AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Insurance Policy Tax: ವಿಮಾದಾರರಿಗೆ ಶಾಕ್ ನೀಡಿದ ಬಜೆಟ್; 5 ಲಕ್ಷ ರೂ.ಗಿಂತ ಹೆಚ್ಚಿನ ವಿಮೆಗೆ ಸಿಗಲ್ಲ ತೆರಿಗೆ ವಿನಾಯಿತಿ

Budget 2023; ಒಂದು ಅಥವಾ ಅದಕ್ಕಿಂತ ಹೆಚ್ಚಿನ ಎಷ್ಟೇ ವಿಮಾ ಪಾಲಿಸಿಗಳನ್ನು ಹೊಂದಿದ್ದರೂ ವರ್ಷದ ಅವಧಿಯಲ್ಲಿ ಅದರ ಪ್ರೀಮಿಯಂ ಮೊತ್ತ 5 ಲಕ್ಷ ರೂ. ದಾಟಿದ್ದರೆ ಅದಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ.

Insurance Policy Tax: ವಿಮಾದಾರರಿಗೆ ಶಾಕ್ ನೀಡಿದ ಬಜೆಟ್; 5 ಲಕ್ಷ ರೂ.ಗಿಂತ ಹೆಚ್ಚಿನ ವಿಮೆಗೆ ಸಿಗಲ್ಲ ತೆರಿಗೆ ವಿನಾಯಿತಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 02, 2023 | 12:11 PM

ನವದೆಹಲಿ: ವಿಮಾ ಕ್ಷೇತ್ರಕ್ಕೆ ಪೂರಕ ಘೋಷಣೆಗಳಾಗಬಹುದು, ತೆರಿಗೆ ವಿನಾಯಿತಿ ಮಿತಿ ಹೆಚ್ಚಳವಾಗಬಹುದು ಎಂದು ನಿರೀಕ್ಷಿಸುತ್ತಿದ್ದವರಿಗೆ ಬಜೆಟ್(Budget 2023) ನಿರಾಸೆ ಮೂಡಿಸಿದ್ದು, ಆಘಾತ ನೀಡಿದೆ. 5 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ ವಿಮೆಗೆ ತೆರಿಗೆ ವಿನಾಯಿತಿ (Tax exemption) ಇರುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಯೂನಿಟ್ ಲಿಂಕ್ಡ್ ಇನ್ಶೂರೆನ್ಸ್ ಪ್ಲಾನ್​ಗಳನ್ನು ಹೊರತುಪಡಿಸಿ 5 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ ಜೀವ ವಿಮಾ ಪಾಲಿಸಿಗಳಿಗೆ ತೆರಿಗೆ ವಿನಾಯಿತಿ ನೀಡುವುದು 2023ರ ಏಪ್ರಿಲ್ 1ರಿಂದ ಸ್ಥಗಿತಗೊಳ್ಳಲಿದೆ ಎಂದು ಬಜೆಟ್​ನಲ್ಲಿ ಉಲ್ಲೇಖಿಸಲಾಗಿದೆ. ವಿಮೆ ಹೊಂದಿರುವ ವ್ಯಕ್ತಿ ಮೃತಪಟ್ಟಾಗ ದೊರೆಯುವ ಮೊತ್ತಕ್ಕೆ ಪರಿಷ್ಕೃತ ನಿಯಮ ಅನ್ವಯವಾಗುವುದಿಲ್ಲ ಎಂದೂ ತಿಳಿಸಲಾಗಿದೆ. ಹೊಸ ತೆರಿಗೆ ನಿಯಮ 2023ರ ಮಾರ್ಚ್​ 31ರ ಒಳಗೆ ಅವಧಿಪೂರ್ಣಗೊಳ್ಳುವ ವಿಮಾ ಪಾಲಿಸಿಗಳಿಗೆ ಅನ್ವಯವಾಗುವುದಿಲ್ಲ.

