AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಣಕಾಸು ವರ್ಷದಲ್ಲೇ 4 ಟ್ರಿಲಿಯನ್ ಡಾಲರ್ ಆರ್ಥಿಕತೆ; ಶೀಘ್ರದಲ್ಲೇ ಜಪಾನ್ ಹಿಂದಿಕ್ಕಲಿದೆ ಭಾರತ: ಸಂಜೀವ್ ಸಾನ್ಯಾಲ್

Sanjeev Sanyal on Indian Economy: ಭಾರತದ ಆರ್ಥಿಕತೆ ಈ ಹಣಕಾಸು ವರ್ಷದಲ್ಲಿ 4 ಟ್ರಿಲಿಯನ್ ಡಾಲರ್ ಗಡಿ ದಾಟುತ್ತದೆ. ಮುಂದಿನ ಹಣಕಾಸು ವರ್ಷದ ಆರಂಭದಲ್ಲಿ ಜಪಾನ್ ಆರ್ಥಿಕತೆಯನ್ನು ಮೀರಬಹುದು. ಈ ವರ್ಷವೇ ಜಪಾನ್ ಅನ್ನು ದಾಟಿ ಹೋದರೂ ಅಚ್ಚರಿ ಇಲ್ಲ ಎಂದು ಪ್ರಧಾನಿಗಳ ಆರ್ಥಿಕ ಸಲಹೆಗಾರರ ಮಂಡಳಿ ಸದಸ್ಯ ಸಂಜೀವ್ ಸಾನ್ಯಾಲ್ ಅಭಿಪ್ರಾಯಪಟ್ಟಿದ್ದಾರೆ. ಕುತೂಹಲ ಎಂದರೆ ಭಾರತ ಶೇ. 7ರ ದರದಲ್ಲಿ ಆರ್ಥಿಕ ವೃದ್ಧಿ ಕಾಣುವುದೂ ಕೂಡ ಉತ್ತಮವೇ ಅಂತೆ.

ಈ ಹಣಕಾಸು ವರ್ಷದಲ್ಲೇ 4 ಟ್ರಿಲಿಯನ್ ಡಾಲರ್ ಆರ್ಥಿಕತೆ; ಶೀಘ್ರದಲ್ಲೇ ಜಪಾನ್ ಹಿಂದಿಕ್ಕಲಿದೆ ಭಾರತ: ಸಂಜೀವ್ ಸಾನ್ಯಾಲ್
ಸಂಜೀವ್ ಸಾನ್ಯಾಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 16, 2024 | 6:54 PM

Share

ನವದೆಹಲಿ, ಮೇ 16: ಈ ಹಣಕಾಸು ವರ್ಷದಲ್ಲೇ (2024-25) ಭಾರತದ ಆರ್ಥಿಕತೆ (Indian economy) 4 ಟ್ರಿಲಿಯನ್ ಗಡಿ ದಾಟುತ್ತದೆ. ಮಂದಿನ ಹಣಕಾಸು ವರ್ಷದ ಆರಂಭಿಕ ಹಂತದಲ್ಲೇ ಜಪಾನ್ ಆರ್ಥಿಕತೆಯನ್ನು ಮೀರಿಸಿ ಭಾರತ ಬೆಳೆಯಲಿದೆ ಎಂದು ಪ್ರಧಾನಿಯ ಆರ್ಥಿಕ ಸಲಹೆಗಾರರಲ್ಲೊಬ್ಬರಾದ ಸಂಜೀವ್ ಸಾನ್ಯಾಲ್ ಹೇಳಿದ್ದಾರೆ. ದುರ್ಬಲ ರಫ್ತು ಸೇರಿದಂತೆ ವಿವಿಧ ಸವಾಲುಗಳ ಮಧ್ಯೆ ಭಾರತ ಶೇ 7ರಷ್ಟು ಜಿಡಿಪಿ ವೃದ್ಧಿ ತೋರುವುದು ನಿಜಕ್ಕೂ ಅದ್ವಿತೀಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭಾರತ ಶೇ. 10ರಷ್ಟು ಬೆಳವಣಿಗೆ ಸಾಧಿಸುವ ಸಾಮರ್ಥ್ಯ ಹೊಂದಿದೆ ಎಂದು ವಿವಿಧ ಆರ್ಥಿಕ ತಜ್ಞರು ಹೇಳಿರುವ ಹಿನ್ನೆಲೆಯಲ್ಲಿ ಸಾನ್ಯಾಲ್ ಅಭಿಪ್ರಾಯ ಮತ್ತೊಂದು ಎಳೆಯನ್ನು ತೆರೆದಿಟ್ಟಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತ 2027ರ ವೇಳೆ ಜಪಾನ್ ಮತ್ತು ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ನಿರೀಕ್ಷೆ ಇದೆ ಎಂದು ಇತ್ತೀಚೆಗೆ ಹೇಳಿದ್ದರು. ಸದ್ಯ ಭಾರತ 3.7 ಟ್ರಿಲಿಯನ್ ಡಾಲರ್ ಜಿಡಿಪಿಯೊಂದಿಗೆ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಿದೆ.

