​ಸಿಬಿಯ ಮಾಲಕಸಂಸ್ಥೆಯಾದ ಯುನೈಟೆಡ್ ಸ್ಪಿರಿಟ್ಸ್ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದೆ.

ಆರ್​​ಸಿಬಿ ತಂಡವನ್ನು ಪೂರ್ಣವಾಗಿಯಾಗಲೀ, ಭಾಗಶಃ ಆಗಿಯಾಗಲೀ ಮಾರಾಟ ಮಾಡುತ್ತಿಲ್ಲ ಎಂದು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಕಂಪನಿ ಹೇಳಿಕೆ ನೀಡಿದೆ.

ಕೇಂದ್ರ ಸರ್ಕಾರವು ಕ್ರೀಡಾಕೂಟಗಳಲ್ಲಿ ತಂಬಾಕು ಮತ್ತು ಮದ್ಯ ಉತ್ಪನ್ನಗಳ ಪ್ರಚಾರ ಮತ್ತು ಜಾಹೀರಾತು ನಡೆಯದಂತೆ ನಿರ್ಬಂಧಿಸಲು ಯೋಜಿಸಿದೆ. ಈ ಹಿನ್ನೆಲೆಯಲ್ಲಿ ಆರ್​​ಸಿಬಿಯನ್ನು ಮಾರುವ ಪರಿಶೀಲನೆಯಲ್ಲಿ ಡಿಯಾಜಿಯೋ ಇದೆ ಎನ್ನುವಂತಹ ಸುದ್ದಿಯನ್ನು ಬ್ಲೂಮ್​ಬರ್ಗ್ ಸುದ್ದಿ ಸಂಸ್ಥೆ ಪ್ರಕಟಿಸಿತ್ತು.

ಇದನ್ನೂ ಓದಿ: ಆರ್​​ಸಿಬಿ ಮಾರಾಟ, 17,000 ಕೋಟಿ ರೂಗೆ? ಫ್ರಾಂಚೈಸಿ ಮಾರುವ ಯೋಚನೆಯಲ್ಲಿದ್ದಾರಾ ಮಾಲೀಕರು?

ಆರ್​​​ಸಿಬಿಯ ಮಾಲೀಕನಾಗಿರುವ ಯುನೈಟೆಡ್ ಸ್ಪಿರಿಟ್ಸ್ ಸಂಸ್ಥೆಯು ಬ್ರಿಟನ್ ಮೂಲದ ಡಿಯಾಜಿಯೋದ ಅಂಗಸಂಸ್ಥೆಯಾಗಿದೆ.

ಬ್ಲೂಮ್​​ಬರ್ಗ್ ವರದಿ ಪ್ರಕಾರ, ಡಿಯಾಜಿಯೋ ಸಂಸ್ಥೆಯು ಆರ್​​ಸಿಬಿಗೆ 2 ಬಿಲಿಯನ್ ಡಾಲರ್ (17,000 ಕೋಟಿ ರೂ) ಮೊತ್ತದ ವ್ಯಾಲ್ಯುಯೇಶನ್ ನಿರೀಕ್ಷಿಸುತ್ತಿದೆ ಎನ್ನಲಾಗಿತ್ತು.

ಐಪಿಎಲ್​​ನ ಆರಂಭದಲ್ಲಿ ಇದ್ದ ಎಂಟು ತಂಡಗಳಲ್ಲಿ ಆರ್​ಸಿಬಿಯೂ ಒಂದು. ಮೊದಲಿಗೆ ವಿಜಯ್ ಮಲ್ಯ ಒಡೆತನದಲ್ಲಿ ಯುನೈಟೆಡ್ ಸ್ಪಿರಿಟ್ಸ್ ಇತ್ತು. ಯುನೈಟೆಡ್ ಸ್ಪಿರಿಟ್ಸ್ ಅನ್ನು ಬ್ರಿಟನ್ ಮೂಲದ ಡಿಯಾಜಿಯೋ ಖರೀದಿ ಮಾಡಿತು. ಆ ಬಳಿಕ ಆರ್​​ಸಿಬಿ ಮಾಲಕತ್ವವು ಡಿಯಾಜಿಯೋ ಕೈಗೆ ಹೋಗಿತ್ತು. 2008ರಿಂದ ಐಪಿಎಲ್ ಆಡುತ್ತಿರುವ ರಾಯಲ್ ಚಾಲೆಂಜ್ಸ್ ತಂಡ ಈ ವರ್ಷ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಪಡೆದಿದೆ.

ಇದನ್ನೂ ಓದಿ: ವಿಜಯ್ ಮಲ್ಯ ಬೇರೆ ಬೇರೆ ದೇಶಗಳಲ್ಲಿ ಹೊಂದಿರುವ ಆಸ್ತಿಗಳೇನು? ಅವುಗಳ ಮೌಲ್ಯವೆಷ್ಟು?

ಆದರೆ, ನಂತರ ನಡೆದ ಸಂಭ್ರಮಾಚರಣೆ ವೇಳೆ ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಿ ನೂಕುನುಗ್ಗಲಾಗಿ 11 ಮಂದಿ ಕಾಲ್ತುಳಿತದಿಂದ ಬಲಿಯಾದ ದುರ್ಘಟನೆಯೂ ಸಂಭವಿಸಿ, ಆರ್​​ಸಿಬಿ ಗೆಲುವಿನಲ್ಲಿ ಕಪ್ಪುಚುಕ್ಕೆ ಎನಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