ಒಂದು ಅಥವಾ ಅದಕ್ಕಿಂತ ಹೆಚ್ಚಿನ ಎಷ್ಟೇ ವಿಮಾ ಪಾಲಿಸಿಗಳನ್ನು ಹೊಂದಿದ್ದರೂ ವರ್ಷದ ಅವಧಿಯಲ್ಲಿ ಅದರ ಪ್ರೀಮಿಯಂ ಮೊತ್ತ 5 ಲಕ್ಷ ರೂ. ದಾಟಿದ್ದರೆ ಅದಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ‘ಕ್ಲಿಯರ್’ ಸಿಇಒ ಅರ್ಚಿತ್ ಗುಪ್ತಾ ತಿಳಿಸಿರುವುದಾಗಿ ‘ಮನಿ ಕಂಟ್ರೋಲ್’ ವರದಿ ಮಾಡಿದೆ. ಮುಂದಿನ ಹಣಕಾಸು ವರ್ಷಕ್ಕೆ ಮಾಡಿಸಿಕೊಳ್ಳುವ ವಿಮೆಗೆ ಹೊಸ ನಿಯಮ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

2.5 ಲಕ್ಷ ರೂ.ಗಿಂತ ಹೆಚ್ಚು ಮೊತ್ತದ ಯೂನಿಟ್ ಲಿಂಕ್ಡ್ ಇನ್ಶೂರೆನ್ಸ್ ಪ್ಲಾನ್​​ಗಳ ತೆರಿಗೆ ವಿನಾಯಿತಿಯನ್ನು 2021ರ ಬಜೆಟ್​ನಲ್ಲೇ ರದ್ದುಗೊಳಿಸಲಾಗಿತ್ತು. ಇದೀಗ 5 ಲಕ್ಷ ರೂ.ಗಿಂತ ಹೆಚ್ಚಿನ ಪ್ರೀಮಿಯಂ ಮೊತ್ತದ ವಿಮೆಗೆ ತೆರಿಗೆ ವಿನಾಯಿತಿ ರದ್ದುಗೊಳಿಸಿರುವ ಸರ್ಕಾರದ ನಡೆ ವಿಮಾ ಕ್ಷೇತ್ರದ ಕಂಪನಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್​ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಬಂಪರ್: ಏನಿದು ಯೋಜನೆ? ಯಾರಿಗೆಲ್ಲ ಲಾಭ?

ಹೊಸ ನಿಯಮದಿಂದಾಗಿ ಜನರು ಸಾಂಪ್ರದಾಯಿಕ ಜೀವ ವಿಮೆ ಮಾಡಿಸಿಕೊಳ್ಳುವ ಬದಲು ಟರ್ಮ್ ಇನ್ಶೂರೆನ್ಸ್​ ಬಗ್ಗೆ ಹೆಚ್ಚು ಗಮನಹರಿಸುವ ಸಾಧ್ಯತೆ ಇದೆ. ಇದರಿಂದ ಜನರು ಸಂಪೂರ್ಣವಾಗಿ ಹೂಡಿಕೆ ಆಧಾರಿತ ಯೂನಿಟ್ ಲಿಂಕ್ಡ್ ಇನ್ಶೂರೆನ್ಸ್ ಪ್ಲಾನ್​​ಗಳ ಕಡೆಗೆ ಒಲವು ಹೆಚ್ಚಾಗುವ ಕಳವಳ ವ್ಯಕ್ತವಾಗಿದೆ ಎಂದು ಇನ್ಶೂರೆನ್ಸ್ ಮಧ್ಯವರ್ತಿ ಕಂಪನಿ ‘ಸೆಕ್ಯೂರ್ ನೌ’ ಸ್ಥಾಪಕ ಕಪಿಲ್ ಮೆಹ್ತಾ ಹೇಳಿದ್ದಾರೆ.

ಬಜೆಟ್​ಗೂ ಮುನ್ನ ವಿಮಾ ಕಂಪನಿಗಳು ಜೀವ ವಿಮೆಗೆ ಪ್ರತ್ಯೇಕ ತೆರಿಗೆ ಕಡಿತ ಹಾಗೂ ಆರೋಗ್ಯ ವಿಮೆಗೆ ಹೆಚ್ಚಿನ ತೆರಿಗೆ ವಿನಾಯಿತಿಯನ್ನು ನಿರೀಕ್ಷಿಸಿದ್ದವು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Thu, 2 February 23

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್