ಜರ್ಮನಿ 4.6 ಟ್ರಿಲಿಯನ್ ಡಾಲರ್ ಜಿಡಿಪಿ ಹೊಂದಿದೆ. ಜಪಾನ್ ಬಳಿ 4.1 ಟ್ರಿಲಿಯನ್ ಡಾಲರ್ ಜಿಡಿಪಿ ಇದೆ. ಜಪಾನ್ ಮತ್ತು ಜರ್ಮನಿ ಎರಡೂ ಕೂಡ ಹೆಚ್ಚು ವೇಗದಲ್ಲಿ ಆರ್ಥಿಕ ವೃದ್ಧಿ ಕಾಣುತ್ತಿಲ್ಲ. ಜಪಾನ್ ಸಾಕಷ್ಟು ಸಮಸ್ಯೆಗಳಿಂದ ನಲುಗುತ್ತಿದೆ. ಸಾನ್ಯಾಲ್ ಪ್ರಕಾರ ಮುಂದಿನ ವರ್ಷದ ಆರಂಭದಲ್ಲಿ ಜಪಾನ್ ಅನ್ನು ಭಾರತ ಹಿಂದಿಕ್ಕಬಹುದು. ಈ ವರ್ಷವೇ ಅದು ಸಾಧ್ಯವಾದರೂ ಅಚ್ಚರಿ ಇಲ್ಲ ಎಂಬುದು ಅವರ ಅನಿಸಿಕೆ.

ಇದನ್ನೂ ಓದಿ: ನೀವು ಸ್ಲೀಪಿಂಗ್ ಪಾರ್ಟ್ನರ್, ನಾನು ವರ್ಕಿಂಗ್ ಪಾರ್ಟ್ನರ್: ಸಭಿಕರೊಬ್ಬರ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ಬೌಲ್ಡ್

‘ಈ ವರ್ಷವೇ ಜಪಾನ್ ಅನ್ನು ಭಾರತ ಹಿಂದಿಕ್ಕಿದರೆ ಆಶ್ಚರ್ಯ ಇಲ್ಲ. ಇನ್ನೆರಡು ವರ್ಷದಲ್ಲಿ ನಾವು ಜರ್ಮನಿಗಿಂತ ಮೇಲೆ ಹೋಗಬಹುದು. ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ದಿನ ಸಮೀಪವೇ ಇದೆ’ ಎಂದು ಪ್ರಧಾನಿಗಳ ಆರ್ಥಿಕ ಸಲಹೆಗಾರರ ಮಂಡಳಿ ಸದಸ್ಯರಾದ ಅವರು ಹೇಳಿದ್ದಾರೆ.

ಆತುರ ಬೇಡ ಎಂದು ಸರ್ಕಾರಕ್ಕೆ ಸಾನ್ಯಾಲ್ ಸಲಹೆ

ದೇಶವು ಶೇ. 8ರಿಂದ 9ರಷ್ಟು ವೇಗದಲ್ಲಿ ಆರ್ಥಿಕ ವೃದ್ಧಿ ಕಾಣಬೇಕು ಎಂದು ಕೇಳಿಬರುತ್ತಿರುವ ಸಲಹೆಗಳನ್ನು ಸಂಜೀವ್ ಸಾನ್ಯಾಲ್ ತಳ್ಳಿ ಹಾಕುತ್ತಾರೆ. ಸರ್ಕಾರ ಶೇ. 8-9ರಷ್ಟು ಜಿಡಿಪಿ ವೃದ್ಧಿಯಾಗಬೇಕೆಂದು ಯಾವುದೇ ಹಣಕಾಸು ಕ್ರಮಕ್ಕೆ ಮುಂದಾಗದಿರುವುದು ಒಳ್ಳೆಯದು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಎಚ್​ಎಎಲ್ ಮತ್ತು ಗೇಲ್ ಭರ್ಜರಿ ಲಾಭ; ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಉತ್ತಮ ಹಣಕಾಸು ಸಾಧನೆ

ಶೇ. 9ರ ಬೆಳವಣಿಗೆ ಸಾಧಿಸಬೇಕೆಂದು ತೀರಾ ಬಯಸುವುದು ಬೇಡ. ಅಷ್ಟು ವೇಗ ಸಿಕ್ಕರೆ ಅದ್ಭುತವೇ. ಆದರೆ, ನಿರಂತರವಾಗಿ ಶೇ. 7ರ ದರದಲ್ಲಿ ಬೆಳೆಯುವುದೂ ಕೂಡ ಉತ್ತಮವೇ. ಇದರಿಂದ ಉದ್ಯೋಗ ಸೃಷ್ಟಿಯಾಗುತ್ತದೆ, ತೆರಿಗೆ ಸಂಗ್ಹರ ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?